AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಂಕ್ ದಿ ಯಂಗ್​’ ಚಿತ್ರಕ್ಕೆ ರಿಷಬ್​ ಶೆಟ್ಟಿ, ಭಾ. ಮ. ಹರೀಶ್​ ಬೆಂಬಲ; ಪೋಸ್ಟರ್​ ರಿಲೀಸ್​

Monk The Young: ಶೀಘ್ರದಲ್ಲೇ ‘ಮಾಂಕ್ ದಿ ಯಂಗ್​’ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸದ್ಯ ಪೋಸ್ಟರ್​ ಮೂಲಕ ಗಮನ ಸೆಳೆಯಲು ಪ್ರಯತ್ನಿಸಲಾಗಿದೆ.

‘ಮಾಂಕ್ ದಿ ಯಂಗ್​’ ಚಿತ್ರಕ್ಕೆ ರಿಷಬ್​ ಶೆಟ್ಟಿ, ಭಾ. ಮ. ಹರೀಶ್​ ಬೆಂಬಲ; ಪೋಸ್ಟರ್​ ರಿಲೀಸ್​
‘ಮಾಂಕ್ ದಿ ಯಂಗ್’ ಚಿತ್ರದ ಸುದ್ದಿಗೋಷ್ಠಿ
TV9 Web
| Edited By: |

Updated on: Aug 06, 2022 | 7:15 AM

Share

ನಟ-ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರು ಕನ್ನಡ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡಿದ್ದಾರೆ. ಹೊಸಬರ ಅನೇಕ ಸಿನಿಮಾಗಳಿಗೆ ಅವರು ಬೆಂಬಲ ನೀಡುತ್ತಾರೆ. ಇತ್ತೀಚೆಗೆ ಅವರು ‘ಮಾಂಕ್ ದಿ ಯಂಗ್’ (Monk The Young) ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಿದರು. ಅವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ. ಮ. ಹರೀಶ್ (Ba Ma Harish) ಸಾಥ್​ ನೀಡಿದರು. ಇಬ್ಬರೂ ಸೇರಿ ಈ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಹೊಸಬರೇ ಸೇರಿಕೊಂಡು ‘ಮಾಂಕ್ ದಿ ಯಂಗ್’ ಸಿನಿಮಾ ತಯಾರಿಸಿದ್ದಾರೆ. ಫ್ಯಾಂಟಸಿ-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಯಕನಾಗಿ ಸರೋವರ್ ಹಾಗೂ ನಾಯಕಿಯಾಗಿ ಸೌಂದರ್ಯಾ ಗೌಡ ಅಭಿನಯಿಸಿದ್ದಾರೆ.

‘ಮಾಂಕ್ ದಿ ಯಂಗ್’ ಚಿತ್ರಕ್ಕೆ ಮಾಸ್ಚಿತ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಇದು ಅವರಿಗೆ ಚೊಚ್ಚಲ ಸಿನಿಮಾ. ವಿಶೇಷ ಎಂದರೆ ಈ ಸಿನಿಮಾಗೆ ಐವರು ನಿರ್ಮಾಪಕರು. ಐವರೂ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಅಂತ್ಯವಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್‌ ಕೆಲಸಗಳು ನಡೆಯುತ್ತಿದೆ. ಸದ್ಯದಲ್ಲೇ ಈ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

‘ಎಲ್ಲರು ತಮ್ಮ ಸಿನಿಮಾ ಡಿಫರೆಂಟ್​ ಆಗಿದೆ ಎನ್ನುತ್ತಾರೆ. ಅದೇ ರೀತಿ ನಾವು ಹೇಳುತ್ತೇವೆ. ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಮಾಡ್ತೀವಿ. ಅದನ್ನು ನೋಡಿ ಜನರೇ ತೀರ್ಮಾನಿಸಲಿ’ ಎಂದು ಆತ್ಮವಿಶ್ವಾಸದ ಮಾತುಗಳನ್ನು ಆಡಿದ್ದಾರೆ ಚಿತ್ರದ ನಿರ್ಮಾಪಕ ಹಾಗೂ ನಾಯಕ ಸರೋವರ. ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ರಿಷಬ್​ ಶೆಟ್ಟಿ ಹಾಗೂ ಭಾ. ಮ. ಹರೀಶ್ ಅವರಿಗೆ ‘ಮಾಂಕ್ ದಿ ಯಂಗ್’ ಸಿನಿಮಾ ತಂಡದವರು ಧನ್ಯವಾದ ಅರ್ಪಿಸಿದ್ದಾರೆ. ಹಿರಿಯ ನಟಿ ಉಷಾ ಭಂಡಾರಿ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ
Image
Prashanth Neel: ಕಿಚ್ಚ ಸುದೀಪ್​, ‘ವಿಕ್ರಾಂತ್ ರೋಣ’ ತಂಡಕ್ಕೆ ವಿಶ್ ಮಾಡಿದ ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​
Image
Vikrant Rona Twitter Review: ‘ಇದು ಬೆಸ್ಟ್​​ 3ಡಿ ಅನುಭವ’: ವಿಕ್ರಾಂತ್​ ರೋಣ ನೋಡಿ ಮೆಚ್ಚಿದ ಫ್ಯಾನ್ಸ್​
Image
Vikrant Rona: ತ್ರಿನೇತ್ರ ಚಿತ್ರಮಂದಿರದಲ್ಲಿ 3ಡಿ ಸಮಸ್ಯೆ; ‘ವಿಕ್ರಾಂತ್​ ರೋಣ’ ನೋಡಲು ಬಂದ ಫ್ಯಾನ್ಸ್​ ಆಕ್ರೋಶ
Image
Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ

ಸೇನೆಯಲ್ಲಿ ಕೆಲಸ ಮಾಡಿ ಬಂದಿರುವ ಕರ್ನಲ್ ರಾಜೇಂದ್ರನ್ ಅವರು ಈ ಸಿನಿಮಾದ ನಿರ್ಮಾಪಕರಲ್ಲೊಬ್ಬರು. ‘ನಾನು 17ನೇ ವಯಸ್ಸಿನಲ್ಲೇ ಆರ್ಮಿ ಸೇರಿದೆ. 40 ವರ್ಷಗಳು ಅಲ್ಲಿ ಸೇವೆ ಸಲ್ಲಿಸಿದ್ದೇನೆ. ಅಲ್ಲಿಂದ ಬಂದ ಮೇಲೆ ನನಗೆ ಸಿನಿಮಾದಲ್ಲಿ ನಟಿಸುವ ಆಸೆ ಆಯಿತು. ಈ ಹಿಂದೆ ಕೂಡ ಒಂದು ಚಿತ್ರದಲ್ಲಿ ಅಭಿನಯಿಸಿದ್ದೆ. ಇದು 2ನೇ ಸಿನಿಮಾ. ಈ ಚಿತ್ರದ ಪಾತ್ರ ಕೂಡ ಚೆನ್ನಾಗಿದೆ’ ಎಂದು ಕರ್ನಲ್ ರಾಜೇಂದ್ರನ್ ಹೇಳಿದ್ದಾರೆ.

ನಿರ್ಮಾಪಕರು ಹಾಗೂ ನಟರೂ ಆಗಿರುವ ವಿನಯ್ ಬಾಬು ರೆಡ್ಡಿ, ಲಾಲ್ ಚಂದ್, ಗೋಪಿ ಚಂದ್ ಮತ್ತು ನಾಯಕಿ ಸೌಂದರ್ಯಾ ಗೌಡ ಅವರು ಪೋಸ್ಟರ್​ ಬಿಡುಗಡೆಯ ಸುದ್ದಿಗೋಷ್ಠಿಯಲ್ಲಿ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಸಿವಿಲ್ ಎಂಜಿನಿಯರಿಂಗ್ ಓದಿ, ಹೈದರಾಬಾದ್​ನಲ್ಲಿ ಕೆಲಸ ಮಾಡುತ್ತಿದ್ದ ಸೌಂದರ್ಯಾ ಗೌಡ ಅವರು ಸಿನಿಮಾ ಮೇಲಿನ ಆಸಕ್ತಿಯಿಂದ ಕೆಲಸ ಬಿಟ್ಟು ಚಿತ್ರರಂಗಕ್ಕೆ ಬಂದಿದ್ದಾರೆ. ಇದು ಅವರ ಮೊದಲ ಸಿನಿಮಾ. ಮಾಡೆಲ್​ ಆಗಿಯೂ ಅವರು ಗುರುತಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್