AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ದೇಶಾದ್ಯಂತ ‘ಕಾಂತಾರ’ ಗೆದ್ದಿದ್ದು ಯಾಕೆ? ಬಹಿರಂಗ ವೇದಿಕೆಯಲ್ಲಿ ಕಾರಣ ತಿಳಿಸಿದ ರಿಷಬ್​ ಶೆಟ್ಟಿ

Kantara Movie | Chetan Bhagat: ‘ಕಾಂತಾರ’ ಸಿನಿಮಾ ದೇಶಾದ್ಯಂತ ಯಶಸ್ಸು ಕಂಡಿದ್ದಕ್ಕೆ ಕಾರಣ ಏನು ಇರಬಹುದು ಎಂದು ರಿಷಬ್​ ಶೆಟ್ಟಿ ವಿಶ್ಲೇಷಣೆ ಮಾಡಿದ್ದಾರೆ. ಈ ಕುರಿತು ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Rishab Shetty: ದೇಶಾದ್ಯಂತ ‘ಕಾಂತಾರ’ ಗೆದ್ದಿದ್ದು ಯಾಕೆ? ಬಹಿರಂಗ ವೇದಿಕೆಯಲ್ಲಿ ಕಾರಣ ತಿಳಿಸಿದ ರಿಷಬ್​ ಶೆಟ್ಟಿ
ರಿಷಬ್ ಶೆಟ್ಟಿ
TV9 Web
| Updated By: ಮದನ್​ ಕುಮಾರ್​|

Updated on:Nov 27, 2022 | 5:17 PM

Share

ಕನ್ನಡದ ‘ಕಾಂತಾರ’ ಸಿನಿಮಾ (Kantara Movie) ದೇಶಾದ್ಯಂತ ಈ ಪರಿ ಯಶಸ್ಸು ಕಾಣುತ್ತದೆ ಎಂದು ಬಹುತೇಕರು ನಿರೀಕ್ಷಿಸಿರಲಿಲ್ಲ. ಸೆ.30ರಂದು ಸಿನಿಮಾ ಬಿಡುಗಡೆ ಆದ ಬಳಿಕ ಜನರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಕ್ಕಿತು. ನಂತರ ಬೇರೆ ಭಾಷೆಗಳಿಗೂ ಡಬ್​ ಆಗಿ ಅಲ್ಲಿಯೂ ಉತ್ತಮ ಪ್ರದರ್ಶನ ಕಾಣಲು ಆರಂಭಿಸಿತು. ಅಂತಿಮವಾಗಿ ಈ ಚಿತ್ರ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿ ಸೈ ಎನಿಸಿಕೊಂಡಿತು. ‘ಕಾಂತಾರ’ ಸಿನಿಮಾದಿಂದ ನಟ, ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿತು. ಇಂದು ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಇತ್ತೀಚೆಗೆ ಅವರು ಖ್ಯಾತ ಲೇಖಕ ಚೇತನ್​ ಭಗತ್​ (Chetan Bhagat) ಜೊತೆ ‘ಕಾಂತಾರ’ ಯಶಸ್ಸಿನ ಕುರಿತು ಮಾತನಾಡಿದ್ದಾರೆ.

‘ಟೈಮ್ಸ್​ ನೌ ಸಮಿಟ್​ 2022’ ಕಾರ್ಯಕ್ರಮದ ವೇದಿಕೆಯಲ್ಲಿ ಹಿರಿಯ ನಟ ಅನುಪಮ್​ ಖೇರ್​, ಲೇಖಕ ಚೇತನ್​ ಭಗತ್​ ಜೊತೆ ರಿಷಬ್​ ಶೆಟ್ಟಿ ಅವರು ಚರ್ಚೆ ನಡೆಸಿದ್ದಾರೆ. ಈ ವೇಳೆ ಬಾಲಿವುಡ್​ ಸಿನಿಮಾಗಳ ಸೋಲು ಮತ್ತು ದಕ್ಷಿಣ ಭಾರತದ ಚಿತ್ರಗಳ ಗೆಲುವಿನ ಬಗ್ಗೆ ಮಾತನಾಡಲಾಗಿದೆ. ಅದರಲ್ಲಿ ‘ಕಾಂತಾರ’ ಚಿತ್ರವನ್ನು ಒಂದು ಉದಾಹರಣೆಯಾಗಿ ತೆಗೆದುಕೊಳ್ಳಲಾಯ್ತು. ಈ ವೇಳೆ ಮಾತನಾಡುತ್ತ, ತಮ್ಮ ಸಿನಿಮಾ ದೇಶಾದ್ಯಂತ ಯಶಸ್ಸು ಕಂಡಿದ್ದಕ್ಕೆ ಕಾರಣ ಏನು ಇರಬಹುದು ಎಂದು ರಿಷಬ್​ ಶೆಟ್ಟಿ ವಿಶ್ಲೇಷಣೆ ಮಾಡಿದ್ದಾರೆ.

‘ಲಾಕ್​ಡೌನ್​ ಬಳಿಕ ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ನಮ್ಮ ನೆಲೆದ ಕಥೆಗಳನ್ನು ಹೆಚ್ಚಾಗಿ ವೀಕ್ಷಿಸಲು ಬಯಸುತ್ತಿದ್ದಾರೆ. ಭಾರತದ ಬಹುತೇಕ ಕಮರ್ಷಿಯಲ್​ ಸಿನಿಮಾಗಳು ಪಾಶ್ಚಿಮಾತ್ಯ ಚಿತ್ರಗಳಿಗೆ ಪ್ರಭಾವಿತ ಆಗಿರುತ್ತವೆ. ಭಾರತದ ನೆಲದ ಕಥೆಗಳು ಒಟಿಟಿಯಲ್ಲಿ ಸಿಗಲ್ಲ. ಅದು ಸಿಗೋದು ನಮ್ಮ ಹಳ್ಳಿಗಳಲ್ಲಿ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

‘ಕಾಂತಾರ ಚಿತ್ರದಲ್ಲಿ ನಾನು ನನ್ನ ಹಳ್ಳಿಯ ಕಥೆಯನ್ನು ಹೇಳಿದ್ದೇನೆ. ಪ್ರಾದೇಶಿಕ ವಿಷಯವೇ ಹೆಚ್ಚು ಸಾರ್ವತ್ರಿಕ ಆಗುತ್ತದೆ ಅಂತ ನಾನು ನಂಬಿದ್ದೇನೆ. ದೈವಾರಾಧನೆ ಬಗ್ಗೆ ನಾವು ಸಿನಿಮಾ ಮಾಡಿದ್ದೇವೆ. ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ನಮ್ಮ ಬದುಕಿನ ಶೈಲಿ ಕೃಷಿಗೆ ಅಂಟಿಕೊಂಡಿರುತ್ತದೆ. ಕಾಂತಾರದಲ್ಲಿ ದೈವಾರಾಧನೆ ತೋರಿಸಿದ ರೀತಿಯೇ ದೇಶದ ಪ್ರತಿ ಹಳ್ಳಿಯ ಜನರು ಒಂದು ಶಕ್ತಿಯನ್ನು ನಂಬುತ್ತಾರೆ. ಅದು ನಮ್ಮೆಲ್ಲರ ಭಾವನೆಯ ವಿಷಯ. ಪ್ರಾಯಶಃ ಆ ವಿಚಾರವೇ ಎಲ್ಲರಿಗೂ ಕನೆಕ್ಟ್​ ಆಗಿದೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

‘ಭಾರತೀಯ ಚಿತ್ರರಂಗಕ್ಕೆ ಹಿಂದಿ ಸಿನಿಮಾಗಳ ದೊಡ್ಡ ಕೊಡುಗೆ ಇದೆ. ಅವು ಕೂಡ ಗೆಲ್ಲುತ್ತಿವೆ. ದಿ ಕಾಶ್ಮೀರ್​ ಫೈಲ್ಸ್​ ಚಿತ್ರಕ್ಕೆ ನಾವು ಏನು ಹೇಳಬೇಕು’ ಎಂದು ಹೇಳುವ ಮೂಲಕ ಬಾಲಿವುಡ್​ನಲ್ಲೂ ಗೆಲ್ಲುವ ಚಿತ್ರಗಳು ಬರುತ್ತಿವೆ ಎಂದು ರಿಷಬ್​ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:17 pm, Sun, 27 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!