AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ಡ್ರಗ್ಸ್ ನಂಟು: ರಿಕ್ಕಿ ರೈ ಬಾಯ್ಬಿಟ್ಟ ಆ ‘ಮಾದಕ’ ನಟಿ ಯಾರು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸದ್ಯ ಈಗ ರಿಕ್ಕಿ ರೈ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾನೆ. ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ಕೇಳಿದಾಗ ‘ಮಾದಕ’ ನಟಿ ಹೆಸರು ಹೊರಬಿದ್ದಿದೆ. ಆ ನಟಿ ನನಗೆ ಕ್ಲೋಸ್ ಫ್ರೆಂಡ್ ಆಗಿದ್ದಾರೆ. ನಾವು ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದು ನಿಜ, ಆಕೆ ನನಗೆ ಒಳ್ಳೆಯ ಸ್ನೇಹಿತೆ. […]

ಸ್ಯಾಂಡಲ್​ವುಡ್ ಡ್ರಗ್ಸ್ ನಂಟು: ರಿಕ್ಕಿ ರೈ ಬಾಯ್ಬಿಟ್ಟ ಆ 'ಮಾದಕ' ನಟಿ ಯಾರು?
ಆಯೇಷಾ ಬಾನು
|

Updated on: Oct 08, 2020 | 9:24 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸದ್ಯ ಈಗ ರಿಕ್ಕಿ ರೈ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾನೆ.

ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ಕೇಳಿದಾಗ ‘ಮಾದಕ’ ನಟಿ ಹೆಸರು ಹೊರಬಿದ್ದಿದೆ. ಆ ನಟಿ ನನಗೆ ಕ್ಲೋಸ್ ಫ್ರೆಂಡ್ ಆಗಿದ್ದಾರೆ. ನಾವು ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದು ನಿಜ, ಆಕೆ ನನಗೆ ಒಳ್ಳೆಯ ಸ್ನೇಹಿತೆ. ಆ ನಟಿ ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪಂಚ ಭಾಷಾ ತಾರೆಯಾಗಿದ್ದಾಳೆ. ಆ ನಟಿಯ ಜೊತೆಯಲ್ಲಿ ಸಾಕಷ್ಟು ಬಾರಿ ಪಾರ್ಟಿಗಳನ್ನ ಮಾಡಿದ್ದೇವೆ ಎಂಬ ಮಾಹಿತಿಯನನ್ನು ರಿಕ್ಕಿ ರೈ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ.

ಆದಿತ್ಯ ಆಳ್ವಾ ಜೊತೆಗೂ ಈ ಪಂಚಭಾಷಾ ನಟಿಗೆ ಇದ್ಯಾ ಡ್ರಗ್ಸ್ ಲಿಂಕ್..? ಇನ್ನು ರಿಕ್ಕಿ ಬಹಿರಂಗ ಪಡಿಸಿದ ಪಂಚಭಾಷಾ ನಟಿಗೆ ಆದಿತ್ಯ ಆಳ್ವಾ ಜೊತೆಗೂ ನಂಟಿದೆಯಂತೆ. ಪಾರ್ಟಿಗಳಲ್ಲಿ ಆ ನಟಿ ಪಾಲ್ಗೊಳ್ಳುತ್ತಿದ್ದ ಬಗ್ಗೆ ರಿಕ್ಕಿ ರೈ ಮಾಹಿತಿ ನೀಡಿದ್ದಾನೆ. ಹಾಗೂ ಆದಿತ್ಯ ಆಳ್ವಾ ಪಾರ್ಟಿಗಳಲ್ಲಿ ನಾನು ಮತ್ತು ಆ ನಟಿ ಭಾಗವಹಿಸ್ತಿದ್ದಿದ್ದು ನಿಜ.

ಆದ್ರೆ ನಾವಿಬ್ಬರೂ ಯಾವುದೇ ಡ್ರಗ್ಸ್ ತೆಗೆದುಕೊಂಡಿಲ್ಲ ಎಂದು ರಿಕ್ಕಿ ರೈ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಆದರೆ ರಿಕ್ಕಿ ರೈ ಹೇಳಿಕೆಗೂ ಸಿಕ್ಕಿರೋ ಸಾಕ್ಷಿಗಳಿಗೂ ತಾಳೆಯಾಗುತ್ತಿಲ್ಲ ಎಂದು ಸಿಸಿಬಿ ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದಾರೆ. ಆದ್ರೆ ರಿಕ್ಕಿ ರೈ ಡ್ರಗ್ಸ್ ತೆಗೆದುಕೊಳ್ತಿದ್ದ ಬಗ್ಗೆ ಸಾಕ್ಷಿ ಇದೆ ಎಂದು ಸಿಸಿಬಿ ಸ್ಪಷ್ಟಪಡಿಸಿದೆ. ಮೊಬೈಲ್ ಫೊನ್​ನಲ್ಲಿ ಸಿಕ್ಕ ಸಾಕ್ಷಿಗೂ ರಿಕ್ಕಿ ಹೇಳಿಕೆಗೂ ತಾಳೆಯಾಗುತ್ತಿಲ್ಲ ಹೀಗಾಗಿ ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ರಿಕ್ಕಿ ರೈಗೆ ಸೂಚನೆ ನೀಡಲಾಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ