AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಪ್ರೀಕ್ವೆಲ್ ಕೆಲಸ ಎಲ್ಲಿಯವರೆಗೆ ಬಂತು? ರಿಷಬ್ ಶೆಟ್ಟಿ ಕೊಟ್ಟರು ಉತ್ತರ

‘ಕಾಂತಾರ 2’ ಸಾಕಷ್ಟು ಹೈಪ್ ಪಡೆದುಕೊಂಡಿರುವ ಸಿನಿಮಾ. ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿವೆ. ಇಷ್ಟು ಹೈಪ್ ಇರುವುದರಿಂದ ಅದನ್ನು ದೊಡ್ಡ ಮಟ್ಟದಲ್ಲಿ ಲಾಂಚ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಕಾಂತಾರ ಪ್ರೀಕ್ವೆಲ್ ಕೆಲಸ ಎಲ್ಲಿಯವರೆಗೆ ಬಂತು? ರಿಷಬ್ ಶೆಟ್ಟಿ ಕೊಟ್ಟರು ಉತ್ತರ
ರಿಷಬ್-ಕಾಂತಾರ 2
Follow us
ರಾಜೇಶ್ ದುಗ್ಗುಮನೆ
|

Updated on:Aug 06, 2023 | 9:11 AM

ನಟ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ 2’ ಸಿನಿಮಾ (Kantara 2 Movie) ಕಳೆದ ವರ್ಷ ರಿಲೀಸ್ ಆಗಿ ಭರ್ಜರಿ ಯಶಸ್ಸು ಕಂಡಿತು. ಈ ಚಿತ್ರದ ಮೂಲಕ ರಿಷಬ್ ಶೆಟ್ಟಿ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ಸದ್ಯ ಅವರ ಗಮನ ‘ಕಾಂತಾರ 2’ ಮೇಲಿದೆ. ಈ ಚಿತ್ರದ ಶೂಟಿಂಗ್ ಆಗಸ್ಟ್​​ನಿಂದ ಆರಂಭ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಸದ್ಯಕ್ಕೆ ಆ ಬಗ್ಗೆ ಯಾವುದೇ ಅಪ್​ಡೇಟ್ ಇಲ್ಲ. ಈಗ ರಿಷಬ್ ಶೆಟ್ಟಿ ಅವರು ಸಿನಿಮಾ ಕುರಿತು ಮಾತನಾಡಿದ್ದಾರೆ.

ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಟೋಬಿ’ ಸಿನಿಮಾ ಆಗಸ್ಟ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೊಂದು ರಿವೇಂಜ್ ಕಥೆ ಎನ್ನಲಾಗಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ರಿಷಬ್ ಹಾಗೂ ರಕ್ಷಿತ್ ಅವರು ಈ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ್ದಾರೆ. ಬಳಿಕ ಅವರು ಟಿವಿ9 ಕನ್ನಡ ಜೊತೆಗೆ ಮಾತಿಗೆ ಸಿಕ್ಕರು.

ಬೇರೆಯವರ ಸಿನಿಮಾದ ಟ್ರೇಲರ್ ಲಾಂಚ್​ಗೆ ಬಂದಾಗ ತಮ್ಮ ಸಿನಿಮಾ ಬಗ್ಗೆ ಹೇಳೋಕೆ ಯಾರೂ ಇಷ್ಟಪಡುವುದಿಲ್ಲ. ರಿಷಬ್ ಶೆಟ್ಟಿ ಕೂಡ ಇದಕ್ಕೆ ಹೊರತಾಗಿಲ್ಲ. ‘ಕಾಂತಾರ 2 ಸಿನಿಮಾದ ಕೆಲಸಗಳು ಎಲ್ಲಿಯವರೆಗೆ ಬಂತು’ ಎಂದು ಕೇಳಲಾಯಿತು. ಇದಕ್ಕೆ ರಿಷಬ್ ತಮ್ಮದೇ ಶೈಲಿಯಲ್ಲಿ ಉತ್ತರಿಸಿದ್ದಾರೆ. ‘ಆಗಸ್ಟ್​ 25ಕ್ಕೆ ಟೋಬಿ ಬರ್ತಿದೆ. ಸೆಪ್ಟೆಂಬರ್ 1ರಂದು ಸಪ್ತ ಸಾಗರದಾಚೆ ಎಲ್ಲೋ ಚಿತ್ರ ರಿಲೀಸ್ ಆಗುತ್ತಿದೆ. ಅದನ್ನು ನೋಡಿ. ನಮ್ಮ ಸಿನಿಮಾ ಬರೋಕೆ ಇನ್ನು ಸಾಕಷ್ಟು ಸಮಯವಿದೆ’ ಎಂದರು.

‘ಕಾಂತಾರ 2’ ಸಾಕಷ್ಟು ಹೈಪ್ ಪಡೆದುಕೊಂಡಿರುವ ಸಿನಿಮಾ. ಈ ಚಿತ್ರದ ಸ್ಕ್ರಿಪ್ಟ್​ ಕೆಲಸಗಳು ಪೂರ್ಣಗೊಂಡಿವೆ. ಇಷ್ಟು ಹೈಪ್ ಇರುವಾಗ ಅದನ್ನು ದೊಡ್ಡ ಮಟ್ಟದಲ್ಲಿ ಲಾಂಚ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿರುತ್ತದೆ. ಹೀಗಾಗಿ ಸಾರ್ವಜನಿಕ ವೇದಿಕೆಗಳಲ್ಲಿ ಈ ಬಗ್ಗೆ ತಂಡ ಮಾಹಿತಿ ಬಿಟ್ಟುಕೊಡಲು ಇಷ್ಟಪಡುವುದಿಲ್ಲ.

ಇದನ್ನೂ ಓದಿ: ಮೆಲ್ಬರ್ನ್‌ನ ಭಾರತೀಯ ಚಲನಚಿತ್ರೋತ್ಸವ 2023: ನಾಮಿನೇಟ್ ಆದ ‘ಕಾಂತಾರ’, ‘ಹದಿನೇಳೆಂಟು’ ಸಿನಿಮಾ

‘ಕಾಂತಾರ 2’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ಮೊದಲ ಭಾಗದಲ್ಲಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದರು. ಪ್ರೀಕ್ವೆಲ್​ನಲ್ಲಿ ಯಾರೆಲ್ಲ ನಟಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Sun, 6 August 23

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ