AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಚಿತ್ರದಲ್ಲಿ ಏನೆಲ್ಲಾ ಇರಲಿದೆ?; ಗುಟ್ಟು ಬಿಟ್ಟುಕೊಟ್ಟ ರಿಷಬ್ ಶೆಟ್ಟಿ

Rishab Shetty and Hombale Films: ಚಂದನವನದ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಹೊಸ ಚಿತ್ರ ‘ಕಾಂತಾರ’ದ ಕುರಿತಂತೆ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಚಿತ್ರ ಹೇಗಿರಲಿದೆ, ಎಲ್ಲಿ ಚಿತ್ರೀಕರಣವಾಗಲಿದೆ ಮೊದಲಾದ ಮಾಹಿತಿಗಳನ್ನು ಅವರು ತಿಳಿಸಿದ್ದಾರೆ.

Kantara: ‘ಕಾಂತಾರ’ ಚಿತ್ರದಲ್ಲಿ ಏನೆಲ್ಲಾ ಇರಲಿದೆ?; ಗುಟ್ಟು ಬಿಟ್ಟುಕೊಟ್ಟ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ ಮತ್ತು ಅವರ ಹೊಸ ಚಿತ್ರ ‘ಕಾಂತಾರ’ದ ಪೋಸ್ಟರ್
TV9 Web
| Edited By: |

Updated on: Aug 06, 2021 | 6:53 PM

Share

ಹೊಂಬಾಳೆ ಫಿಲ್ಮ್ಸ್ ಇಂದು ತನ್ನ ಹನ್ನೊಂದನೇ ಚಿತ್ರವನ್ನು ಅನೌನ್ಸ್ ಮಾಡಿತು. ಈಗಾಗಲೇ ತಮ್ಮ ನಟನೆ ಹಾಗೂ ನಿರ್ದೇಶನದಿಂದ ಚಂದನವನದಲ್ಲಿ ಭರವಸೆ ಮೂಡಿಸಿರುವ ಕರಾವಳಿಯ ಪ್ರತಿಭೆ ರಿಷಬ್ ಶೆಟ್ಟಿ, ಹೊಂಬಾಳೆಯೊಂದಿಗೆ ಕೈಜೋಡಿಸಲಿದ್ದಾರೆ. ನೂತನ ಚಿತ್ರಕ್ಕೆ ‘ಕಾಂತಾರ’ ಎಂದು ಹೆಸರಿಡಲಾಗಿದ್ದು, ಇದು ಸಂಪೂರ್ಣ ಕರಾವಳಿ ಭಾಗದಲ್ಲಿ ನಡೆಯುವ ಕತೆ ಎಂದಿದ್ದಾರೆ ರಿಷಬ್. ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಆಗಸ್ಟ್ 27ರಿಂದ ಚಿತ್ರತಂಡ ಶೂಟಿಂಗ್ ಪ್ರಾರಂಭಿಸಲಿದೆ. ಈ ಚಿತ್ರದ ಕುರಿತು ಸಂಪೂರ್ಣ ಮಾಹಿತಿಯನ್ನು ಟಿವಿ9ನೊಂದಿಗೆ ರಿಷಬ್ ಶೆಟ್ಟಿ ಹಂಚಿಕೊಂಡಿದ್ದಾರೆ.

‘ಕಾಂತಾರ’ದ ಅರ್ಥವೇನು ಎಂಬುದನ್ನು ಮೊದಲಿಗೆ ತಿಳಿಸಿದ ರಿಷಬ್ ಶೆಟ್ಟಿ, ಸಾಮಾನ್ಯವಾಗಿ ನಿಗೂಡ ಅರಣ್ಯವನ್ನು ಕಾಂತಾರ ಎನ್ನುತ್ತೇವೆ. ದಕ್ಷಿಣ ಕರಾವಳಿಯ ಸುತ್ತ ಮುತ್ತ ನಡೆಯುವ ಕತೆ ಇದಾಗಿದ್ದು, ಸಂಪೂರ್ಣವಾಗಿ ಅಲ್ಲಿನ ಜನ ಜೀವನ, ಸಂಸ್ಕೃತಿ, ಭಾಷೆಯನ್ನು ಒಳಗೊಂಡಿರುತ್ತದೆ ಎಂದಿದ್ದಾರೆ. ಪೋಸ್ಟರ್​ನಲ್ಲಿ ಕಂಬಳದ ಚಿತ್ರವಿರುವ ಕಾರಣ, ಸಂಪೂರ್ಣ ಕಂಬಳದ ಕುರಿತಾಗಿಯೇ ಕತೆ ಇದೆಯೇ ಎಂಬ ಪ್ರಶ್ನೆಗೆ ಇಲ್ಲ ಎನ್ನುತ್ತಾರೆ ರಿಷಬ್. ಇದು ಮನುಷ್ಯ ಮತ್ತು ಪ್ರಕೃತಿಯ ನಡುವಿನ ಕತೆ. ಕರಾವಳಿಯ ಜನಜೀವನವೂ ಕತೆಯಲ್ಲಿರುವುದರಿಂದ ಕಂಬಳವೂ ಚಿತ್ರದಲ್ಲಿ ಬರುತ್ತದೆ. ಆದರೆ ಸಂಪೂರ್ಣ ಅದರ ಕುರಿತಾಗಿಯೇ ಕತೆ ಸಾಗುವುದಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

‘‘ಲಾಕ್​ಡೌನ್ ಸಂದರ್ಭದಲ್ಲಿ ಕತೆಯನ್ನು ಸಿದ್ಧಪಡಿಸಿದೆವು. ಚಿತ್ರವು ಆಕ್ಷನ್ ಥ್ರಿಲ್ಲರ್ ಮಾದರಿಯಲ್ಲಿರಲಿದೆ. ಚಿತ್ರದ ಕ್ಯಾನ್ವಾಸ್ ದೊಡ್ಡದು. ಅದಕ್ಕಾಗಿಯೇ ಹೊಂಬಾಳೆಯ ವಿಜಯ್ ಮತ್ತು ಕಾರ್ತಿಕ್ ಅವರಿಗೆ ಕತೆ ಹೇಳಿದ್ದೆ. ಸುಮಾರು ಎರಡು ವರ್ಷದಿಂದ ಮಾತುಕತೆ ನಡೆಯುತ್ತಿತ್ತು. ಅವರಿಗೆ ಕತೆಯ ಬಗ್ಗೆ ಬಹಳ ಖುಷಿಯಿದೆ. ಆಗಸ್ಟ್ 27ರಿಂದ ಶೂಟಿಂಗ್ ಪ್ರಾರಂಭಿಸಲಿದ್ದೇವೆ’’ ಎಂದು ಹೊಂಬಾಳೆಯೊಂದಿಗಿನ ಮಾತುಕತೆಯ ಕುರಿತು ತಿಳಿಸಿದ್ದಾರೆ ರಿಷಬ್ ಶೆಟ್ಟಿ.

ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಪ್ಯಾನ್ ಇಂಡಿಯಾ ಚಿತ್ರಗಳನ್ನು ನಿರ್ಮಿಸುತ್ತಿದೆ. ಅಂತಹ ದೊಡ್ಡ ನಿರ್ಮಾಣ ಸಂಸ್ಥೆಯ ಭಾಗವಾಗಿದ್ದಕ್ಕೆ ಏನನ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಷಬ್, ‘‘ಕನ್ನಡದ ಹೆಮ್ಮೆಯ ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್. ಅವರ ಜೊತೆ ಕೈ ಜೋಡಿಸಿರುವುದು ಬಹಳ ಖುಷಿಯ ಸಂಗತಿ. ಹೀರೋ ಮತ್ತು ನಿರ್ದೇಶಕನಾಗಿ ಏಕಕಾಲಕ್ಕೆ ಕಾಣಿಸಿಕೊಳ್ಳುತ್ತಿರುವುದು ನನಗೆ ದೊಡ್ಡ ಚಾಲೆಂಜ್’’ ಎಂದಿದ್ದಾರೆ.

ಇದನ್ನೂ ಓದಿ:

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ

ಬಾರ್ ಮುಚ್ಚುವಂತೆ ಮಹಿಳೆಯರ ಧರಣಿ; ಬಾರ್ ಮುಚ್ಚದಂತೆ ಮದ್ಯಪ್ರಿಯರ ಹೋರಾಟ! ಚಿಕ್ಕಮಗಳೂರಿನಲ್ಲಿ ಹೀಗೊಂದು ಘಟನೆ

(Rishab Shetty opens up about his new movie Kantara produced by Hombale Films)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್