AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್

‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದ ಅಂಗವಾಗಿ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್​ನಲ್ಲಿ ಈ  ಹಾಡು ಎರಡನೇ ಸ್ಥಾನದಲ್ಲಿದೆ. 

‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್
ಸಪ್ತಮಿ-ರಿಷಬ್
TV9 Web
| Edited By: |

Updated on: Aug 16, 2022 | 4:02 PM

Share

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಹಲವು ಚಿತ್ರಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ರಿಲೀಸ್ ಆಗಿದ್ದ ಸಿನಿಮಾದ ಟ್ರೇಲರ್ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಈಗ ಚಿತ್ರದ ಹೊಸ ಸಾಂಗ್ ರಿಲೀಸ್ ಆಗಿದೆ. ‘ಸಿಂಗಾರ ಸಿರಿಯೇ..’ (Singara Siriye) ಹೆಸರಿನ ಹಾಡು ಬಿಡುಗಡೆ ಆಗಿದ್ದು, ಪ್ರೇಕ್ಷಕರು ಈ ಹಾಡಿಗೆ ತಲೆದೂಗಿದ್ದಾರೆ. ಈ ಸಾಂಗ್ ಲಕ್ಷ ಲಕ್ಷ ವೀಕ್ಷಣೆ ಪಡೆದುಕೊಳ್ಳುತ್ತಿದೆ.

‘ಕಾಂತಾರ’ ಚಿತ್ರ ಕರಾವಳಿ ತೀರದ ಸೊಗಡಿನಲ್ಲಿ ಮೂಡಿ ಬರುತ್ತಿದೆ. ಕಂಬಳದ ಕಥೆ ಈ ಚಿತ್ರದ ಹೈಲೈಟ್. ಟ್ರೇಲರ್ ಹಾಗೂ ಪೋಸ್ಟರ್​ ಮೂಲಕ ಈ ವಿಚಾರ ಪ್ರೇಕ್ಷಕರಿಗೆ ಗೊತ್ತಾಗಿದೆ. ಈಗ ‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದ ಅಂಗವಾಗಿ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್​ನಲ್ಲಿ ಈ  ಹಾಡು ಎರಡನೇ ಸ್ಥಾನದಲ್ಲಿದೆ.  ಈ ಮೂಲಕ ‘ಕಾಂತಾರ’ ಚಿತ್ರಕ್ಕೆ ದೊಡ್ಡ ಮೈಲೇಜ್ ಸಿಕ್ಕಿದೆ.

ಅಜನೀಶ್ ಲೋಕನಾಥ್ ಅವರು ಈಗಾಗಲೇ ಅನೇಕ ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಅವರ ಸಂಗೀತ ಸಂಯೋಜನೆಯಲ್ಲಿ ‘ಕಾಂತಾರ’ ಸಿನಿಮಾದ ಹಾಡುಗಳು ಮೂಡಿ ಬಂದಿವೆ. ‘ಸಿಂಗಾರ ಸಿರಿಯೆ’ ಹಾಡಿಗೆ ಅವರು ನೀಡಿದ ಸಂಗೀತ ಕೇಳಿ ಜನರು ತಲೆದೂಗಿದ್ದಾರೆ. ವಿಜಯ್ ಪ್ರಕಾಶ್, ಅನನ್ಯಾ ಭಟ್ ಹಾಗೂ ಪನ್ನಾರ್ ವಲ್ಟುರ್​ ಗಾಯನ ಹಾಡಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಇಷ್ಟವಾಗಿದೆ. ಪ್ರಮೋದ್ ಮರವಂತೆ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ
Image
Rishab Shetty: ಹೊಸ ‘ಆಡಿ ಕ್ಯೂ7’ ಕಾರು ಖರೀದಿಸಿ ಖುಷಿಪಟ್ಟ ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ
Image
ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’
Image
ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

ಇದನ್ನೂ ಓದಿ: ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

ದಸರಾ ಹಬ್ಬದ ಪ್ರಯುಕ್ತ ಈ ಸಿನಿಮಾ ಸೆಪ್ಟೆಂಬರ್ 30ಕ್ಕೆ ರಿಲೀಸ್ ಆಗುತ್ತಿದೆ. ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ‘ದಸರಾದ ಜೊತೆಗೆ ಕಾಡ್ಗಿಚ್ಚಿನ ಬಯಲಾಟಕ್ಕೆ ಸಾಕ್ಷಿಯಾಗಿ. ಸೆಪ್ಟೆಂಬರ್ 30ರಂದು ಕಾಂತಾರ ಅನಾವರಣ’ ಎಂದು ಈ ಮೊದಲು ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಘೋಷಣೆ ಆಗಿತ್ತು.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ