AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಕಾಂತಾರ 2’ ಚಿತ್ರದಲ್ಲಿ ಮೋಹನ್​ಲಾಲ್? ಭೇಟಿಯಿಂದ ಮೂಡಿತು ಅನುಮಾನ

ರಿಷಬ್ ಶೆಟ್ಟಿ ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಈ ಮೊದಲು ವರದಿ ಆಗಿತ್ತು. ಇದಕ್ಕೆ ರಿಷಬ್ ಅವರು ಒಟಿಟಿ ಪ್ಲೇಗೆ ಸ್ಪಷ್ಟನೆ ನೀಡಿದ್ದರು. ‘ನನಗೆ ಅವರು ಆಫರ್ ನೀಡಿದ್ದು ನಿಜ. ಆದರೆ, ಅದನ್ನು ನಾನು ಒಪ್ಪಿಲ್ಲ’ ಎಂದು ಅವರು ಹೇಳಿದ್ದರು. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

Rishab Shetty: ‘ಕಾಂತಾರ 2’ ಚಿತ್ರದಲ್ಲಿ ಮೋಹನ್​ಲಾಲ್? ಭೇಟಿಯಿಂದ ಮೂಡಿತು ಅನುಮಾನ
ಮೋಹನ್​ಲಾಲ್-ರಿಷಬ್
ರಾಜೇಶ್ ದುಗ್ಗುಮನೆ
|

Updated on:Apr 19, 2024 | 7:58 AM

Share

ರಿಷಬ್ ಶೆಟ್ಟಿ (Rishab Shetty) ಅವರು ಈಗ ಯಾರನ್ನೇ ಭೇಟಿ ಮಾಡಿದರೂ ಕುತೂಹಲ ಮೂಡುತ್ತದೆ. ಅವರು ಭೇಟಿ ಮಾಡಿದ ಕಲಾವಿದರು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಾರಾ ಎನ್ನುವ ಪ್ರಶ್ನೆಯನ್ನು ಅಭಿಮಾನಿಗಳು ಕೇಳುತ್ತಾರೆ. ಈಗ ರಿಷಬ್ ಶೆಟ್ಟಿ ಅವರು ಮಲಯಾಳಂನ ಖ್ಯಾತ ನಟ ಮೋಹನ್​ಲಾಲ್ ಅವರನ್ನು ಭೇಟಿ ಮಾಡಿದ್ದಾರೆ. ಇದರಿಂದ ಕುತೂಹಲ ಹೆಚ್ಚಿದೆ. ಅವರು ‘ಕಾಂತಾರ 2’ ಸಿನಿಮಾದಲ್ಲಿ ನಟಿಸುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿವೆ. ಸದ್ಯ ರಿಷಬ್ ಅವರು ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿ ಇದ್ದಾರೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ರಿಷಬ್ ಅವರು ಮೋಹನ್​ಲಾಲ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಸಖತ್ ಅಚ್ಚರಿ ಮೂಡಿಸಿದೆ. ಈ ಭೇಟಿ ಹಿಂದೆ ಕಾರಣ ಇದೆಯೋ ಅಥವಾ ಇದು ಸಹಜ ಭೇಟಿಯೋ ಅನ್ನೋ ಪ್ರಶ್ನೆಯನ್ನು ಫ್ಯಾನ್ಸ್ ಕೇಳುತ್ತಿದ್ದಾರೆ.

‘ಲೆಜೆಂಡರಿ ಮೋಹನ್​ಲಾಲ್ ಅವರನ್ನು ಭೇಟಿ ಮಾಡಿದ್ದು ಖುಷಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ‘ಲೆಜೆಂಡರಿ ನಟ ಲೆಜೆಂಡರಿಯನ್ನು ಭೇಟಿ ಮಾಡಿದರು’ ಎಂದು ಕೆಲವರು ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗಿದೆ.

ಈ ಮೊದಲು ರಿಷಬ್ ಶೆಟ್ಟಿ ಅವರು ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ರಿಷಬ್ ಅವರು ಒಟಿಟಿ ಪ್ಲೇಗೆ ಸ್ಪಷ್ಟನೆ ನೀಡಿದ್ದರು. ‘ನನಗೆ ಅವರು ಆಫರ್ ನೀಡಿದ್ದು ನಿಜ. ಆದರೆ, ಅದನ್ನು ನಾನು ಒಪ್ಪಿಲ್ಲ’ ಎಂದು ಅವರು ಹೇಳಿದ್ದರು. ಜೊತೆಗೆ ಕನ್ನಡ ಸಿನಿಮಾ ಮಾಡುವತ್ತ ರಿಷಬ್ ಶೆಟ್ಟಿ ಅವರು ಹೆಚ್ಚು ಗಮನ ಹರಿಸುತ್ತಿದ್ದಾರಂತೆ.

ಇದನ್ನೂ ಓದಿ: ‘ಕಾಂತಾರಾ ಪ್ರೀಕ್ವೆಲ್​ನಲ್ಲಿ ನಾನಿರಲ್ಲ, ನನ್ನ ಜಾಗಕ್ಕೆ ಬೇರೆಯವರು ಬಂದಿದ್ದಾರೆ’; ಸಪ್ತಮಿ ಗೌಡ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಹೀರೋ ಆದರು. ಈಗ ಈ ಚಿತ್ರಕ್ಕೆ ಪ್ರೀಕ್ವೆಲ್ ಬರುತ್ತಿದೆ. ಹಿಂದೆ ಏನಾಗಿತ್ತು ಎನ್ನುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:58 am, Fri, 19 April 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!