Rishab Shetty: ಆ ವಿಶೇಷ ದಿನಕ್ಕೆ ಐದು ವರ್ಷ; ಪೋಸ್ಟ್ ಹಾಕಿ ನೆನಪಿಸಿಕೊಂಡ ರಿಷಬ್ ಶೆಟ್ಟಿ

ಮಕ್ಕಳಿದಲ್ಲದ ಕನ್ನಡ ಮಾಧ್ಯಮ  ಶಾಲೆಗಳನ್ನು ಮುಚ್ಚುವ ಆದೇಶ ಬಂದಿತ್ತು. ಇದರಿಂದ ಅನೇಕ ಮಕ್ಕಳಿಗೆ ಸಮಸ್ಯೆ ಆಯಿತು. ಇನ್ನು ಗಡಿ ಭಾಗದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂತು. ಈ ಸಮಸ್ಯೆಗಳನ್ನು ಇಟ್ಟುಕೊಂಡು ರಿಷಬ್ ಶೆಟ್ಟಿ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ತೆರೆಗೆ ತಂದರು.

Rishab Shetty: ಆ ವಿಶೇಷ ದಿನಕ್ಕೆ ಐದು ವರ್ಷ; ಪೋಸ್ಟ್ ಹಾಕಿ ನೆನಪಿಸಿಕೊಂಡ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
Follow us
|

Updated on: Aug 23, 2023 | 2:41 PM

ರಿಷಬ್ ಶೆಟ್ಟಿ (Rishab Shetty) ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದಿಂದ ಅವರ ಖ್ಯಾತಿ ವಿಶ್ವಮಟ್ಟಕ್ಕೆ ಹಬ್ಬಿದೆ. ಅವರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ರಿಷಬ್ ಶೆಟ್ಟಿ ಅವರು ನಡೆದುಬಂದ ಹಾದಿಯನ್ನು ಮರೆತಿಲ್ಲ. ಇಂದು (ಆಗಸ್ಟ್ 23) ಅವರಿಗೆ ವಿಶೇಷ ದಿನ. ರಿಷಬ್  ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರ ತೆರೆಗೆ ಬಂದು ಐದು ವರ್ಷಗಳು ಕಳೆದಿವೆ. ಆ ಬಗ್ಗೆ ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಅವರು ‘ರಿಕ್ಕಿ’ ಚಿತ್ರದ ಮೂಲಕ ನಿರ್ದೇಶಕರಾದರು. ಈ ಚಿತ್ರ 2016ರಲ್ಲಿ ರಿಲೀಸ್ ಆಯಿತು. ಬಳಿಕ ತೆರೆಗೆ ಬಂದ ‘ಕಿರಿಕ್ ಪಾರ್ಟಿ’ ರಿಷಬ್ ಶೆಟ್ಟಿ ವೃತ್ತಿ ಜೀವನದ ದಿಕ್ಕನ್ನೇ ಬದಲಿಸಿತು. ಯಾವುದೋ ಒಂದು ರೀತಿಯ ಮಾದರಿಗೆ ಕಟ್ಟುಬಿದ್ದವರಲ್ಲ ರಿಷಬ್. ಹೀಗಾಗಿ, ‘ಕಿರಿಕ್ ಪಾರ್ಟಿ’ ಬಳಿಕ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ನಿರ್ದೇಶನ ಮಾಡಿದರು. 2018ರಲ್ಲಿ ಈ ಚಿತ್ರ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಕೂಡ ಈ ಚಿತ್ರಕ್ಕೆ ಸಿಕ್ಕಿದೆ.

ಮಕ್ಕಳಿದಲ್ಲದ ಕನ್ನಡ ಮಾಧ್ಯಮ  ಶಾಲೆಗಳನ್ನು ಮುಚ್ಚುವ ಆದೇಶ ಬಂದಿತ್ತು. ಇದರಿಂದ ಅನೇಕ ಮಕ್ಕಳಿಗೆ ಸಮಸ್ಯೆ ಆಯಿತು. ಇನ್ನು ಗಡಿ ಭಾಗದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂತು. ಈ ಸಮಸ್ಯೆಗಳನ್ನು ಇಟ್ಟುಕೊಂಡು ರಿಷಬ್ ಶೆಟ್ಟಿ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ತೆರೆಗೆ ತಂದರು.

ಇದನ್ನೂ ಓದಿ: ಯಶ್, ರಿಷಬ್ ಶೆಟ್ಟಿ ಇಬ್ಬರೂ ಒಂದೇ ರೀತಿ: ಹೀಗ್ಯಾಕಂದರು ದುಲ್ಕರ್ ಸಲ್ಮಾನ್

ಬಹುತೇಕ ಮಕ್ಕಳೇ ನಟಿಸಿದ ಈ ಚಿತ್ರದಲ್ಲಿ, ಪ್ರಮೋದ್ ಶೆಟ್ಟಿ, ಅನಂತ್ ನಾಗ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರಕ್ಕೆ ಐದು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಿಷಬ್ ಅವರು ಮೇಕಿಂಗ್ ಹಾಗೂ ಸಿನಿಮಾದ ಕೆಲ ಪ್ರಮುಖ ದೃಶ್ಯಗಳನ್ನು ಜೋಡಿಸಿ ವಿಡಿಯೋ ಮಾಡಿದ್ದಾರೆ. ಅದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋಗೆ ‘ಕನಸು ಕಂಡ ಭಾಷೆಯಲ್ಲಿ ಮಗುವಿಗೆ ಶಿಕ್ಷಣ ಸಿಗಬೇಕೆಂಬ ಆಶಯ, ಕನಸು ಕಂಡ ಕಥೆಯನ್ನು ಜಗಕ್ಕೆ ಹೇಳಬೇಕೆಂಬ ಆಕಾಂಕ್ಷೆ, ಇದೆರಡೂ ಒಂದಾಗಿ ಕನಸೊಂದು ಸಿನಿಮಾವಾಗಿ ತೆರೆ ಮೇಲೆ ಮೂಡಿದ ಆ ದಿನಕ್ಕಿಂದು ಐದು ವರ್ಷ’ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ