‘ಕಾಂತಾರ 2’ಗಾಗಿ ಪುರಾತನ ಸಮರ ಕಲೆಯ ಅಭ್ಯಾಸದಲ್ಲಿ ತೊಡಗಿದ ರಿಷಬ್

Rishab Shetty: ರಿಷಬ್ ಶೆಟ್ಟಿ ‘ಕಾಂತಾರ 2’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದ ಪಾತ್ರಕ್ಕಾಗಿ ಬಹಳ ಶ್ರಮ ಹಾಕುತ್ತಿದ್ದಾರೆ. ಇದೀಗ ಸಿನಿಮಾಕ್ಕಾಗಿ ಭಾರತದ ಪುರಾತನ ಸಮರ ಕಲೆಯೊಂದನ್ನು ಕಲಿಯುತ್ತಿದ್ದಾರೆ. ಮಾಹಿತಿ ಇಲ್ಲಿದೆ.

‘ಕಾಂತಾರ 2’ಗಾಗಿ ಪುರಾತನ ಸಮರ ಕಲೆಯ ಅಭ್ಯಾಸದಲ್ಲಿ ತೊಡಗಿದ ರಿಷಬ್
ರಿಷಬ್ ಶೆಟ್ಟಿ
Follow us
|

Updated on: Aug 22, 2024 | 12:14 PM

ಸದ್ಯಕ್ಕೆ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ‘ಕಾಂತಾರ 2’ ಒಂದು. ‘ಕಾಂತಾರ’ ಸಿನಿಮಾ ಭಾರಿ ದೊಡ್ಡ ಹಿಟ್ ಆದ ಬೆನ್ನಲ್ಲೆ ಘೋಷಣೆಯಾದ ‘ಕಾಂತಾರ 2’ ಸಿನಿಮಾವನ್ನು, ರಿಷಬ್ ಶೆಟ್ಟಿ ಅವರೇ ನಿರ್ದೇಶಿಸಿ, ನಟಿಸುತ್ತಿದ್ದು, ಈ ಸಿನಿಮಾವನ್ನು ಭಾರಿ ಬಜೆಟ್​ನೊಂದಿಗೆ ಬಲು ಜಾಗರೂಕತೆಯಿಂದ ಕಟ್ಟುತ್ತಿದ್ದಾರೆ. ಸಿನಿಮಾಕ್ಕಾಗಿ ಬಲು ದೊಡ್ಡ ಸೆಟ್​ಗಳನ್ನು ನಿರ್ಮಿಸಿರುವುದು ಮಾತ್ರವೇ ಅಲ್ಲದೆ, ಸಿನಿಮಾದ ಪಾತ್ರಕ್ಕಾಗಿ ಹೆಚ್ಚುವರಿ ಶ್ರಮ ಹಾಕುತ್ತಿದ್ದಾರೆ. ಇದೀಗ ‘ಕಾಂತಾರ 2’ ಸಿನಿಮಾಕ್ಕಾಗಿ ಪುರಾತನ ಸಮರ ಕಲೆಯೊಂದನ್ನು ಕಲಿಯುತ್ತಿದ್ದಾರೆ ರಿಷಬ್ ಶೆಟ್ಟಿ.

ಕೇರಳದ ಪುರಾತನ ಸಮರ ಕಲೆ ‘ಕಲರಿಪಯಟ್ಟು’ ಅನ್ನು ರಿಷಬ್ ಶೆಟ್ಟಿ ಕಲಿಯುತ್ತಿದ್ದಾರೆ. ಸಿನಿಮಾದ ಆಕ್ಷನ್ ದೃಶ್ಯಗಳಲ್ಲಿ ‘ಕಲರಿಪಯಟ್ಟು’ ಸಮರ ಕಲೆಯನ್ನು ಬಳಸಲಾಗುತ್ತಿದೆ. ಸಿನಿಮಾದ ನಾಯಕ ಕಲರಿಪಯಟ್ಟು ಸಮರ ಕಲೆಯ ಪರಿಣಿತನಾಗಿರುತ್ತಾನೆ, ಹಾಗಾಗಿ ನಾಯಕ ಪಾತ್ರಧಾರಿ ರಿಷಬ್ ಶೆಟ್ಟಿ ಇದೀಗ ಕಲರಿಪಯಟ್ಟು ಸಮರ ಕಲೆಯನ್ನು ಅಭ್ಯಾಸ ಮಾಡುತ್ತಿದ್ದಾರೆ.

ತುಳುನಾಡಿನ ಸೃಷ್ಟಿಕರ್ತ ಎಂದೇ ನಂಬಲಾಗಿರುವ ಪರಶುರಾಮ, ಕಳರಿಪಯಟ್ಟು ಸಮರ ಕಲೆಯನ್ನು ಶಿವನಿಂದ ಕಲಿತನು ಎಂಬ ಪ್ರತೀತಿ ಇದೆ. ಇದೀಗ ರಿಷಬ್ ಶೆಟ್ಟಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಸಿನಿಮಾ ತುಳುನಾಡಿನ ಪೌರಾಣಿಕ ಕತೆಯನ್ನು ಆಧರಿಸಿದ್ದು, ಸಿನಿಮಾದಲ್ಲಿ ಕಳರಿಪಯಟ್ಟುವಿಗೆ ವಿಶೇಷ ಸ್ಥಾನವಿದೆಯಂತೆ. ಹಾಗಾಗಿಯೇ ರಿಷಬ್ ಶೆಟ್ಟಿ ಕಳರಿಪಯಟ್ಟು ಸಮರ ಕಲೆಯನ್ನು ಅಭ್ಯಾಸ ಮಾಡುತ್ತಿದ್ದಾರೆ. ಈ ಕಲೆ ಕೇರಳದ ಅತ್ಯಂತ ಪುರಾತನ ಸಮರ ಕಲೆಯೆಂದು ಕರೆಯಲಾಗುತ್ತದೆ.

ಇದನ್ನೂ ಓದಿ:ಆಗಸ್ಟ್ ಅಂತ್ಯಕ್ಕೆ ‘ಕಾಂತಾರ: ಚಾಪ್ಟರ್ 1’ ನಾಲ್ಕನೇ ಹಂತದ ಶೂಟಿಂಗ್; ಆ್ಯಕ್ಷನ್ ದೃಶ್ಯಗಳ ಚಿತ್ರೀಕರಣ

ಶಂಕರ್ ನಾಗ್ ನಟಿಸಿರುವ ಮೊದಲ ಕನ್ನಡ ಸಿನಿಮಾ ‘ಒಂದಾನೊಂದು ಕಾಲದಲ್ಲಿ’ ಸಿನಿಮಾದಲ್ಲಿ ಸಹ ಕಲರಿಪಯಟ್ಟು ಸಮರ ಕಲೆಯನ್ನು ಬಳಸಿಕೊಳ್ಳಲಾಗಿತ್ತು. ಆ ಸಿನಿಮಾದಲ್ಲಿ ಶಂಕರ್ ನಾಗ್ ಹಾಗೂ ಸುಂದರ್ ರಾಜ್ ಅವರು ಮಾಡುವ ಕಲರಿಪಯಟ್ಟು ಕಾಳಗ ಈಗಲೂ ಕನ್ನಡದ ಅತ್ಯುತ್ತಮ ಕಾಳಗ ದೃಶ್ಯಗಳಲ್ಲಿ ಒಂದು. ಇದೀಗ ಅದೇ ಕಲೆಯನ್ನು ರಿಷಬ್ ಶೆಟ್ಟಿ ತಮ್ಮ ಸಿನಿಮಾದಲ್ಲಿಯೂ ಬಳಸಿಕೊಳ್ಳಲಿದ್ದಾರೆ.

‘ಕಾಂತಾರ 2’ ಸಿನಿಮಾಕ್ಕಾಗಿ ರಿಷಬ್ ಶೆಟ್ಟಿ ತಮ್ಮ ಹುಟ್ಟೂರಾದ ಕೆರಾಡಿ ಬಳಿ ದೊಡ್ಡ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗುತ್ತಿದೆ. ಸಿನಿಮಾ ಚಿತ್ರೀಕರಣ ಮೂರು ಶೆಡ್ಯೂಲ್​ಗಳು ಈಗಾಗಲೇ ಮುಗಿದಿವೆ. ಇದೀಗ ನಾಲ್ಕನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗುತ್ತಿದೆ. ಈ ನಾಲ್ಕನೇ ಹಂತದಲ್ಲಿ ಸಿನಿಮಾದ ಆಕ್ಷನ್ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗುತ್ತಿದೆ. ಅದಕ್ಕಾಗಿಯೇ ಈಗ ರಿಷಬ್ ಶೆಟ್ಟಿ ತಯಾರಾಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ