AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬ ಆಚರಣೆಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಊಟ ಹಾಕಿಸಿದ ರಿಷಬ್: ಮೆನು ಏನಿತ್ತು?

Rishab Shetty: ರಿಷಬ್ ಶೆಟ್ಟಿ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ ಅಭಿಮಾನಿಗಳಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೆನುವಿನಲ್ಲಿ ಏನೇನಿತ್ತು?

ಹುಟ್ಟುಹಬ್ಬ ಆಚರಣೆಗೆ ಬಂದ ಅಭಿಮಾನಿಗಳಿಗೆ ಭರ್ಜರಿ ಊಟ ಹಾಕಿಸಿದ ರಿಷಬ್: ಮೆನು ಏನಿತ್ತು?
ರಿಷಬ್
ಮಂಜುನಾಥ ಸಿ.
|

Updated on: Jul 07, 2023 | 9:40 PM

Share

ಬೆಂಗಳೂರಿನ ನಂದಿ ಲಿಂಕ್​ ಗ್ರೌಂಡ್​ನಲ್ಲಿ ಅದ್ದೂರಿಯಾಗಿ ಇಂದು ರಿಷಬ್ ಶೆಟ್ಟಿ (Rishab Shetty) ಹುಟ್ಟುಹಬ್ಬ ಆಚರಿಸಲಾಗಿದೆ. ವಾರದ ಮೊದಲೇ ಈ ಬಗ್ಗೆ ವಿಡಿಯೋ ಮಾಡಿ ಅಭಿಮಾನಿಗಳಿಗೆ ಆಹ್ವಾನ ನೀಡಿದ್ದ ರಿಷಬ್, ಕಾಂತಾರದ (Kanthara) ಬಳಿಕ ಹಲವರು ಮನೆಯ ಹತ್ತಿರ ಬಂದು ಭೇಟಿಗೆ ಯತ್ನಿಸಿದ್ದೀರಿ, ಹಲವು ಕಾರ್ಯಕ್ರಮಗಳಲ್ಲಿ ಭೇಟಿಗೆ ಕಾದಿದ್ದೀರಿ ಆದರೆ ಸರಿಯಾಗಿ ನಿಮ್ಮನ್ನು ಭೇಟಿ ಆಗಲು ಆಗಿರಲಿಲ್ಲ, ಹಾಗಾಗಿ ಈ ಬಾರಿ ನನ್ನ ಹುಟ್ಟುಹಬ್ಬದಂದು ಎಲ್ಲರನ್ನೂ ಭೇಟಿ ಆಗುತ್ತೀನಿ ಎಂದಿದ್ದರು. ಅಂತೆಯೇ ಇಂದು (ಜುಲೈ 7) ಅಭಿಮಾನಿಗಳನ್ನು (Fan) ಭೇಟಿಯಾಗಿ ಅವರೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ರಿಷಬ್.

ರಿಷಬ್​ರ ಹುಟ್ಟುಹಬ್ಬ ಆಚರಣೆಗೆ ಕಳೆದೆರಡು ದಿನಗಳಿಂದಲೂ ನಂದಿ ಲಿಂಕ್​ ಗ್ರೌಂಡ್​ನಲ್ಲಿ ತಯಾರಿ ನಡೆದಿತ್ತು, ರಿಷಬ್​ರ ಆತ್ಮೀಯ ಗೆಳೆಯ ಪ್ರಮೋದ್ ಶೆಟ್ಟಿ ಹಾಗೂ ಇನ್ನಿತರರು ಕಾರ್ಯಕ್ರಮ ಆಯೋಜನೆಯ ಮುಂದಾಳತ್ವ ವಹಿಸಿ ಅಭಿಮಾನಿಗಳಿಗೆ ಸಮಸ್ಯೆ ಆಗದಂತೆ ವ್ಯವಸ್ಥೆಗಳನ್ನು ಮಾಡಿದ್ದರು, ವೇದಿಕೆ ನಿರ್ಮಿಸಿದ್ದರು. ಜೊತೆಗೆ ದೂರ ದೂರಗಳಿಂದ ಬರುವ ರಿಷಬ್​ರ ಅಭಿಮಾನಿಗಳಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಿಸಿದ್ದರು.

ರಿಷಬ್​ರ ಅಭಿಮಾನಗಳಿಗಾಗಿ ಪುಲಾವ್, ಮೊಸರು ಬಜ್ಜಿ, ಮೊಸರನ್ನ, ಉಪ್ಪಿನ ಕಾಯಿ, ಅನ್ನ, ರಸಂ, ಮದ್ದೂರು ವಡೆ, ಬರ್ಫಿ, ಹಪ್ಪಳಗಳನ್ನು ಮಾಡಿಸಲಾಗಿತ್ತು. ಸುಮಾರು ಎಂಟು ಸಾವಿರ ಜನಕ್ಕೆ ಊಟದ ತಯಾರಿಯನ್ನು ಮಾಡಿಸಲಾಗಿತ್ತು. ರಿಷಬ್​ರ ಹುಟ್ಟುಹಬ್ಬಕ್ಕೆ ಬರುವವರು ಹಸಿದುಕೊಂಡು ಹೋಗಬಾರದೆಂಬ ಉದ್ದೇಶದಿಂದ ಊಟದ ವ್ಯವಸ್ಥೆಯನ್ನು ಮಾಡಿಸಿದ್ದಾಗಿ ರಿಷಬ್​ ಆಪ್ತರ ತಂಡ ಹೇಳಿತ್ತು. ರಿಷಬ್​ರ ಪಕ್ಕದ ಊರಾದ ಉಪ್ಪಿನ ಕುದುರುವಿನ ಅಡುಗೆ ಕಾಂಟ್ರ್ಯಾಕ್ಟರ್ ಗೋಪಾಲ್ ಮೆಲಾಡಿ ಅವರನ್ನು ಕರೆಯಿಸಿ ಅಡುಗೆ ಮಾಡುವ ಜವಾಬ್ದಾರಿಯನ್ನು ವಹಿಸಲಾಗಿತ್ತು.

ಇದನ್ನೂ ಓದಿ:ನಿಮ್ಮ ಋಣ ತೀರಿಸುವ ಕಾರ್ಯವನ್ನು ಮಾಡುತ್ತಲೇ ಇರ್ತೀನಿ: ಬರ್ತ್​ಡೇಯಲ್ಲಿ ರಿಷಬ್ ಶೆಟ್ಟಿ ಭಾವುಕ

ರಿಷಬ್ ಶೆಟ್ಟಿಯವರ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಮಧ್ಯಾಹ್ನದಿಂದಲೇ ಕಾಯುತ್ತಿದ್ದರು. ಕಾರ್ಯಕ್ರಮವನ್ನು ಐದು ಗಂಟೆಗೆ ಆಯೋಜನೆ ಮಾಡಲಾಗಿತ್ತು, ಆದರೆ ಇಂದು ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಮಳೆ ಪ್ರಾರಂಭವಾದ ಕಾರಣ ಇಂದು ಕಾರ್ಯಕ್ರಮ ಸುಸೂತ್ರವಾಗಿ ನಡೆಯುವುದು ಅನುಮಾನ ಎಂಬಂತಾಗಿತ್ತು. ಮಳೆಯ ನಡುವೆಯೂ ಅಭಿಮಾನಿಗಳು ಕಾಯುತ್ತಲೇ ಇದ್ದರು. ಸುಮಾರು 6 ರ ಸುಮಾರಿಗೆ ಪತ್ನಿ ಪ್ರಗತಿ ಶೆಟ್ಟಿಯೊಂದಿಗೆ ವೇದಿಕೆಗೆ ಆಗಮಿಸಿದ ರಿಷಬ್ ಶೆಟ್ಟಿ, ಅಭಿಮಾನಿಗಳಿಗೆ ವಂದಿಸಿ ಧನ್ಯವಾದ ಹೇಳಿದರು.

ಈ ರೀತಿ ದೊಡ್ಡ ಸಂಖ್ಯೆಯ ಅಭಿಮಾನಿಗಳೊಟ್ಟಿಗೆ ರಿಷಬ್ ಶೆಟ್ಟಿ ತಮ್ಮ ಹುಟ್ಟುಹಬ್ಬ ಆಚರಸಿಕೊಳ್ಳುತ್ತಿರುವುದು ಇದೇ ಮೊದಲು. ಸ್ವತಃ ಅವರೇ ಇಂದಿನ ಭಾಷಣದಲ್ಲಿ ಹೇಳಿದಂತೆ, ”ಕಾಂತಾರಗೆ ಮುಂಚೆ ಇದನ್ನೆಲ್ಲ ನನಗೆ ಹೇಗೆ ನಿಭಾಯಿಸಬೇಕು ಎಂಬುದು ಸಹ ನನಗೆ ಗೊತ್ತಿರಲಿಲ್ಲ. ಆದರೆ ನಿಮ್ಮನ್ನು ಭೇಟಿ ಆಗುವ ಬಹಳ ಆಸೆಯಿತ್ತು. ನನ್ನ ಪತ್ನಿ ಪ್ರಗತಿ, ಪ್ರಮೋದ್ ಶೆಟ್ಟಿ ಹಾಗೂ ಇತರರು ಒತ್ತಾಯ ಮಾಡಿ ಈ ಕಾರ್ಯಕ್ರಮವನ್ನು ಮಾಡಲೇ ಬೇಕು, ಅಭಿಮಾನಿಗಳಿಗೆ ಧನ್ಯವಾದ ಹೇಳಲೇ ಬೇಕು ಎಂದರು. ಹಾಗಾಗಿ ಕಾರ್ಯಕ್ರಮ ಆಯೋಜಿಸಿದ್ದೇವೆ” ಎಂದರು ರಿಷಬ್ ಶೆಟ್ಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು