AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ವಿಶ್ವಸಂಸ್ಥೆಯಲ್ಲಿ ಕನ್ನಡ ಮಾತನಾಡಿದ ರಿಷಬ್ ಶೆಟ್ಟಿ

ನಟ, ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಿ ಅಲ್ಲಿ ಕನ್ನಡದಲ್ಲಿಯೇ ಭಾಷಣ ಮಾಡಿದ್ದಾರೆ.

ಮಂಜುನಾಥ ಸಿ.
|

Updated on:Mar 16, 2023 | 10:37 PM

Share

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ (UN Annual Meeting) ಕನ್ನಡದಲ್ಲಿ (Kannada) ಮಾತನಾಡಿದ್ದಾರೆ. ಅವರು ವಿಶ್ವಸಂಸ್ಥೆಯ ವಾರ್ಷಿಕ ಸಭೆಯ ಮಾನವ ಹಕ್ಕು ಸಂರಕ್ಷಣೆ ಪರಿಷತ್ತಿನ 28ನೇ ಸಭೆಯಲ್ಲಿ ಪರಿಸರ ಸಂರಕ್ಷಣೆ ವಿಷಯವಾಗಿ ಭಾಷಣ ಮಾಡಿದರು.

ವಿಶ್ವಸಂಸ್ಥೆಯ ವೇದಿಕೆಯಲ್ಲಿ ಕನ್ನಡ ದನಿ ಪಸರಿಸುವ ಕಾರ್ಯವನ್ನು ರಿಷಬ್ ಶೆಟ್ಟಿ ಮಾಡಿದರು. ಈ ಬಾರಿ ಪಂಚೆಯಲ್ಲಲ್ಲದೆ, ಸರಳ ಭಾರತೀಯ ಉಡುಗೆ, ಬಿಳಿಯ ಬಣ್ಣದ ಖುರ್ತಾ ಧರಿಸಿ ಅದಕ್ಕೊಪ್ಪುವ ನೀಲಿ ಬಣ್ಣದ ವೇಸ್ ಕೋಟು ಧರಿಸಿದ್ದ ರಿಷಬ್ ಶೆಟ್ಟಿ, ಉತ್ಸಾಹದಿಂದ, ಆತ್ಮವಿಶ್ವಾಸದಿಂದ ಭಾಷಣ ಮಾಡಿದರು. ವಿಶ್ವಸಂಸ್ಥೆಯ ಸಭೆಯಲ್ಲಿ ಭಾಷಣಕಾರರಿಗೆ ಸೀಮಿತ ಸಮಯ ನೀಡುವ ಕಾರಣ, ತುಸು ವೇಗವಾಗಿ ಭಾಷಣ ಓದಿದ ರಿಷಬ್, ”ನಮಸ್ಕಾರ ನಾನು ರಿಷಬ್ ಶೆಟ್ಟಿ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತಲೂ ಹೆಚ್ಚು ಕಾಲದಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಇಕೋಫಾರ್ಮ್ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ಪರಿಸರ ಸ್ವಚ್ಛತೆ ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟ, ನಿರ್ದೇಶಕನಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದು ನನ್ನ ಉದ್ದೇಶ” ಎಂದರು.

ರಿಷಬ್ ಶೆಟ್ಟಿ ಟ್ವೀಟ್

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾರ್ಚ್ 17 ರಂದು ವಿಶೇಷ ಪ್ರದರ್ಶನ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Thu, 16 March 23

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್