AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್ ಡ್ರಗ್ಸ್ ನಂಟು: ರಿಕ್ಕಿ ರೈ ಬಾಯ್ಬಿಟ್ಟ ಆ ‘ಮಾದಕ’ ನಟಿ ಯಾರು?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸದ್ಯ ಈಗ ರಿಕ್ಕಿ ರೈ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾನೆ. ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ಕೇಳಿದಾಗ ‘ಮಾದಕ’ ನಟಿ ಹೆಸರು ಹೊರಬಿದ್ದಿದೆ. ಆ ನಟಿ ನನಗೆ ಕ್ಲೋಸ್ ಫ್ರೆಂಡ್ ಆಗಿದ್ದಾರೆ. ನಾವು ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದು ನಿಜ, ಆಕೆ ನನಗೆ ಒಳ್ಳೆಯ ಸ್ನೇಹಿತೆ. […]

ಸ್ಯಾಂಡಲ್​ವುಡ್ ಡ್ರಗ್ಸ್ ನಂಟು: ರಿಕ್ಕಿ ರೈ ಬಾಯ್ಬಿಟ್ಟ ಆ 'ಮಾದಕ' ನಟಿ ಯಾರು?
ಆಯೇಷಾ ಬಾನು
|

Updated on: Oct 08, 2020 | 9:24 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಪ್ರಕರಣ ಸಂಬಂಧ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಸದ್ಯ ಈಗ ರಿಕ್ಕಿ ರೈ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾನೆ.

ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ಕೇಳಿದಾಗ ‘ಮಾದಕ’ ನಟಿ ಹೆಸರು ಹೊರಬಿದ್ದಿದೆ. ಆ ನಟಿ ನನಗೆ ಕ್ಲೋಸ್ ಫ್ರೆಂಡ್ ಆಗಿದ್ದಾರೆ. ನಾವು ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದು ನಿಜ, ಆಕೆ ನನಗೆ ಒಳ್ಳೆಯ ಸ್ನೇಹಿತೆ. ಆ ನಟಿ ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪಂಚ ಭಾಷಾ ತಾರೆಯಾಗಿದ್ದಾಳೆ. ಆ ನಟಿಯ ಜೊತೆಯಲ್ಲಿ ಸಾಕಷ್ಟು ಬಾರಿ ಪಾರ್ಟಿಗಳನ್ನ ಮಾಡಿದ್ದೇವೆ ಎಂಬ ಮಾಹಿತಿಯನನ್ನು ರಿಕ್ಕಿ ರೈ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ.

ಆದಿತ್ಯ ಆಳ್ವಾ ಜೊತೆಗೂ ಈ ಪಂಚಭಾಷಾ ನಟಿಗೆ ಇದ್ಯಾ ಡ್ರಗ್ಸ್ ಲಿಂಕ್..? ಇನ್ನು ರಿಕ್ಕಿ ಬಹಿರಂಗ ಪಡಿಸಿದ ಪಂಚಭಾಷಾ ನಟಿಗೆ ಆದಿತ್ಯ ಆಳ್ವಾ ಜೊತೆಗೂ ನಂಟಿದೆಯಂತೆ. ಪಾರ್ಟಿಗಳಲ್ಲಿ ಆ ನಟಿ ಪಾಲ್ಗೊಳ್ಳುತ್ತಿದ್ದ ಬಗ್ಗೆ ರಿಕ್ಕಿ ರೈ ಮಾಹಿತಿ ನೀಡಿದ್ದಾನೆ. ಹಾಗೂ ಆದಿತ್ಯ ಆಳ್ವಾ ಪಾರ್ಟಿಗಳಲ್ಲಿ ನಾನು ಮತ್ತು ಆ ನಟಿ ಭಾಗವಹಿಸ್ತಿದ್ದಿದ್ದು ನಿಜ.

ಆದ್ರೆ ನಾವಿಬ್ಬರೂ ಯಾವುದೇ ಡ್ರಗ್ಸ್ ತೆಗೆದುಕೊಂಡಿಲ್ಲ ಎಂದು ರಿಕ್ಕಿ ರೈ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಆದರೆ ರಿಕ್ಕಿ ರೈ ಹೇಳಿಕೆಗೂ ಸಿಕ್ಕಿರೋ ಸಾಕ್ಷಿಗಳಿಗೂ ತಾಳೆಯಾಗುತ್ತಿಲ್ಲ ಎಂದು ಸಿಸಿಬಿ ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದಾರೆ. ಆದ್ರೆ ರಿಕ್ಕಿ ರೈ ಡ್ರಗ್ಸ್ ತೆಗೆದುಕೊಳ್ತಿದ್ದ ಬಗ್ಗೆ ಸಾಕ್ಷಿ ಇದೆ ಎಂದು ಸಿಸಿಬಿ ಸ್ಪಷ್ಟಪಡಿಸಿದೆ. ಮೊಬೈಲ್ ಫೊನ್​ನಲ್ಲಿ ಸಿಕ್ಕ ಸಾಕ್ಷಿಗೂ ರಿಕ್ಕಿ ಹೇಳಿಕೆಗೂ ತಾಳೆಯಾಗುತ್ತಿಲ್ಲ ಹೀಗಾಗಿ ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ರಿಕ್ಕಿ ರೈಗೆ ಸೂಚನೆ ನೀಡಲಾಗಿದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ