AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ರಿಷಬ್-ಪ್ರಗತಿ ದಂಪತಿ; ಹಳೆಯ ವಿಡಿಯೋ ವೈರಲ್

ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಪ್ರತಿ ಸಿನಿಮಾ ಆದ ಬಳಿಕವೂ ಒಂದು ಬ್ರೇಕ್ ಪಡೆದುಕೊಳ್ಳುತ್ತಾರೆ. ರಿಷಬ್ ಶೆಟ್ಟಿ ಕೂಡ ಹಾಗೆಯೇ ಮಾಡಿದ್ದರು. ‘ಕಾಂತಾರ’ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದರು. ಆ ಬಳಿಕ ಸಿನಿಮಾ ಗೆದ್ದು ಬೀಗಿತ್ತು. ಇದಾದ ಬಳಿಕ ಅವರು ದುಬೈ ಪ್ರವಾಸ ಮಾಡಿದ್ದರು.

ದುಬೈನಲ್ಲಿ ರಿಷಬ್-ಪ್ರಗತಿ ದಂಪತಿ; ಹಳೆಯ ವಿಡಿಯೋ ವೈರಲ್
ಪ್ರಗತಿ-ರಿಷಬ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 10, 2025 | 12:39 PM

Share

ರಿಷಬ್ ಶೆಟ್ಟಿ (Rishab Shetty) ಹಾಗೂ ಪ್ರಗತಿ ಶೆಟ್ಟಿ ಅವರು ಈಗ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಲೆಯಲ್ಲಿ ತೇಲುತ್ತಾ ಇದ್ದಾರೆ. ಕಳೆದ ಮೂರು ವರ್ಷಗಳಿಂದ ಅವರು ಪಟ್ಟ ಶ್ರಮಕ್ಕೆ ಸಿಕ್ಕ ಪ್ರತಿಫಲ ಇದು ಎಂದರೂ ತಪ್ಪಾಗಲಿಕ್ಕಿಲ್ಲ. ಈ ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗುತ್ತಿದೆ. ಹೀಗಿರುವಾಗಲೇ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ದುಬೈನಲ್ಲಿ ಸಮಯ ಕಳೆದ ಕ್ಷಣಗಳಿವೆ.

ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಪ್ರತಿ ಸಿನಿಮಾ ಆದ ಬಳಿಕವೂ ಒಂದು ಬ್ರೇಕ್ ಪಡೆದುಕೊಳ್ಳುತ್ತಾರೆ. ರಿಷಬ್ ಶೆಟ್ಟಿ ಕೂಡ ಹಾಗೆಯೇ ಮಾಡಿದ್ದರು. ‘ಕಾಂತಾರ’ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದರು. ಆ ಬಳಿಕ ಸಿನಿಮಾ ಗೆದ್ದು ಬೀಗಿತ್ತು. ಇದಾದ ಬಳಿಕ ಅವರು ದುಬೈ ಪ್ರವಾಸ ಮಾಡಿದ್ದರು. ಅಲ್ಲಿ ಕಳೆದ ಸುಂದರ ಕ್ಷಣವನ್ನು ವಿಡಿಯೋ ರೂಪದಲ್ಲಿ ಹಂಚಿಕೊಂಡಿದ್ದರು. ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಡಿಯೋನ ಅಭಿಮಾನಿಗಳು ಈಗ ಮತ್ತೆ ವೈರಲ್ ಮಾಡುತ್ತಿದ್ದಾರೆ. ಕೆಲವರಂತೂ ಇದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಯಶಸ್ಸಿನ ಬಳಿಕ ತೆರಳಿದ ವಿಡಿಯೋ ಎಂದೆಲ್ಲ ಸುದ್ದಿ ಮಾಡಿದ್ದಾರೆ. ಆದರೆ, ಅಸಲಿಗೆ ಹಾಗಿಲ್ಲ. ಇದರ ಅಸಲಿಯತ್ತು ಬೇರೆಯದೇ ಇದೆ. ಇದನ್ನು ಕೆಲವರು ತಿಳಿಸಿ ಹೇಳುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿಯ ನಂಬಿ ನೂರಾರು ಕೋಟಿ ಹೂಡಿಕೆ ಮಾಡಿದ್ದೇಕೆ ಹೊಂಬಾಳೆ?

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಷಬ್ ಶೆಟ್ಟಿಗೆ ನಿರ್ದೇಶಕನಾಗಿ, ನಟನಾಗಿ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಇಷ್ಟೇ ಅಲ್ಲ, ಈ ಸಿನಿಮಾ ಮೂಲಕ ಕಾಸ್ಟ್ಯೂಮ್ ಡಿಸೈನರ್ ಆಗಿ ಪ್ರಗತಿ ಶೆಟ್ಟಿಗೆ ದೊಡ್ಡ ಯಶಸ್ಸು ನೀಡಿದೆ.

ಈ ಬಾರಿಯೂ ತೆರಳುತ್ತಾರೆ ಟ್ರಿಪ್?

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಸಾಕಷ್ಟು ಶ್ರಮ ಹಾಕಿದ್ದಾಗಿ ಅನೇಕ ಬಾರಿ ಹೇಳಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳನ್ನು ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾಗಿ ಹೇಳುತ್ತಲೇ ಬರುತ್ತಿದ್ದಾರೆ. ಹಗಲು ರಾತ್ರಿ ಎನ್ನದೆ ಸಿನಿಮಾ ಶೂಟ್ ಮಾಡಿದ್ದಾರೆ. ಈ ಕಾರಣಕ್ಕೆ ಅವರಿಗೆ ಒಂದು ದೊಡ್ಡ ಬ್ರೇಕ್​ನ ಅವಶ್ಯಕತೆ ಇದೆ. ಈ ಚಿತ್ರದಿಂದ ಅದನ್ನು ನೆರವೇರಿಸಿಕೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:30 pm, Fri, 10 October 25

ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್