Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ

Anant Nag: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ. ಅವರು ಚಿತ್ರರಂಗ ಮತ್ತು ರಂಗಭೂಮಿಗೆ ಸಲ್ಲಿಸಿರುವ ಸುದೀರ್ಘ ಮತ್ತು ಮೌಲ್ಯಯುತ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ. ಅನಂತ್ ನಾಗ್ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಂದನೆ ತಿಳಿಸಿದ್ದಾರೆ.

ಅನಂತ್ ನಾಗ್​ಗೆ ಪದ್ಮಭೂಷಣ, ನೀವೇ ನನಗೆ ಸ್ಪೂರ್ತಿ ಎಂದ ರಿಷಬ್ ಶೆಟ್ಟಿ
Anant Nag
Follow us
ಮಂಜುನಾಥ ಸಿ.
|

Updated on: Jan 26, 2025 | 8:08 AM

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್​ನಾಗ್​ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅನಂತ್​ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ಘೋಷಿಸಿದೆ. ಆ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಇದೀಗ ಕನ್ನಡ ಸಿನಿಮಾ ರಂಗದ ಪ್ರಮುಖ ನಟರು ಸೇರಿದಂತೆ ಹಲವಾರು ಮಂದಿ ಸೆಲೆಬ್ರಿಟಿಗಳು ಅನಂತ್ ನಾಗ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಅನಂತ್ ನಾಗ್ ಅವರಿಗೆ ಯಾರ ಹೇಗೆ ಅಭಿನಂದಿಸಿದ್ದಾರೆ, ಇಲ್ಲಿದೆ ಮಾಹಿತಿ.

ಅನಂತ್ ನಾಗ್ ಅವರೊಟ್ಟಿಗಿನ ಚಿತ್ರ ಹಂಚಿಕೊಂಡು ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ, ‘ನನ್ನ ಸ್ಪೂರ್ತಿಯಾಗಿರುವ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ದೊರೆತಿದ್ದಕ್ಕೆ ಅಭಿನಂದನೆಗಳು. ಚಿತ್ರರಂಗಕ್ಕೆ ಹಾಗೂ ನಾಟಕ ರಂಗಕ್ಕೆ ನಿಮ್ಮ ಸೇವೆ ತಲೆಮಾರುಗಳಿಗೆ ಸ್ಪೂರ್ತಿ ತುಂಬಿದೆ. ಸರಳತೆಯಲ್ಲಿ ಸಾಧಕತೆ ಅಡಗಿದೆ ಎಂದು ತೋರಿಸಿದ್ದಕ್ಕೆ ಧನ್ಯವಾದಗಳು. ಕನ್ನಡ ಚಿತ್ರರಂಗದ ರತ್ನ, ನಮ್ಮೆಲ್ಲರ ಪ್ರಿಯ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದ ಸುದ್ದಿ ಕೇಳಿ ಅಪಾರ ಸಂತೋಷವಾಯಿತು. ನಿಮ್ಮ ಕಲಾ ಸಾಧನೆ ಕನ್ನಡ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ. ನಿಮ್ಮ ಈ ಸಾಧನೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು’ ಎಂದಿದ್ದಾರೆ.

ಇದನ್ನೂ ಓದಿ:ನಟ ಅನಂತ್ ನಾಗ್ ಮುಡಿಗೆ ಪದ್ಮಭೂಷಣ ಪ್ರಶಸ್ತಿ

ಅನಂತ್ ನಾಗ್ ಅವರಿಗೆ ಒಂದೇ ರೀತಿಯ ಗಂಭೀರ ಪಾತ್ರಗಳನ್ನೇ ನಿರ್ದೇಶಕರುಗಳು ನೀಡುತ್ತಿದ್ದ ಸಮಯದಲ್ಲಿ ರಿಷಬ್ ಶೆಟ್ಟಿ ಅನಂತ್ ನಾಗ್ ಅವರನ್ನು ಭಿನ್ನವಾಗಿ ತೆರೆಯ ಮೇಲೆ ತೋರಿಸುವ ಪ್ರಯತ್ನ ಮಾಡಿದ್ದರು. ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪಾಠ ಶಾಲೆ ಕಾಸರಗೋಡು’ ಸಿನಿಮಾದಲ್ಲಿ ಅನಂತ್ ನಾಗ್ ಅವರಿಗೆ ಭಿನ್ನವಾದ ಪಾತ್ರವನ್ನು ನೀಡಿದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಅನಂತ್ ನಾಗ್ ಅವರನ್ನು ಭಿನ್ನ ರೀತಿಯಲ್ಲಿ ರಿಷಬ್ ಆ ಸಿನಿಮಾದಲ್ಲಿ ತೋರಿಸಿದ್ದರು.

ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂಬುದು ಬಹು ವರ್ಷದ ಬೇಡಿಕೆ ಆಗಿತ್ತು. ಕಳೆದ ವರ್ಷ ನಟ ಮೆಗಾಸ್ಟಾರ್ ಚಿರಂಜೀವಿಗೆ ಪದ್ಮ ವಿಭೂಷಣ ಘೋಷಣೆಯಾದಾಗಲೂ ಅನಂತ್ ನಾಗ್ ಅವರನ್ನು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿತ್ತು. ಆದರೆ ಈಗ ಕೊನೆಗೂ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು