AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ವಜ್ರದೇಹಿ ಕೋಲದಲ್ಲಿ ರಿಷಬ್ ಭಾಗಿ; ದೈವ ಕೊಟ್ಟ ಸೂಚನೆ ಏನು?

ಕೋಲಕ್ಕೆ ಆಗಮಿಸುವಂತೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ರಿಷಬ್ ಶೆಟ್ಟಿಯನ್ನು ಆಹ್ವಾನಿಸಿದ್ದರು. ಹೀಗಾಗಿ ರಿಷಬ್ ಇದರಲ್ಲಿ ಭಾಗಿ ಆಗಿದ್ದಾರೆ.

ಮಂಗಳೂರಿನ ವಜ್ರದೇಹಿ ಕೋಲದಲ್ಲಿ ರಿಷಬ್ ಭಾಗಿ; ದೈವ ಕೊಟ್ಟ ಸೂಚನೆ ಏನು?
ರಿಷಬ್ ಶೆಟ್ಟಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 06, 2024 | 11:28 AM

Share

ಮಂಗಳೂರು: ರಿಷಬ್ ಶೆಟ್ಟಿ ಅವರು ದೈವದ ವಿಚಾರ ಇಟ್ಟುಕೊಂಡು ಮಾಡಿದ್ದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದರ ಬೆನ್ನಲ್ಲೇ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ಮಧ್ಯೆ ರಿಷಬ್ ಶೆಟ್ಟಿ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಕೆಲಸಗಳು ನಿರ್ವಿಘ್ನವಾಗಿ ನಡೆಯಲು ರಿಷಬ್ ಶೆಟ್ಟಿ ಮತ್ತೆ ದೈವದ ಮೊರೆ ಹೋದರೇ ಎನ್ನುವ ಪ್ರಶ್ನೆ ಮೂಡಿದೆ. ಆ ಬಗ್ಗೆ ಈ ಸ್ಟೋರಿಯಲ್ಲಿದೆ ಸಂಪೂರ್ಣ ಮಾಹಿತಿ.

ಮಂಗಳೂರು ವಜ್ರದೇಹಿ ಮಠದ ದೈವ ಕೋಲದಲ್ಲಿ ರಿಷಬ್ ಶೆಟ್ಟಿ ಭಾಗಿ ಆಗಿದ್ದಾರೆ. ಈ ಹಿಂದೆ ವಜ್ರದೇಹಿ ಸ್ವಾಮೀಜಿ ಭೇಟಿಯಾದ ಸಂದರ್ಭದಲ್ಲಿ ಅವರು ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ವಜ್ರದೇಹಿ ಮಠದ ದೈವ ಕೋಲ ವೀಕ್ಷಿಸುವ ಇಚ್ಛೆಯನ್ನು ಹೇಳಿಕೊಂಡಿದ್ದರು. ಹೀಗಾಗಿ ಕೋಲಕ್ಕೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ರಿಷಬ್ ಶೆಟ್ಟಿಯನ್ನು ಆಹ್ವಾನಿಸಿದ್ದರು. ಹೀಗಾಗಿ ರಿಷಬ್ ಇದರಲ್ಲಿ ಭಾಗಿ ಆಗಿದ್ದಾರೆ.

‘ಧೈರ್ಯ ಕಳೆದುಕೊಳ್ಳದಂತೆ, ಏನೇ ಸಮಸ್ಯೆ ಎದುರಾದರೂ ಕುಗ್ಗಬೇಡಿ, ಹಿಂದೆ ನಾನಿದ್ದೇನೆ’ ಎಂದು ದೈವ ಸೂಚನೆ ನೀಡಿದೆ ಎನ್ನಲಾಗಿದೆ. ‘ಕಾಂತಾರ’ ಶೂಟಿಂಗ್ ಸಂದರ್ಭದಲ್ಲೂ ದೈವದ ಅಭಯ ಚಿತ್ರಕ್ಕೆ ಸಿಕ್ಕಿತ್ತು. ಈಗ ‘ಕಾಂತಾರ: ಚಾಪ್ಟರ್ 1’ ಸಂದರ್ಭದಲ್ಲೂ ಧನಾತ್ಮಕ ಪ್ರಕ್ರಿಯೆ ಸಿಕ್ಕಿರುವುದರಿಂದ ರಿಷಬ್ ಶೆಟ್ಟಿ ಖುಷಿಯಾಗಿದ್ದಾರೆ.

ಇದನ್ನೂ ಓದಿ: ತಾವು ಕಲಿತ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ: ಶಿಕ್ಷಕರು ಹೇಳಿದ್ದು ಹೀಗೆ…

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಹೀಗಾಗಿ, ಇದಕ್ಕೆ ಪ್ರೀಕ್ವೆಲ್ ಮಾಡಲು ರಿಷಬ್ ಆಸಕ್ತಿ ತೋರಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ರಿಷಬ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಪಂಜಾಬಿ ಭಾಷೆಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?