AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ

Anant Nag: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಅವರು ಚಿತ್ರರಂಗ ಮತ್ತು ರಂಗಭೂಮಿಗೆ ಸಲ್ಲಿಸಿರುವ ಸುದೀರ್ಘ ಮತ್ತು ಮೌಲ್ಯಯುತ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ. ಅನಂತ್ ನಾಗ್ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ.

ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ
Anant Nag
ಮಂಜುನಾಥ ಸಿ.
|

Updated on: Jan 26, 2025 | 8:08 AM

Share

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ನಾಗ್​ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅನಂತ್​ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ಆ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಇದೀಗ ಕನ್ನಡ ಸಿನಿಮಾ ರಂಗದ ಪ್ರಮುಖ ನಟರು ಸೇರಿದಂತೆ ಹಲವಾರು ಮಂದಿ ಸೆಲೆಬ್ರಿಟಿಗಳು ಅನಂತ್ ನಾಗ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅನಂತ್ ನಾಗ್ ಅವರಿಗೆ ಯಾರ ಹೇಗೆ ಅಭಿನಂದಿಸಿದ್ದಾರೆ, ಇಲ್ಲಿದೆ ಮಾಹಿತಿ.

ಅನಂತ್ ನಾಗ್ ಅವರೊಟ್ಟಿಗಿನ ಚಿತ್ರ ಹಂಚಿಕೊಂಡು ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ, ‘ನನ್ನ ಸ್ಪೂರ್ತಿಯಾಗಿರುವ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ದೊರೆತಿದ್ದಕ್ಕೆ ಅಭಿನಂದನೆಗಳು. ಚಿತ್ರರಂಗಕ್ಕೆ ಹಾಗೂ ನಾಟಕ ರಂಗಕ್ಕೆ ನಿಮ್ಮ ಸೇವೆ ತಲೆಮಾರುಗಳಿಗೆ ಸ್ಪೂರ್ತಿ ತುಂಬಿದೆ. ಸರಳತೆಯಲ್ಲಿ ಸಾಧಕತೆ ಅಡಗಿದೆ ಎಂದು ತೋರಿಸಿದ್ದಕ್ಕೆ ಧನ್ಯವಾದಗಳು. ಕನ್ನಡ ಚಿತ್ರರಂಗದ ರತ್ನ, ನಮ್ಮೆಲ್ಲರ ಪ್ರಿಯ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದ ಸುದ್ದಿ ಕೇಳಿ ಅಪಾರ ಸಂತೋಷವಾಯಿತು. ನಿಮ್ಮ ಕಲಾ ಸಾಧನೆ ಕನ್ನಡ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ. ನಿಮ್ಮ ಈ ಸಾಧನೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದಿದ್ದಾರೆ.

ಇದನ್ನೂ ಓದಿ:ನಟ ಅನಂತ್ ನಾಗ್ ಮುಡಿಗೆ ಪದ್ಮಭೂಷಣ ಪ್ರಶಸ್ತಿ

ಅನಂತ್ ನಾಗ್ ಅವರಿಗೆ ಒಂದೇ ರೀತಿಯ ಗಂಭೀರ ಪಾತ್ರಗಳನ್ನೇ ನಿರ್ದೇಶಕರುಗಳು ನೀಡುತ್ತಿದ್ದ ಸಮಯದಲ್ಲಿ ರಿಷಬ್ ಶೆಟ್ಟಿ ಅನಂತ್ ನಾಗ್ ಅವರನ್ನು ಭಿನ್ನವಾಗಿ ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪಾಠ ಶಾಲೆ ಕಾಸರಗೋಡು’ ಸಿನಿಮಾದಲ್ಲಿ ಅನಂತ್ ನಾಗ್ ಅವರಿಗೆ ಭಿನ್ನವಾದ ಪಾತ್ರವನ್ನು ನೀಡಿದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಅನಂತ್ ನಾಗ್ ಅವರನ್ನು ಭಿನ್ನ ರೀತಿಯಲ್ಲಿ ರಿಷಬ್ ಆ ಸಿನಿಮಾದಲ್ಲಿ ತೋರಿಸಿದ್ದರು.

ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂಬುದು ಬಹು ವರ್ಷದ ಬೇಡಿಕೆ ಆಗಿತ್ತು. ಕಳೆದ ವರ್ಷ ನಟ ಮೆಗಾಸ್ಟಾರ್ ಚಿರಂಜೀವಿಗೆ ಪದ್ಮ ವಿಭೂಷಣ ಘೋಷಣೆಯಾದಾಗಲೂ ಅನಂತ್ ನಾಗ್ ಅವರನ್ನು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿತ್ತು. ಆದರೆ ಈಗ ಕೊನೆಗೂ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?