AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಿಷಬ್​ ಶೆಟ್ಟಿ: ಕಾಡಿನ ಜನರ ಬೆಂಬಲಕ್ಕೆ ನಿಂತ ‘ಕಾಂತಾರ’ ಹೀರೋ

Rishab Shetty Meets CM Basavaraj Bommai: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರಿಷಬ್​ ಶೆಟ್ಟಿ ಭೇಟಿ ಆಗಿದ್ದಾರೆ. ಈ ಭೇಟಿಯ ಉದ್ದೇಶ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

Rishab Shetty: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಿಷಬ್​ ಶೆಟ್ಟಿ: ಕಾಡಿನ ಜನರ ಬೆಂಬಲಕ್ಕೆ ನಿಂತ ‘ಕಾಂತಾರ’ ಹೀರೋ
ರಿಷಬ್ ಶೆಟ್ಟಿ, ಬಸವರಾಜ ಬೊಮ್ಮಾಯಿ
ಮದನ್​ ಕುಮಾರ್​
| Updated By: Digi Tech Desk|

Updated on:Mar 08, 2023 | 5:46 PM

Share

ರಿಷಬ್​ ಶೆಟ್ಟಿ ಅವರು ‘ಕಾಂತಾರ’ (Kantara Movie) ಸಿನಿಮಾದ ಮೂಲಕ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡರು. ಆ ಚಿತ್ರದಲ್ಲಿ ಕಾಡಿನ ಜನರ ಕಷ್ಟದ ಬಗ್ಗೆ ವಿವರಿಸಲಾಗಿತ್ತು. ಹಾಗಂತ ಬರೀ ಸಿನಿಮಾದಲ್ಲಿ ಮೆಸೇಜ್​ ನೀಡಿ ರಿಷಬ್​ ಶೆಟ್ಟಿ (Rishab Shetty) ಸುಮ್ಮನಾಗಿಲ್ಲ. ರಿಯಲ್​ ಲೈಫ್​ನಲ್ಲಿಯೂ ಕಾಡಿನ ಜನರಿಗಾಗಿ ಸಹಾಯ ಮಾಡಲು ಅವರು ಮುಂದಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ರಿಷಬ್​ ಶೆಟ್ಟಿ ಭೇಟಿ ಆಗಿದ್ದಾರೆ. ಈ ವೇಳೆ 20 ಅಂಶಗಳನ್ನು ಪಟ್ಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಇದಕ್ಕೆಲ್ಲ ಕಾರಣ ಆಗಿದ್ದು ‘ಕಾಂತಾರ’ ಸಿನಿಮಾ ಎಂಬುದು ವಿಶೇಷ. ಈ ಬಗ್ಗೆ ಮಾಹಿತಿ ನೀಡಲು ಸೋಶಿಯಲ್​ ಮೀಡಿಯಾದಲ್ಲಿ ರಿಷಬ್​ ಶೆಟ್ಟಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ಪೂರ್ತಿ ವಿವರ ನೀಡಿದ್ದಾರೆ.

ರಿಷಬ್​ ಶೆಟ್ಟಿ-ಬಸವರಾಜ ಬೊಮ್ಮಾಯಿ ಭೇಟಿ ಆಗಿದ್ದೇಕೆ?

‘ಕಾಂತಾರ ಸಿನಿಮಾದ ನಂತರ ಕಾಡಂಚಿನ ಜನರು ಮತ್ತು ಕಾಡಿನ ಜೊತೆ ಸಮಯ ಕಳೆಯುತ್ತಾ, ಅರಣ್ಯ ಇಲಾಖೆಯವರ ಜೊತೆ ಬರೆಯುತ್ತಾ, ಇಲ್ಲಿನ ಜನರ ಸಮಸ್ಯೆಗಳನ್ನು ಕೇಳುತ್ತಾ ಒಂದಷ್ಟು ಜರ್ನಿ ಮಾಡಿದೆ. ಕೃಷಿಕರಿಗೆ ಕಾಡಾನೆ ಸಮಸ್ಯೆ ಇದೆ. ಕಾಡ್ಗಿಚ್ಚಿನ ಸಂದರ್ಭದಲ್ಲಿ ವಾಚರ್​ಗಳು ಸಾಕಷ್ಟು ರಿಸ್ಕ್​ ತೆಗೆದುಕೊಂಡು ಕಾಡನ್ನು ಉಳಿಸುತ್ತಿದ್ದಾರೆ. ಈ ಎಲ್ಲ ವಿಷಯಗಳಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯವರ ಜೊತೆಗೆ ಒಂದಷ್ಟು ಚರ್ಚೆ ಮಾಡಿದ್ದೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

‘ಆಗಬೇಕಾದ ಕೆಲಸ ಸಾಕಷ್ಟು ಇವೆ. ಅರಣ್ಯ ಇಲಾಖೆಯಲ್ಲಿ ಉದ್ಯೋಗ ಭರ್ತಿ ಆಗಬೇಕು. ವಾಚರ್​ಗಳ ನೇಮಕಾತಿ ಆಗಬೇಕು. ಆ ರೀತಿ 20 ಅಂಶಗಳನ್ನು ಪಟ್ಟಿ ಮಾಡಿ ಮುಖ್ಯಮಂತ್ರಿಗಳಿಗೆ ನೀಡಿದ್ದೇವೆ. ಅವರು ಪಾಸಿಟಿವ್​ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಕೂಡ ಇತ್ತೀಚಿನ ದಿನಗಳಲ್ಲಿ ಕಾಡಿಗೆ ಹೋಗಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರುವಂತೆ ಆದೇಶ ನೀಡುವುದಾಗಿ ಅವರು ತಿಳಿಸಿದ್ದಾರೆ. ಇಂಥ ಮುಖ್ಯಮಂತ್ರಿಗಳನ್ನು ಪಡೆದಿದ್ದಕ್ಕೆ ನಾವೆಲ್ಲ ಧನ್ಯ. ಈ ರೀತಿಯ ಚಿಕ್ಕ ಸಮಸ್ಯೆಗಳನ್ನೂ ಕೂಡ ಗಮನಿಸಿ ಅದಕ್ಕೆ ಪರಿಹಾರ ಸಿಗುವ ರೀತಿಯಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ’ ಎಂದು ರಿಷಬ್​ ಶೆಟ್ಟಿ ಹೇಳಿದ್ದಾರೆ.

‘ಕಾಂತಾರ 2’ ಕೆಲಸದಲ್ಲಿ ರಿಷಬ್​ ಶೆಟ್ಟಿ ಬ್ಯುಸಿ:

ರಿಷಬ್​ ಶೆಟ್ಟಿ ಅವರು ಈಗ ‘ಕಾಂತಾರ 2’ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸ್ಕ್ರಿಪ್ಟ್​ ಬರವಣಿಗೆ, ಲೊಕೇಷನ್​ ಹುಡುಕಾಟ, ಪಾತ್ರವರ್ಗದ ಆಯ್ಕೆ ಸೇರಿದಂತೆ ಹಲವು ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:49 pm, Wed, 8 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ