AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ

Anant Nag: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಅವರು ಚಿತ್ರರಂಗ ಮತ್ತು ರಂಗಭೂಮಿಗೆ ಸಲ್ಲಿಸಿರುವ ಸುದೀರ್ಘ ಮತ್ತು ಮೌಲ್ಯಯುತ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ. ಅನಂತ್ ನಾಗ್ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ.

ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ
Anant Nag
ಮಂಜುನಾಥ ಸಿ.
|

Updated on: Jan 26, 2025 | 8:08 AM

Share

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ನಾಗ್​ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅನಂತ್​ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ಆ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಇದೀಗ ಕನ್ನಡ ಸಿನಿಮಾ ರಂಗದ ಪ್ರಮುಖ ನಟರು ಸೇರಿದಂತೆ ಹಲವಾರು ಮಂದಿ ಸೆಲೆಬ್ರಿಟಿಗಳು ಅನಂತ್ ನಾಗ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅನಂತ್ ನಾಗ್ ಅವರಿಗೆ ಯಾರ ಹೇಗೆ ಅಭಿನಂದಿಸಿದ್ದಾರೆ, ಇಲ್ಲಿದೆ ಮಾಹಿತಿ.

ಅನಂತ್ ನಾಗ್ ಅವರೊಟ್ಟಿಗಿನ ಚಿತ್ರ ಹಂಚಿಕೊಂಡು ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ, ‘ನನ್ನ ಸ್ಪೂರ್ತಿಯಾಗಿರುವ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ದೊರೆತಿದ್ದಕ್ಕೆ ಅಭಿನಂದನೆಗಳು. ಚಿತ್ರರಂಗಕ್ಕೆ ಹಾಗೂ ನಾಟಕ ರಂಗಕ್ಕೆ ನಿಮ್ಮ ಸೇವೆ ತಲೆಮಾರುಗಳಿಗೆ ಸ್ಪೂರ್ತಿ ತುಂಬಿದೆ. ಸರಳತೆಯಲ್ಲಿ ಸಾಧಕತೆ ಅಡಗಿದೆ ಎಂದು ತೋರಿಸಿದ್ದಕ್ಕೆ ಧನ್ಯವಾದಗಳು. ಕನ್ನಡ ಚಿತ್ರರಂಗದ ರತ್ನ, ನಮ್ಮೆಲ್ಲರ ಪ್ರಿಯ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದ ಸುದ್ದಿ ಕೇಳಿ ಅಪಾರ ಸಂತೋಷವಾಯಿತು. ನಿಮ್ಮ ಕಲಾ ಸಾಧನೆ ಕನ್ನಡ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ. ನಿಮ್ಮ ಈ ಸಾಧನೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದಿದ್ದಾರೆ.

ಇದನ್ನೂ ಓದಿ:ನಟ ಅನಂತ್ ನಾಗ್ ಮುಡಿಗೆ ಪದ್ಮಭೂಷಣ ಪ್ರಶಸ್ತಿ

ಅನಂತ್ ನಾಗ್ ಅವರಿಗೆ ಒಂದೇ ರೀತಿಯ ಗಂಭೀರ ಪಾತ್ರಗಳನ್ನೇ ನಿರ್ದೇಶಕರುಗಳು ನೀಡುತ್ತಿದ್ದ ಸಮಯದಲ್ಲಿ ರಿಷಬ್ ಶೆಟ್ಟಿ ಅನಂತ್ ನಾಗ್ ಅವರನ್ನು ಭಿನ್ನವಾಗಿ ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪಾಠ ಶಾಲೆ ಕಾಸರಗೋಡು’ ಸಿನಿಮಾದಲ್ಲಿ ಅನಂತ್ ನಾಗ್ ಅವರಿಗೆ ಭಿನ್ನವಾದ ಪಾತ್ರವನ್ನು ನೀಡಿದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಅನಂತ್ ನಾಗ್ ಅವರನ್ನು ಭಿನ್ನ ರೀತಿಯಲ್ಲಿ ರಿಷಬ್ ಆ ಸಿನಿಮಾದಲ್ಲಿ ತೋರಿಸಿದ್ದರು.

ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂಬುದು ಬಹು ವರ್ಷದ ಬೇಡಿಕೆ ಆಗಿತ್ತು. ಕಳೆದ ವರ್ಷ ನಟ ಮೆಗಾಸ್ಟಾರ್ ಚಿರಂಜೀವಿಗೆ ಪದ್ಮ ವಿಭೂಷಣ ಘೋಷಣೆಯಾದಾಗಲೂ ಅನಂತ್ ನಾಗ್ ಅವರನ್ನು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿತ್ತು. ಆದರೆ ಈಗ ಕೊನೆಗೂ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ