AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ರೂ’ ಚಿತ್ರಕ್ಕೆ ಬೆಂಗಳೂರು ಸಿನಿಮೋತ್ಸವದಲ್ಲಿ ಇಲ್ಲ ಮನ್ನಣೆ; ಬಹಿರಂಗ ಪತ್ರದಲ್ಲಿ ರಿಷಬ್​ ಶೆಟ್ಟಿ ಅಸಮಾಧಾನ

‘ಪೆದ್ರೂ’ ಸಿನಿಮಾವನ್ನು ಬೆಂಗಳೂರು ಸಿನಿಮೋತ್ಸವದಲ್ಲಿ ಆಯ್ಕೆ ಮಾಡದೇ ಇರುವುದಕ್ಕೆ ರಿಷಬ್​ ಶೆಟ್ಟಿ ಹಾಗೂ ನಿರ್ದೇಶಕ ನಟೇಶ್​ ಹೆಗಡೆ ಅಸಮಾಧಾನ ಹೊರ ಹಾಕಿದ್ದಾರೆ. ರಿಷಬ್​ ಶೆಟ್ಟಿ ಬಹಿರಂಗ ಪತ್ರ ಬರೆದಿದ್ದಾರೆ.

‘ಪೆದ್ರೂ’ ಚಿತ್ರಕ್ಕೆ ಬೆಂಗಳೂರು ಸಿನಿಮೋತ್ಸವದಲ್ಲಿ ಇಲ್ಲ ಮನ್ನಣೆ; ಬಹಿರಂಗ ಪತ್ರದಲ್ಲಿ ರಿಷಬ್​ ಶೆಟ್ಟಿ ಅಸಮಾಧಾನ
ರಿಷಬ್​ ಶೆಟ್ಟಿ, ‘ಪೆದ್ರೂ’ ಸಿನಿಮಾ ಪೋಸ್ಟರ್​
TV9 Web
| Edited By: |

Updated on:Mar 02, 2022 | 2:05 PM

Share

ಪ್ರತಿ ಬಾರಿಯಂತೆ ಈ ಬಾರಿ ಕೂಡ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ವಿವಾದಗಳು ತಲೆ ಎತ್ತಿವೆ. ಸಿನಿಮಾಗಳ ಆಯ್ಕೆ ಪ್ರಕ್ರಿಯೆ ಸರಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಕನ್ನಡ ಚಿತ್ರರಂಗದ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾ.3ರಿಂದ ಬೆಂಗಳೂರಿನಲ್ಲಿ ಸಿನಿಮೋತ್ಸವ (Bengaluru International Film Festival) ಆರಂಭ ಆಗಲಿದೆ. ಜಗತ್ತಿನ ಹಲವು ಭಾಷೆಯ ನೂರಾರು ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಕನ್ನಡದಿಂದ ಕೆಲವು ಚಿತ್ರಗಳು ಆಯ್ಕೆಯಾಗಿವೆ. ಇದರಲ್ಲಿ ‘ಪೆದ್ರೂ’ (Pedro Movie) ಚಿತ್ರಕ್ಕೆ ಮನ್ನಣೆ ಸಿಕ್ಕಿಲ್ಲ. ಜಾಗತಿಕವಾಗಿ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು, ಅನೇಕ ದಿಗ್ಗಜರಿಂದ ಮೆಚ್ಚುಗೆ ಪಡೆದ ‘ಪೆದ್ರೂ’ ಸಿನಿಮಾವನ್ನು ಬೆಂಗಳೂರು ಸಿನಿಮೋತ್ಸವದಲ್ಲಿ ಆಯ್ಕೆ ಮಾಡದೇ ಇರುವುದಕ್ಕೆ ನಿರ್ಮಾಪಕ ರಿಷಬ್​ ಶೆಟ್ಟಿ, ನಿರ್ದೇಶಕ ನಟೇಶ್​ ಹೆಗಡೆ ಅಸಮಾಧಾನ ಹೊರ ಹಾಕಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ಅವರು ಬಹಿರಂಗ ಪತ್ರದಲ್ಲಿ ಈ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಈ ಸಿನಿಮಾವನ್ನು ಕನ್ನಡದ ಅನೇಕ ಖ್ಯಾತ ನಿರ್ದೇಶಕರು ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ ಚಿತ್ರೋತ್ಸವಕ್ಕೆ ಆಯ್ಕೆ ಆಗದೇ ಇರುವುದು ವಿಪರ್ಯಾಸ.

ರಿಷಬ್‌ ಶೆಟ್ಟಿ ಬರೆದ ಪತ್ರದಲ್ಲಿ ಏನಿದೆ? ‘ಎಲ್ಲರಿಗೂ ನಮಸ್ಕಾರ.. ರಿಷಬ್‌ ಶೆಟ್ಟಿ ಫಿಲ್ಮ್‌ ಸಂಸ್ಥೆಯಿಂದ ನಿರ್ಮಾಣವಾದ ಪೆದ್ರೊ ಸಿನಿಮಾದ ಟ್ರೇಲಲ್​ಗೆ ನೀವು ನೀಡಿದ ಪ್ರತಿಕ್ರಿಯೆ ನಮ್ಮನ್ನು ಪುಳಕಿತರನ್ನಾಗಿಸಿದೆ. ವರ್ಷದ ಹಿಂದೆ ನಾವು ಈ ಸಿನಿಮಾದ ಕಥೆಯನ್ನು ಯೋಚಿಸಿದಾಗ ಅಥವಾ ಮಲೆನಾಡಿನ ಮಳೆಯಲ್ಲಿ ಚಿತ್ರೀಕರಿಸುತ್ತಿದ್ದಾಗ ಖಂಡಿತವಾಗಿ ಇದು ಪಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಪ್ರಶಂಸೆಯ ಬಗ್ಗೆ ಯೋಚಿಸಿರಲಿಲ್ಲ. ಬೇರೆ ಬೇರೆ ಊರಿನಿಂದ ಬಂದ ನಾವು ನಮ್ಮದೇ ಕಥೆಯನ್ನು ನಮ್ಮದೇ ರೀತಿಯಲ್ಲಿ ಹೇಳಬೇಕು ಎಂಬುದಷ್ಟೇ ನಮಗಿದ್ದ ಗಟ್ಟಿ ನಿರ್ಧಾರ’ ಎಂದು ರಿಷಬ್​ ಶೆಟ್ಟಿ ಪತ್ರ ಆರಂಭಿಸಿದ್ದಾರೆ.

‘ಮೊನ್ನೆಯಷ್ಟೇ ಆಯೋಜಿಸಿದ್ದ ನಮ್ಮ ಸಿನಿಮಾದ ಪ್ರೈವೇಟ್‌ ಸ್ಕ್ರೀನಿಂಗ್​ಗೆ ಆಗಮಿಸಿ ಸಿನಿಮಾವನ್ನು ಬಹುವಾಗಿ ಮೆಚ್ಚಿದ ಗಿರೀಶ್‌ ಕಾಸರವಳ್ಳಿ, ಎಂ.ಎಸ್‌. ಸತ್ಯು, ವಸಂತ ಮೋಕಾಶಿ, ವಿವೇಕ್‌ ಶಾನಭಾಗ್‌, ಕವಿತಾ ಲಂಕೇಶ್‌ ಹಾಗೂ ಇನ್ನಿತರ ಹಿರಿಯರು ತೋರಿದ ಪ್ರೀತಿ ನಮ್ಮ ಹೃದಯವನ್ನು ಆರ್ದೃ ಗೊಳಿಸಿದೆ. ಜನರೊಂದಿಗೆ ನಮ್ಮ ಸಿನಿಮಾವನ್ನು ಹಂಚಿಕೊಳ್ಳುವ ಆಸೆಯನ್ನು ಇಮ್ಮಡಿಯಾಗಿಸಿದೆ’ ಎಂದು ರಿಷಬ್​ ಶೆಟ್ಟಿ ಬರೆದಿದ್ದಾರೆ.

‘ಜಗತ್ತಿನ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪಡೆದು ವಿಮರ್ಶಕರಿಂದ ಪ್ರಶಂಸೆ ಪಡೆದ ಪೆದ್ರೊ, ನಮ್ಮ ಬೆಂಗಳೂರಿನ ಚಿತ್ರೋತ್ಸವಕ್ಕೆ ಯಾಕೋ ರುಚಿಸಿಲ್ಲ. ಕೆಲವೊಮ್ಮೆ ಕಹಿಗುಳಿಗೆಯನ್ನೂ ನುಂಗಬೇಕು ಆರೋಗ್ಯದ ದೃಷ್ಟಿಯಿಂದ. ನಮ್ಮ ಸಿನಿಮಾ ಚಿತ್ರೋತ್ಸವದಿಂದ ಅವಕಾಶ ವಂಚಿತವಾಯಿತು ಎಂಬುದು ಎಷ್ಟು ಸತ್ಯವೋ ನಮ್ಮದೇ ಊರಿನ ಜನ ತಮ್ಮದೇ ಸಿನಿಮಾವನ್ನು ವೀಕ್ಷಿಸಲು ವಂಚಿತರಾದರು ಎಂಬುದು ಅಷ್ಟೇ ಸತ್ಯ. ಸಿನಿಮಾ ಎಂಬ ನದಿಗೆ ಎಲ್ಲ ತೊರೆಗಳೂ ಬಂದು ಸೇರಬೇಕು. ನಮ್ಮಲ್ಲಿಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ

ತಡೆಗಾಲು ಒಡ್ಡುವ ಪ್ರಯತ್ನ ಮಾಡಿದ್ದಾರೆ. ನಾವೆಲ್ಲ ಇವತ್ತು ಕುಳಿತಿರುವ ಜಾಗ ನಮಗೆ ಸಿನಿಮಾ ಎಂಬ ಮಾಧ್ಯಮ ನೀಡಿದ ಭಕ್ಷೀಸು. ಒಂದು ಸಿನಿಮಾ ಜನರಿಗೆ ತಲುಪುವುದನ್ನು ತಪ್ಪಿಸುತ್ತೇವೆ ಎಂದುಕೊಂಡರೆ ನೀರನ್ನು ಹಿಮ್ಮುಖ ಹರಿಸುತ್ತೇವೆ ಎಂದುಕೊಂಡಂತೆ. ನಮ್ಮನ್ನು ಎಡೆಬಿಡದೆ ‘ಸಿನಿಮಾವನ್ನು ಎಲ್ಲಿ ನೋಡಬಹುದು’ ಎಂದು ಕೇಳುತ್ತಿರುವ ಪ್ರೀತಿಯ ಜನರಲ್ಲಿ ನಮ್ಮದು ಒಂದೇ ಕೋರಿಕೆ. ದಯವಿಟ್ಟು ಹೀಗೆ ಎಂದಿಗೂ ನಮ್ಮೊಂದಿಗಿರಿ. ಪೆದ್ರೊವನ್ನು ನಿಮ್ಮೆಡೆಗೆ ತಲುಪಿಸುವುದು ನಮ್ಮ ಭದ್ಧತೆ’ ಎಂದು ರಿಷಬ್​ ಶೆಟ್ಟಿ ಪತ್ರ ಬರೆದಿದ್ದಾರೆ.

ಇದನ್ನೂ ಓದಿ:

ರಿಷಬ್​ ಶೆಟ್ಟಿ ನಿರ್ಮಾಣದ ‘ಪೆದ್ರೊ’ ಟ್ರೇಲರ್​ ರಿಲೀಸ್​; ನಟೇಶ್ ಹೆಗಡೆ​ ನಿರ್ದೇಶನಕ್ಕೆ ಮೆಚ್ಚುಗೆ

‘ರಿಷಬ್​ಗೆ ಹೀರೋಯಿನ್​ ಕೊಡಬೇಡಿ ಅಂತ ಅವರ ಪತ್ನಿ ಪ್ರಗತಿ ಶೆಟ್ಟಿ ಹೇಳಿದ್ರು’: ರಾಜ್​ ಬಿ. ಶೆಟ್ಟಿ

Published On - 1:46 pm, Wed, 2 March 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್