AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಚಿತ್ರದಲ್ಲಿ ಏನೆಲ್ಲಾ ಇರಲಿದೆ?; ಗುಟ್ಟು ಬಿಟ್ಟುಕೊಟ್ಟ ರಿಷಬ್ ಶೆಟ್ಟಿ

Rishab Shetty and Hombale Films: ಚಂದನವನದ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಹೊಸ ಚಿತ್ರ ‘ಕಾಂತಾರ’ದ ಕುರಿತಂತೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಚಿತ್ರ ಹೇಗಿರಲಿದೆ, ಎಲ್ಲಿ ಚಿತ್ರೀಕರಣವಾಗಲಿದೆ ಮೊದಲಾದ ಮಾಹಿತಿಗಳನ್ನು ಅವರು ತಿಳಿಸಿದ್ದಾರೆ.

Kantara: ‘ಕಾಂತಾರ’ ಚಿತ್ರದಲ್ಲಿ ಏನೆಲ್ಲಾ ಇರಲಿದೆ?; ಗುಟ್ಟು ಬಿಟ್ಟುಕೊಟ್ಟ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ ಮತ್ತು ಅವರ ಹೊಸ ಚಿತ್ರ ‘ಕಾಂತಾರ’ದ ಪೋಸ್ಟರ್
TV9 Web
| Edited By: |

Updated on: Aug 06, 2021 | 6:53 PM

Share

ಹೊಂಬಾಳೆ ಫಿಲ್ಮ್ಸ್ ಇಂದು ತನ್ನ ಹನ್ನೊಂದನೇ ಚಿತ್ರವನ್ನು ಅನೌನ್ಸ್ ಮಾಡಿತು. ಈಗಾಗಲೇ ತಮ್ಮ ನಟನೆ ಹಾಗೂ ನಿರ್ದೇಶನದಿಂದ ಚಂದನವನದಲ್ಲಿ ಭರವಸೆ ಮೂಡಿಸಿರುವ ಕರಾವಳಿಯ ಪ್ರತಿಭೆ ರಿಷಬ್ ಶೆಟ್ಟಿ, ಹೊಂಬಾಳೆಯೊಂದಿಗೆ ಕೈಜೋಡಿಸಲಿದ್ದಾರೆ. ನೂತನ ಚಿತ್ರಕ್ಕೆ ‘ಕಾಂತಾರ’ ಎಂದು ಹೆಸರಿಡಲಾಗಿದ್ದು, ಇದು ಸಂಪೂರ್ಣ ಕರಾವಳಿ ಭಾಗದಲ್ಲಿ ನಡೆಯುವ ಕತೆ ಎಂದಿದ್ದಾರೆ ರಿಷಬ್. ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಆಗಸ್ಟ್ 27ರಿಂದ ಚಿತ್ರತಂಡ ಶೂಟಿಂಗ್ ಪ್ರಾರಂಭಿಸಲಿದೆ. ಈ ಚಿತ್ರದ ಕುರಿತು ಸಂಪೂರ್ಣ ಮಾಹಿತಿಯನ್ನು ಟಿವಿ9ನೊಂದಿಗೆ ರಿಷಬ್ ಶೆಟ್ಟಿ ಹಂಚಿಕೊಂಡಿದ್ದಾರೆ.

‘ಕಾಂತಾರ’ದ ಅರ್ಥವೇನು ಎಂಬುದನ್ನು ಮೊದಲಿಗೆ ತಿಳಿಸಿದ ರಿಷಬ್ ಶೆಟ್ಟಿ, ಸಾಮಾನ್ಯವಾಗಿ ನಿಗೂಡ ಅರಣ್ಯವನ್ನು ಕಾಂತಾರ ಎನ್ನುತ್ತೇವೆ. ದಕ್ಷಿಣ ಕರಾವಳಿಯ ಸುತ್ತ ಮುತ್ತ ನಡೆಯುವ ಕತೆ ಇದಾಗಿದ್ದು, ಸಂಪೂರ್ಣವಾಗಿ ಅಲ್ಲಿನ ಜನ ಜೀವನ, ಸಂಸ್ಕೃತಿ, ಭಾಷೆಯನ್ನು ಒಳಗೊಂಡಿರುತ್ತದೆ ಎಂದಿದ್ದಾರೆ. ಪೋಸ್ಟರ್​ನಲ್ಲಿ ಕಂಬಳದ ಚಿತ್ರವಿರುವ ಕಾರಣ, ಸಂಪೂರ್ಣ ಕಂಬಳದ ಕುರಿತಾಗಿಯೇ ಕತೆ ಇದೆಯೇ ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಾರೆ ರಿಷಬ್. ಇದು ಮನುಷ್ಯ ಮತ್ತು ಪ್ರಕೃತಿಯ ನಡುವಿನ ಕತೆ. ಕರಾವಳಿಯ ಜನಜೀವನವೂ ಕತೆಯಲ್ಲಿರುವುದರಿಂದ ಕಂಬಳವೂ ಚಿತ್ರದಲ್ಲಿ ಬರುತ್ತದೆ. ಆದರೆ ಸಂಪೂರ್ಣ ಅದರ ಕುರಿತಾಗಿಯೇ ಕತೆ ಸಾಗುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

‘‘ಲಾಕ್​ಡೌನ್ ಸಂದರ್ಭದಲ್ಲಿ ಕತೆಯನ್ನು ಸಿದ್ಧಪಡಿಸಿದೆವು. ಚಿತ್ರವು ಆಕ್ಷನ್ ಥ್ರಿಲ್ಲರ್ ಮಾದರಿಯಲ್ಲಿರಲಿದೆ. ಚಿತ್ರದ ಕ್ಯಾನ್ವಾಸ್ ದೊಡ್ಡದು. ಅದಕ್ಕಾಗಿಯೇ ಹೊಂಬಾಳೆಯ ವಿಜಯ್ ಮತ್ತು ಕಾರ್ತಿಕ್ ಅವರಿಗೆ ಕತೆ ಹೇಳಿದ್ದೆ. ಸುಮಾರು ಎರಡು ವರ್ಷದಿಂದ ಮಾತುಕತೆ ನಡೆಯುತ್ತಿತ್ತು. ಅವರಿಗೆ ಕತೆಯ ಬಗ್ಗೆ ಬಹಳ ಖುಷಿಯಿದೆ. ಆಗಸ್ಟ್ 27ರಿಂದ ಶೂಟಿಂಗ್ ಪ್ರಾರಂಭಿಸಲಿದ್ದೇವೆ’’ ಎಂದು ಹೊಂಬಾಳೆಯೊಂದಿಗಿನ ಮಾತುಕತೆಯ ಕುರಿತು ತಿಳಿಸಿದ್ದಾರೆ ರಿಷಬ್ ಶೆಟ್ಟಿ.

ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಪ್ಯಾನ್ ಇಂಡಿಯಾ ಚಿತ್ರಗಳನ್ನು ನಿರ್ಮಿಸುತ್ತಿದೆ. ಅಂತಹ ದೊಡ್ಡ ನಿರ್ಮಾಣ ಸಂಸ್ಥೆಯ ಭಾಗವಾಗಿದ್ದಕ್ಕೆ ಏನನ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಷಬ್, ‘‘ಕನ್ನಡದ ಹೆಮ್ಮೆಯ ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್. ಅವರ ಜೊತೆ ಕೈ ಜೋಡಿಸಿರುವುದು ಬಹಳ ಖುಷಿಯ ಸಂಗತಿ. ಹೀರೋ ಮತ್ತು ನಿರ್ದೇಶಕನಾಗಿ ಏಕಕಾಲಕ್ಕೆ ಕಾಣಿಸಿಕೊಳ್ಳುತ್ತಿರುವುದು ನನಗೆ ದೊಡ್ಡ ಚಾಲೆಂಜ್’’ ಎಂದಿದ್ದಾರೆ.

ಇದನ್ನೂ ಓದಿ:

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ

ಬಾರ್ ಮುಚ್ಚುವಂತೆ ಮಹಿಳೆಯರ ಧರಣಿ; ಬಾರ್ ಮುಚ್ಚದಂತೆ ಮದ್ಯಪ್ರಿಯರ ಹೋರಾಟ! ಚಿಕ್ಕಮಗಳೂರಿನಲ್ಲಿ ಹೀಗೊಂದು ಘಟನೆ

(Rishab Shetty opens up about his new movie Kantara produced by Hombale Films)

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ