ದುಬೈನಲ್ಲಿ ರಿಷಬ್-ಪ್ರಗತಿ ದಂಪತಿ; ಹಳೆಯ ವಿಡಿಯೋ ವೈರಲ್

ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಪ್ರತಿ ಸಿನಿಮಾ ಆದ ಬಳಿಕವೂ ಒಂದು ಬ್ರೇಕ್ ಪಡೆದುಕೊಳ್ಳುತ್ತಾರೆ. ರಿಷಬ್ ಶೆಟ್ಟಿ ಕೂಡ ಹಾಗೆಯೇ ಮಾಡಿದ್ದರು. ‘ಕಾಂತಾರ’ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದರು. ಆ ಬಳಿಕ ಸಿನಿಮಾ ಗೆದ್ದು ಬೀಗಿತ್ತು. ಇದಾದ ಬಳಿಕ ಅವರು ದುಬೈ ಪ್ರವಾಸ ಮಾಡಿದ್ದರು.

ದುಬೈನಲ್ಲಿ ರಿಷಬ್-ಪ್ರಗತಿ ದಂಪತಿ; ಹಳೆಯ ವಿಡಿಯೋ ವೈರಲ್
ಪ್ರಗತಿ-ರಿಷಬ್
Edited By:

Updated on: Oct 10, 2025 | 12:39 PM

ರಿಷಬ್ ಶೆಟ್ಟಿ (Rishab Shetty) ಹಾಗೂ ಪ್ರಗತಿ ಶೆಟ್ಟಿ ಅವರು ಈಗ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಲೆಯಲ್ಲಿ ತೇಲುತ್ತಾ ಇದ್ದಾರೆ. ಕಳೆದ ಮೂರು ವರ್ಷಗಳಿಂದ ಅವರು ಪಟ್ಟ ಶ್ರಮಕ್ಕೆ ಸಿಕ್ಕ ಪ್ರತಿಫಲ ಇದು ಎಂದರೂ ತಪ್ಪಾಗಲಿಕ್ಕಿಲ್ಲ. ಈ ಸಿನಿಮಾ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬೀಗುತ್ತಿದೆ. ಹೀಗಿರುವಾಗಲೇ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ದುಬೈನಲ್ಲಿ ಸಮಯ ಕಳೆದ ಕ್ಷಣಗಳಿವೆ.

ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಪ್ರತಿ ಸಿನಿಮಾ ಆದ ಬಳಿಕವೂ ಒಂದು ಬ್ರೇಕ್ ಪಡೆದುಕೊಳ್ಳುತ್ತಾರೆ. ರಿಷಬ್ ಶೆಟ್ಟಿ ಕೂಡ ಹಾಗೆಯೇ ಮಾಡಿದ್ದರು. ‘ಕಾಂತಾರ’ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದರು. ಆ ಬಳಿಕ ಸಿನಿಮಾ ಗೆದ್ದು ಬೀಗಿತ್ತು. ಇದಾದ ಬಳಿಕ ಅವರು ದುಬೈ ಪ್ರವಾಸ ಮಾಡಿದ್ದರು. ಅಲ್ಲಿ ಕಳೆದ ಸುಂದರ ಕ್ಷಣವನ್ನು ವಿಡಿಯೋ ರೂಪದಲ್ಲಿ ಹಂಚಿಕೊಂಡಿದ್ದರು. ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಡಿಯೋನ ಅಭಿಮಾನಿಗಳು ಈಗ ಮತ್ತೆ ವೈರಲ್ ಮಾಡುತ್ತಿದ್ದಾರೆ. ಕೆಲವರಂತೂ ಇದು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಯಶಸ್ಸಿನ ಬಳಿಕ ತೆರಳಿದ ವಿಡಿಯೋ ಎಂದೆಲ್ಲ ಸುದ್ದಿ ಮಾಡಿದ್ದಾರೆ. ಆದರೆ, ಅಸಲಿಗೆ ಹಾಗಿಲ್ಲ. ಇದರ ಅಸಲಿಯತ್ತು ಬೇರೆಯದೇ ಇದೆ. ಇದನ್ನು ಕೆಲವರು ತಿಳಿಸಿ ಹೇಳುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ರಿಷಬ್ ಶೆಟ್ಟಿಯ ನಂಬಿ ನೂರಾರು ಕೋಟಿ ಹೂಡಿಕೆ ಮಾಡಿದ್ದೇಕೆ ಹೊಂಬಾಳೆ?

‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಷಬ್ ಶೆಟ್ಟಿಗೆ ನಿರ್ದೇಶಕನಾಗಿ, ನಟನಾಗಿ ದೊಡ್ಡ ಯಶಸ್ಸು ತಂದುಕೊಟ್ಟಿದೆ. ಇಷ್ಟೇ ಅಲ್ಲ, ಈ ಸಿನಿಮಾ ಮೂಲಕ ಕಾಸ್ಟ್ಯೂಮ್ ಡಿಸೈನರ್ ಆಗಿ ಪ್ರಗತಿ ಶೆಟ್ಟಿಗೆ ದೊಡ್ಡ ಯಶಸ್ಸು ನೀಡಿದೆ.

ಈ ಬಾರಿಯೂ ತೆರಳುತ್ತಾರೆ ಟ್ರಿಪ್?

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಸಾಕಷ್ಟು ಶ್ರಮ ಹಾಕಿದ್ದಾಗಿ ಅನೇಕ ಬಾರಿ ಹೇಳಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳನ್ನು ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾಗಿ ಹೇಳುತ್ತಲೇ ಬರುತ್ತಿದ್ದಾರೆ. ಹಗಲು ರಾತ್ರಿ ಎನ್ನದೆ ಸಿನಿಮಾ ಶೂಟ್ ಮಾಡಿದ್ದಾರೆ. ಈ ಕಾರಣಕ್ಕೆ ಅವರಿಗೆ ಒಂದು ದೊಡ್ಡ ಬ್ರೇಕ್​ನ ಅವಶ್ಯಕತೆ ಇದೆ. ಈ ಚಿತ್ರದಿಂದ ಅದನ್ನು ನೆರವೇರಿಸಿಕೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:30 pm, Fri, 10 October 25

Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us