AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್

‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದ ಅಂಗವಾಗಿ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್​ನಲ್ಲಿ ಈ  ಹಾಡು ಎರಡನೇ ಸ್ಥಾನದಲ್ಲಿದೆ. 

‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್
ಸಪ್ತಮಿ-ರಿಷಬ್
TV9 Web
| Edited By: |

Updated on: Aug 16, 2022 | 4:02 PM

Share

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಹಲವು ಚಿತ್ರಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಿಲೀಸ್ ಆಗಿದ್ದ ಸಿನಿಮಾದ ಟ್ರೇಲರ್ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಈಗ ಚಿತ್ರದ ಹೊಸ ಸಾಂಗ್ ರಿಲೀಸ್ ಆಗಿದೆ. ‘ಸಿಂಗಾರ ಸಿರಿಯೇ..’ (Singara Siriye) ಹೆಸರಿನ ಹಾಡು ಬಿಡುಗಡೆ ಆಗಿದ್ದು, ಪ್ರೇಕ್ಷಕರು ಈ ಹಾಡಿಗೆ ತಲೆದೂಗಿದ್ದಾರೆ. ಈ ಸಾಂಗ್ ಲಕ್ಷ ಲಕ್ಷ ವೀಕ್ಷಣೆ ಪಡೆದುಕೊಳ್ಳುತ್ತಿದೆ.

‘ಕಾಂತಾರ’ ಚಿತ್ರ ಕರಾವಳಿ ತೀರದ ಸೊಗಡಿನಲ್ಲಿ ಮೂಡಿ ಬರುತ್ತಿದೆ. ಕಂಬಳದ ಕಥೆ ಈ ಚಿತ್ರದ ಹೈಲೈಟ್. ಟ್ರೇಲರ್ ಹಾಗೂ ಪೋಸ್ಟರ್​ ಮೂಲಕ ಈ ವಿಚಾರ ಪ್ರೇಕ್ಷಕರಿಗೆ ಗೊತ್ತಾಗಿದೆ. ಈಗ ‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದ ಅಂಗವಾಗಿ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್​ನಲ್ಲಿ ಈ  ಹಾಡು ಎರಡನೇ ಸ್ಥಾನದಲ್ಲಿದೆ.  ಈ ಮೂಲಕ ‘ಕಾಂತಾರ’ ಚಿತ್ರಕ್ಕೆ ದೊಡ್ಡ ಮೈಲೇಜ್ ಸಿಕ್ಕಿದೆ.

ಅಜನೀಶ್ ಲೋಕನಾಥ್ ಅವರು ಈಗಾಗಲೇ ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಅವರ ಸಂಗೀತ ಸಂಯೋಜನೆಯಲ್ಲಿ ‘ಕಾಂತಾರ’ ಸಿನಿಮಾದ ಹಾಡುಗಳು ಮೂಡಿ ಬಂದಿವೆ. ‘ಸಿಂಗಾರ ಸಿರಿಯೆ’ ಹಾಡಿಗೆ ಅವರು ನೀಡಿದ ಸಂಗೀತ ಕೇಳಿ ಜನರು ತಲೆದೂಗಿದ್ದಾರೆ. ವಿಜಯ್ ಪ್ರಕಾಶ್, ಅನನ್ಯಾ ಭಟ್ ಹಾಗೂ ಪನ್ನಾರ್ ವಲ್ಟುರ್​ ಗಾಯನ ಹಾಡಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಪ್ರಮೋದ್ ಮರವಂತೆ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ
Image
ಹೊಸ ‘ಆಡಿ ಕ್ಯೂ7’ ಕಾರು ಖರೀದಿಸಿ ಖುಷಿಪಟ್ಟ ಶೆಟ್ಟಿ ದಂಪತಿ
Image
ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’
Image
ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

ಇದನ್ನೂ ಓದಿ: ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

ದಸರಾ ಹಬ್ಬದ ಪ್ರಯುಕ್ತ ಈ ಸಿನಿಮಾ ಸೆಪ್ಟೆಂಬರ್ 30ಕ್ಕೆ ರಿಲೀಸ್ ಆಗುತ್ತಿದೆ. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ‘ದಸರಾದ ಜೊತೆಗೆ ಕಾಡ್ಗಿಚ್ಚಿನ ಬಯಲಾಟಕ್ಕೆ ಸಾಕ್ಷಿಯಾಗಿ. ಸೆಪ್ಟೆಂಬರ್ 30ರಂದು ಕಾಂತಾರ ಅನಾವರಣ’ ಎಂದು ಈ ಮೊದಲು ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಘೋಷಣೆ ಆಗಿತ್ತು.

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ