AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Kantara 2’: ‘ಕಾಂತಾರ 2’ ಚಿತ್ರಕ್ಕೆ ನವೆಂಬರ್​ನಲ್ಲಿ ಶೂಟಿಂಗ್ ಶುರು? ರಿಲೀಸ್ ಯಾವಾಗ?

ಸದ್ಯ ರಿಷಬ್ ಅವರು ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ ತಿಂಗಳಲ್ಲೇ ಸಿನಿಮಾದ ಶೂಟಿಂಗ್ ಆರಂಭ ಆಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಈಗ ನವೆಂಬರ್​ನಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲು ತಂಡ ನಿರ್ಧರಿಸಿದೆ.

‘Kantara 2’: ‘ಕಾಂತಾರ 2’ ಚಿತ್ರಕ್ಕೆ ನವೆಂಬರ್​ನಲ್ಲಿ ಶೂಟಿಂಗ್ ಶುರು? ರಿಲೀಸ್ ಯಾವಾಗ?
ರಿಷಬ್
ರಾಜೇಶ್ ದುಗ್ಗುಮನೆ
|

Updated on:Sep 29, 2023 | 11:08 AM

Share

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ (Kanatara Movie) ರಿಲೀಸ್ ಆಗಿ ವರ್ಷ ಕಳೆದಿದೆ. ಸದ್ಯ ರಿಷಬ್ ಅವರು ‘ಕಾಂತಾರ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧವಾಗಲಿದೆ ಎಂದು ರಿಷಬ್ (Rishab Shetty) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈಗ ‘ಕಾಂತಾರ 2’ ಚಿತ್ರದ ಶೂಟಿಂಗ್ ಬಗ್ಗೆ ಹೊಸ ಅಪ್​ಡೇಟ್ ಸಿಕ್ಕಿದೆ. ಮೂಲಗಳ ಪ್ರಕಾರ ನವೆಂಬರ್​ನಲ್ಲಿ ಶೂಟಿಂಗ್ ಶುರುವಾಗಲಿದೆ ಎಂದು ವರದಿ ಆಗಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

‘ಕಾಂತಾರ’ ಸಿನಿಮಾದಲ್ಲಿ ಹಲವು ವಿಚಾರಗಳನ್ನು ಹೇಳಲಾಗಿದೆ. ದೈವದ ವಿಚಾರ ಹೈಲೈಟ್ ಆಗಿದೆ. ಈ ಚಿತ್ರವನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟರು. ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಸಿನಿಮಾದಲ್ಲಿ ಗಮನ ಸೆಳೆದರು. ಚಿತ್ರಕ್ಕೆ ಸೀಕ್ವೆಲ್ ಬರಲಿದೆ ಎಂದು ಎಲ್ಲರೂ ಭಾವಿಸಿದ್ದರು. ‘ನೀವು ಈಗ ನೋಡಿದ್ದು ಎರಡನೇ ಭಾಗ. ಮುಂದೆ ಬರೋದು ಭಾಗ ಒಂದು’ ಎಂದು ರಿಷಬ್ ಘೋಷಣೆ ಮಾಡುವ ಮೂಲಕ ಎಲ್ಲರಿಗೂ ಸರ್​ಪ್ರೈಸ್ ನೀಡಿದ್ದರು.

ಸದ್ಯ ರಿಷಬ್ ಅವರು ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಗಸ್ಟ್ ತಿಂಗಳಲ್ಲೇ ಸಿನಿಮಾದ ಶೂಟಿಂಗ್ ಆರಂಭ ಆಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಈಗ ನವೆಂಬರ್​ನಲ್ಲಿ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲು ತಂಡ ನಿರ್ಧರಿಸಿದೆ. 2024ರ ಏಪ್ರಿಲ್-ಮೇ ತಿಂಗಳಲ್ಲಿ ಚಿತ್ರವನ್ನು ರಿಲೀಸ್ ಮಾಡಲು ತಂಡ ನಿರ್ಧರಿಸಿದೆ ಎನ್ನಲಾಗುತ್ತಿದೆ.

‘ಕಾಂತಾರ 2’ ಚಿತ್ರ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗಲಿದೆ ಎಂದು ವರದಿ ಆಗಿತ್ತು. ಆದರೆ, ಈ ರೀತಿಯ ಆಲೋಚನೆ ರಿಷಬ್​ಗೆ ಇಲ್ಲವಂತೆ. ಸಣ್ಣ ಬಜೆಟ್​ನಲ್ಲಿ ಸಿನಿಮಾ ಮಾಡಿ ಹೆಚ್ಚಿನ ಲಾಭವನ್ನು ಕಂಡುಕೊಳ್ಳಲು ಅವರು ಪ್ಲ್ಯಾನ್ ಮಾಡಿದ್ದಾರೆ.

ಇದನ್ನೂ ಓದಿ: 10 ಸೈಮಾ ಪ್ರಶಸ್ತಿ ಪಡೆದ‘ಕಾಂತಾರ’; ‘ದೈವ ನರ್ತಕರು, ಅಪ್ಪು ಸರ್ ಹಾಗೂ ಕನ್ನಡಿಗರಿಗೆ ಸಮರ್ಪಣೆ’ ಎಂದ ರಿಷಬ್​ ಶೆಟ್ಟಿ

ಸೆಪ್ಟೆಂಬರ್ 30ಕ್ಕೆ ‘ಕಾಂತಾರ’ ರಿಲೀಸ್ ಆಗಿ ಒಂದು ವರ್ಷ ಕಳೆಯಲಿದೆ. ಈ ವೇಳೆ ಹೊಂಬಾಳೆ ಕಡೆಯಿಂದ ಹೊಸ ಘೋಷಣೆ ಆಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Fri, 29 September 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ