AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವರ್​ಹೌಸ್ ಫೋಟೋ; ವೈರಲ್ ಚಿತ್ರದಿಂದ ಅಭಿಮಾನಿಗಳಿಗೆ ಮೂಡಿದೆ ಕುತೂಹಲ

ಮಾರ್ಚ್​ 1ರಂದು ಪ್ರಶಾಂತ್ ನೀಲ್ ಮನೆಯಲ್ಲಿ ಕಾರ್ಯಕ್ರಮ ಒಂದನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕಾಗಿ ಜೂನಿಯರ್​ ಎನ್​ಟಿಆರ್ ಅವರು ತೆರೆಳಿದ್ದರು. ಎನ್​ಟಿಆರ್ ಜೊತೆ ಅವರ ಪತ್ನಿ, ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಕೂಡ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ ಒತ್ತುತ್ತಿದ್ದಾರೆ.

ಪವರ್​ಹೌಸ್ ಫೋಟೋ; ವೈರಲ್ ಚಿತ್ರದಿಂದ ಅಭಿಮಾನಿಗಳಿಗೆ ಮೂಡಿದೆ ಕುತೂಹಲ
ರಿಷಬ್-ಜೂನಿಯರ್ ಎನ್​ಟಿಆರ್-ಪ್ರಶಾಂತ್ ನೀಲ್
ರಾಜೇಶ್ ದುಗ್ಗುಮನೆ
|

Updated on: Mar 02, 2024 | 6:39 AM

Share

ನಟ ಪ್ರಶಾಂತ್ ನೀಲ್ (Prashanth Neel) ಅವರಿಗೆ ವಿಶ್ವಾದ್ಯಂತ ಜನಪ್ರಿಯತೆ ಇದೆ. ಅವರು ‘ಕೆಜಿಎಫ್’, ‘ಕೆಜಿಎಫ್ 2’, ‘ಸಲಾರ್’ ಅಂಥ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಮೂಲಕ ಖ್ಯಾತಿ ಪಡೆದಿದ್ದಾರೆ. ಜೂನಿಯರ್ ಎನ್​ಟಿಆರ್ ಅವರು ಹಲವು ಸೂಪರ್ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಈ ಮೂವರೂ ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಂಡರೆ ಅಭಿಮಾನಿಗಳ ಪಾಲಿಗೆ ಹಬ್ಬವೇ. ಇಂಥ ಪವರ್​ಹೌಸ್​ ಫೋಟೋ ವೈರಲ್ ಆಗಿದೆ. ಇದಕ್ಕೆ ಅಭಿಮಾನಿಗಳಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಮಾರ್ಚ್​ 1ರಂದು ಪ್ರಶಾಂತ್ ನೀಲ್ ಮನೆಯಲ್ಲಿ ಕಾರ್ಯಕ್ರಮ ಒಂದನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕಾಗಿ ಜೂನಿಯರ್​ ಎನ್​ಟಿಆರ್ ಅವರು ತೆರೆಳಿದ್ದರು. ಎನ್​ಟಿಆರ್ ಜೊತೆ ಅವರ ಪತ್ನಿ, ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಕೂಡ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ ಒತ್ತುತ್ತಿದ್ದಾರೆ.

ಜೂನಿಯರ್​ ಎನ್​ಟಿಆರ್ ಅವರ ಜೊತೆ ಪ್ರಶಾಂತ್ ನೀಲ್ ಸಿನಿಮಾ ಮಾಡುತ್ತಿರುವ ವಿಚಾರ ಗೊತ್ತೇ ಇದೆ. ಈ ಚಿತ್ರದ ಕೆಲಸಗಳು ಇನ್ನಷ್ಟೇ ಆರಂಭ ಆಗಬೇಕಿದೆ. ‘ಕಾಂತಾರ’ ಹಾಗೂ ‘ಕೆಜಿಎಫ್’ ಸರಣಿಯನ್ನು ನಿರ್ಮಾಣ ಮಾಡಿದ್ದು ಹೊಂಬಾಳೆ ಫಿಲ್ಮ್ಸ್. ಹೀಗಾಗಿ, ಪ್ರಶಾಂತ್ ನೀಲ್ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ಈಗ ಈ ಮೂವರನ್ನು ಒಟ್ಟಾಗಿ ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಈ ರೀತಿ ಸ್ಟಾರ್​ಗಳು ಒಂದೆಡೆ ಸೇರಿದಾಗ ಸಿನಿಮಾ ಬಗ್ಗೆ ಕುತೂಹಲ ಮೂಡೋದು ಸಹಜ. ಈಗಲೂ ಹಾಗೆಯೇ ಆಗಿದೆ. ಜೂನಿಯರ್​ ಎನ್​ಟಿಆರ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಕೂಡ ನಟಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಪ್ರಶ್ನೆಗೆ ಪ್ರಶಾಂತ್ ನೀಲ್ ಅವರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ಜೂನಿಯರ್ ಎನ್‌ಟಿಆರ್ ಅಭಿಮಾನಿಗಳು ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಘರ್ಷಣೆ

ಜೂನಿಯರ್ ಎನ್​ಟಿಆರ್ ಅವರು ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದಾದ ಬಳಿಕ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ನೀಲ್ ಅವರು ಸದ್ಯ ಬ್ರೇಕ್​ನಲ್ಲಿ ಇದ್ದಾರೆ. ಜೂನಿಯರ್ ಎನ್​ಟಿಆರ್ ‘ವಾರ್ 2’ ಕೆಲಸ ಪೂರ್ಣಗೊಳಿಸಿದ ಬಳಿಕ ಇವರ ಸಿನಿಮಾ ಕೆಲಸಗಳು ಆರಂಭ ಆಗಲಿವೆ. ರಿಷಬ್ ಶೆಟ್ಟಿ ಅವರು ‘ಕಾಂತಾರ: ಅಧ್ಯಾಯ 1’ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು