AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ 2’ಗಾಗಿ ಪುರಾತನ ಸಮರ ಕಲೆಯ ಅಭ್ಯಾಸದಲ್ಲಿ ತೊಡಗಿದ ರಿಷಬ್

Rishab Shetty: ರಿಷಬ್ ಶೆಟ್ಟಿ ‘ಕಾಂತಾರ 2’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಪಾತ್ರಕ್ಕಾಗಿ ಬಹಳ ಶ್ರಮ ಹಾಕುತ್ತಿದ್ದಾರೆ. ಇದೀಗ ಸಿನಿಮಾಕ್ಕಾಗಿ ಭಾರತದ ಪುರಾತನ ಸಮರ ಕಲೆಯೊಂದನ್ನು ಕಲಿಯುತ್ತಿದ್ದಾರೆ. ಮಾಹಿತಿ ಇಲ್ಲಿದೆ.

‘ಕಾಂತಾರ 2’ಗಾಗಿ ಪುರಾತನ ಸಮರ ಕಲೆಯ ಅಭ್ಯಾಸದಲ್ಲಿ ತೊಡಗಿದ ರಿಷಬ್
ರಿಷಬ್ ಶೆಟ್ಟಿ
ಮಂಜುನಾಥ ಸಿ.
|

Updated on: Aug 22, 2024 | 12:14 PM

Share

ಸದ್ಯಕ್ಕೆ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ‘ಕಾಂತಾರ 2’ ಒಂದು. ‘ಕಾಂತಾರ’ ಸಿನಿಮಾ ಭಾರಿ ದೊಡ್ಡ ಹಿಟ್ ಆದ ಬೆನ್ನಲ್ಲೆ ಘೋಷಣೆಯಾದ ‘ಕಾಂತಾರ 2’ ಸಿನಿಮಾವನ್ನು, ರಿಷಬ್ ಶೆಟ್ಟಿ ಅವರೇ ನಿರ್ದೇಶಿಸಿ, ನಟಿಸುತ್ತಿದ್ದು, ಈ ಸಿನಿಮಾವನ್ನು ಭಾರಿ ಬಜೆಟ್​ನೊಂದಿಗೆ ಬಲು ಜಾಗರೂಕತೆಯಿಂದ ಕಟ್ಟುತ್ತಿದ್ದಾರೆ. ಸಿನಿಮಾಕ್ಕಾಗಿ ಬಲು ದೊಡ್ಡ ಸೆಟ್​ಗಳನ್ನು ನಿರ್ಮಿಸಿರುವುದು ಮಾತ್ರವೇ ಅಲ್ಲದೆ, ಸಿನಿಮಾದ ಪಾತ್ರಕ್ಕಾಗಿ ಹೆಚ್ಚುವರಿ ಶ್ರಮ ಹಾಕುತ್ತಿದ್ದಾರೆ. ಇದೀಗ ‘ಕಾಂತಾರ 2’ ಸಿನಿಮಾಕ್ಕಾಗಿ ಪುರಾತನ ಸಮರ ಕಲೆಯೊಂದನ್ನು ಕಲಿಯುತ್ತಿದ್ದಾರೆ ರಿಷಬ್ ಶೆಟ್ಟಿ.

ಕೇರಳದ ಪುರಾತನ ಸಮರ ಕಲೆ ‘ಕಲರಿಪಯಟ್ಟು’ ಅನ್ನು ರಿಷಬ್ ಶೆಟ್ಟಿ ಕಲಿಯುತ್ತಿದ್ದಾರೆ. ಸಿನಿಮಾದ ಆಕ್ಷನ್ ದೃಶ್ಯಗಳಲ್ಲಿ ‘ಕಲರಿಪಯಟ್ಟು’ ಸಮರ ಕಲೆಯನ್ನು ಬಳಸಲಾಗುತ್ತಿದೆ. ಸಿನಿಮಾದ ನಾಯಕ ಕಲರಿಪಯಟ್ಟು ಸಮರ ಕಲೆಯ ಪರಿಣಿತನಾಗಿರುತ್ತಾನೆ, ಹಾಗಾಗಿ ನಾಯಕ ಪಾತ್ರಧಾರಿ ರಿಷಬ್ ಶೆಟ್ಟಿ ಇದೀಗ ಕಲರಿಪಯಟ್ಟು ಸಮರ ಕಲೆಯನ್ನು ಅಭ್ಯಾಸ ಮಾಡುತ್ತಿದ್ದಾರೆ.

ತುಳುನಾಡಿನ ಸೃಷ್ಟಿಕರ್ತ ಎಂದೇ ನಂಬಲಾಗಿರುವ ಪರಶುರಾಮ, ಕಳರಿಪಯಟ್ಟು ಸಮರ ಕಲೆಯನ್ನು ಶಿವನಿಂದ ಕಲಿತನು ಎಂಬ ಪ್ರತೀತಿ ಇದೆ. ಇದೀಗ ರಿಷಬ್ ಶೆಟ್ಟಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಸಿನಿಮಾ ತುಳುನಾಡಿನ ಪೌರಾಣಿಕ ಕತೆಯನ್ನು ಆಧರಿಸಿದ್ದು, ಸಿನಿಮಾದಲ್ಲಿ ಕಳರಿಪಯಟ್ಟುವಿಗೆ ವಿಶೇಷ ಸ್ಥಾನವಿದೆಯಂತೆ. ಹಾಗಾಗಿಯೇ ರಿಷಬ್ ಶೆಟ್ಟಿ ಕಳರಿಪಯಟ್ಟು ಸಮರ ಕಲೆಯನ್ನು ಅಭ್ಯಾಸ ಮಾಡುತ್ತಿದ್ದಾರೆ. ಈ ಕಲೆ ಕೇರಳದ ಅತ್ಯಂತ ಪುರಾತನ ಸಮರ ಕಲೆಯೆಂದು ಕರೆಯಲಾಗುತ್ತದೆ.

ಇದನ್ನೂ ಓದಿ:ಆಗಸ್ಟ್ ಅಂತ್ಯಕ್ಕೆ ‘ಕಾಂತಾರ: ಚಾಪ್ಟರ್ 1’ ನಾಲ್ಕನೇ ಹಂತದ ಶೂಟಿಂಗ್; ಆ್ಯಕ್ಷನ್ ದೃಶ್ಯಗಳ ಚಿತ್ರೀಕರಣ

ಶಂಕರ್ ನಾಗ್ ನಟಿಸಿರುವ ಮೊದಲ ಕನ್ನಡ ಸಿನಿಮಾ ‘ಒಂದಾನೊಂದು ಕಾಲದಲ್ಲಿ’ ಸಿನಿಮಾದಲ್ಲಿ ಸಹ ಕಲರಿಪಯಟ್ಟು ಸಮರ ಕಲೆಯನ್ನು ಬಳಸಿಕೊಳ್ಳಲಾಗಿತ್ತು. ಆ ಸಿನಿಮಾದಲ್ಲಿ ಶಂಕರ್ ನಾಗ್ ಹಾಗೂ ಸುಂದರ್ ರಾಜ್ ಅವರು ಮಾಡುವ ಕಲರಿಪಯಟ್ಟು ಕಾಳಗ ಈಗಲೂ ಕನ್ನಡದ ಅತ್ಯುತ್ತಮ ಕಾಳಗ ದೃಶ್ಯಗಳಲ್ಲಿ ಒಂದು. ಇದೀಗ ಅದೇ ಕಲೆಯನ್ನು ರಿಷಬ್ ಶೆಟ್ಟಿ ತಮ್ಮ ಸಿನಿಮಾದಲ್ಲಿಯೂ ಬಳಸಿಕೊಳ್ಳಲಿದ್ದಾರೆ.

‘ಕಾಂತಾರ 2’ ಸಿನಿಮಾಕ್ಕಾಗಿ ರಿಷಬ್ ಶೆಟ್ಟಿ ತಮ್ಮ ಹುಟ್ಟೂರಾದ ಕೆರಾಡಿ ಬಳಿ ದೊಡ್ಡ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಸಿನಿಮಾ ಚಿತ್ರೀಕರಣ ಮೂರು ಶೆಡ್ಯೂಲ್​ಗಳು ಈಗಾಗಲೇ ಮುಗಿದಿವೆ. ಇದೀಗ ನಾಲ್ಕನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗುತ್ತಿದೆ. ಈ ನಾಲ್ಕನೇ ಹಂತದಲ್ಲಿ ಸಿನಿಮಾದ ಆಕ್ಷನ್ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗುತ್ತಿದೆ. ಅದಕ್ಕಾಗಿಯೇ ಈಗ ರಿಷಬ್ ಶೆಟ್ಟಿ ತಯಾರಾಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ