Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಆ ವಿಶೇಷ ದಿನಕ್ಕೆ ಐದು ವರ್ಷ; ಪೋಸ್ಟ್ ಹಾಕಿ ನೆನಪಿಸಿಕೊಂಡ ರಿಷಬ್ ಶೆಟ್ಟಿ

ಮಕ್ಕಳಿದಲ್ಲದ ಕನ್ನಡ ಮಾಧ್ಯಮ  ಶಾಲೆಗಳನ್ನು ಮುಚ್ಚುವ ಆದೇಶ ಬಂದಿತ್ತು. ಇದರಿಂದ ಅನೇಕ ಮಕ್ಕಳಿಗೆ ಸಮಸ್ಯೆ ಆಯಿತು. ಇನ್ನು ಗಡಿ ಭಾಗದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂತು. ಈ ಸಮಸ್ಯೆಗಳನ್ನು ಇಟ್ಟುಕೊಂಡು ರಿಷಬ್ ಶೆಟ್ಟಿ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ತೆರೆಗೆ ತಂದರು.

Rishab Shetty: ಆ ವಿಶೇಷ ದಿನಕ್ಕೆ ಐದು ವರ್ಷ; ಪೋಸ್ಟ್ ಹಾಕಿ ನೆನಪಿಸಿಕೊಂಡ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on: Aug 23, 2023 | 2:41 PM

ರಿಷಬ್ ಶೆಟ್ಟಿ (Rishab Shetty) ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ‘ಕಾಂತಾರ’ ಚಿತ್ರದಿಂದ ಅವರ ಖ್ಯಾತಿ ವಿಶ್ವಮಟ್ಟಕ್ಕೆ ಹಬ್ಬಿದೆ. ಅವರ ಮುಂದಿನ ಚಿತ್ರಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ. ರಿಷಬ್ ಶೆಟ್ಟಿ ಅವರು ನಡೆದುಬಂದ ಹಾದಿಯನ್ನು ಮರೆತಿಲ್ಲ. ಇಂದು (ಆಗಸ್ಟ್ 23) ಅವರಿಗೆ ವಿಶೇಷ ದಿನ. ರಿಷಬ್  ವೃತ್ತಿ ಜೀವನಕ್ಕೆ ಮೈಲೇಜ್ ನೀಡಿದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರ ತೆರೆಗೆ ಬಂದು ಐದು ವರ್ಷಗಳು ಕಳೆದಿವೆ. ಆ ಬಗ್ಗೆ ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಅವರು ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಅವರು ‘ರಿಕ್ಕಿ’ ಚಿತ್ರದ ಮೂಲಕ ನಿರ್ದೇಶಕರಾದರು. ಈ ಚಿತ್ರ 2016ರಲ್ಲಿ ರಿಲೀಸ್ ಆಯಿತು. ಬಳಿಕ ತೆರೆಗೆ ಬಂದ ‘ಕಿರಿಕ್ ಪಾರ್ಟಿ’ ರಿಷಬ್ ಶೆಟ್ಟಿ ವೃತ್ತಿ ಜೀವನದ ದಿಕ್ಕನ್ನೇ ಬದಲಿಸಿತು. ಯಾವುದೋ ಒಂದು ರೀತಿಯ ಮಾದರಿಗೆ ಕಟ್ಟುಬಿದ್ದವರಲ್ಲ ರಿಷಬ್. ಹೀಗಾಗಿ, ‘ಕಿರಿಕ್ ಪಾರ್ಟಿ’ ಬಳಿಕ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ನಿರ್ದೇಶನ ಮಾಡಿದರು. 2018ರಲ್ಲಿ ಈ ಚಿತ್ರ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಕೂಡ ಈ ಚಿತ್ರಕ್ಕೆ ಸಿಕ್ಕಿದೆ.

ಮಕ್ಕಳಿದಲ್ಲದ ಕನ್ನಡ ಮಾಧ್ಯಮ  ಶಾಲೆಗಳನ್ನು ಮುಚ್ಚುವ ಆದೇಶ ಬಂದಿತ್ತು. ಇದರಿಂದ ಅನೇಕ ಮಕ್ಕಳಿಗೆ ಸಮಸ್ಯೆ ಆಯಿತು. ಇನ್ನು ಗಡಿ ಭಾಗದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂತು. ಈ ಸಮಸ್ಯೆಗಳನ್ನು ಇಟ್ಟುಕೊಂಡು ರಿಷಬ್ ಶೆಟ್ಟಿ ಅವರು ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರವನ್ನು ತೆರೆಗೆ ತಂದರು.

ಇದನ್ನೂ ಓದಿ: ಯಶ್, ರಿಷಬ್ ಶೆಟ್ಟಿ ಇಬ್ಬರೂ ಒಂದೇ ರೀತಿ: ಹೀಗ್ಯಾಕಂದರು ದುಲ್ಕರ್ ಸಲ್ಮಾನ್

ಬಹುತೇಕ ಮಕ್ಕಳೇ ನಟಿಸಿದ ಈ ಚಿತ್ರದಲ್ಲಿ, ಪ್ರಮೋದ್ ಶೆಟ್ಟಿ, ಅನಂತ್ ನಾಗ್ ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರಕ್ಕೆ ಐದು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಿಷಬ್ ಅವರು ಮೇಕಿಂಗ್ ಹಾಗೂ ಸಿನಿಮಾದ ಕೆಲ ಪ್ರಮುಖ ದೃಶ್ಯಗಳನ್ನು ಜೋಡಿಸಿ ವಿಡಿಯೋ ಮಾಡಿದ್ದಾರೆ. ಅದನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋಗೆ ‘ಕನಸು ಕಂಡ ಭಾಷೆಯಲ್ಲಿ ಮಗುವಿಗೆ ಶಿಕ್ಷಣ ಸಿಗಬೇಕೆಂಬ ಆಶಯ, ಕನಸು ಕಂಡ ಕಥೆಯನ್ನು ಜಗಕ್ಕೆ ಹೇಳಬೇಕೆಂಬ ಆಕಾಂಕ್ಷೆ, ಇದೆರಡೂ ಒಂದಾಗಿ ಕನಸೊಂದು ಸಿನಿಮಾವಾಗಿ ತೆರೆ ಮೇಲೆ ಮೂಡಿದ ಆ ದಿನಕ್ಕಿಂದು ಐದು ವರ್ಷ’ ಎಂದು ಅವರು ಕ್ಯಾಪ್ಷನ್ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ಪತಿಯೊಂದಿಗೆ ಜಗಳವಾಡಿ ಬೆಂಕಿ ಹಚ್ಚಿಕೊಂಡು ಹೆಂಡತಿ ಆತ್ಮಹತ್ಯೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!