AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್​ ಶೆಟ್ಟಿ ಮುದ್ದಿನ ಪುತ್ರಿ ರಾಧ್ಯ ಹುಟ್ಟುಹಬ್ಬ ಹೇಗಿತ್ತು? ವಿಡಿಯೋ ಹಂಚಿಕೊಂಡ ‘ಕಾಂತಾರ’ ಹೀರೋ

Rishab Shetty | Raadhya Shetty: ಪುತ್ರಿ ರಾಧ್ಯ ಶೆಟ್ಟಿಯ ಮೊದಲ ವರ್ಷದ ಹುಟ್ಟುಹಬ್ಬವನ್ನು ರಿಷಬ್​ ಶೆಟ್ಟಿ ಅವರು ಅದ್ದೂರಿಯಾಗಿ ಆಚರಿಸಿದ್ದಾರೆ. ಕನ್ನಡ ಚಿತ್ರರಂಗದ ಗಣ್ಯರನ್ನೆಲ್ಲ ಆಹ್ವಾನಿಸಿ ಔತಣ ನೀಡಿದ್ದಾರೆ.

ರಿಷಬ್​ ಶೆಟ್ಟಿ ಮುದ್ದಿನ ಪುತ್ರಿ ರಾಧ್ಯ ಹುಟ್ಟುಹಬ್ಬ ಹೇಗಿತ್ತು? ವಿಡಿಯೋ ಹಂಚಿಕೊಂಡ ‘ಕಾಂತಾರ’ ಹೀರೋ
ರಾಧ್ಯ ಶೆಟ್ಟಿಯ ಮೊದಲ ವರ್ಷದ ಬರ್ತ್​ಡೇ ಆಚರಣೆ
ಮದನ್​ ಕುಮಾರ್​
|

Updated on:Mar 21, 2023 | 3:01 PM

Share

ನಟ ರಿಷಬ್​ ಶೆಟ್ಟಿ (Rishab Shetty) ಅವರು ಸಿನಿಮಾದ ಬ್ಯುಸಿ ಕೆಲಸಗಳ ನಡುವೆ ಕುಟುಂಬಕ್ಕೆ ಸಮಯ ಕೊಡುವುದನ್ನು ಮಿಸ್​ ಮಾಡುವುದಿಲ್ಲ. ರಿಷಬ್​ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿಯ ಮುದ್ದಿನ ಮಗಳಾದ ರಾಧ್ಯ ಶೆಟ್ಟಿಯ ಮೊದಲ ವರ್ಷದ ಹುಟ್ಟುಹಬ್ಬವನ್ನು (Raadhya Shetty birthday) ಮಾರ್ಚ್​ 4ರಂದು ಆಚರಿಸಲಾಯಿತು. ಈ ಖುಷಿಯ ಕ್ಷಣದಲ್ಲಿ ಇಡೀ ಸ್ಯಾಂಡಲ್​ವುಡ್​ ಭಾಗಿ ಆಗಿತ್ತು ಎಂದರೂ ತಪ್ಪಿಲ್ಲ. ಬಹುತೇಕ ಎಲ್ಲ ಸ್ಟಾರ್​ ನಟ-ನಟಿಯರು ರಾಧ್ಯ ಶೆಟ್ಟಿ (Raadhya Shetty) ಬರ್ತ್​ಡೇ ಪಾರ್ಟಿಗೆ ಆಗಮಿಸಿದ್ದರು. ಆ ದಿನದ ಸಂಭ್ರಮ ಹೇಗಿತ್ತು ಎಂಬುದನ್ನು ತಿಳಿಸಲು ರಿಷಬ್​ ಶೆಟ್ಟಿ ಅವರು ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ರಾಧ್ಯ ಶೆಟ್ಟಿಗೆ ಶುಭ ಕೋರಿದ್ದಾರೆ.

2022ರ ಮಾರ್ಚ್​ 4ರಂದು ಪ್ರಗತಿ ಶೆಟ್ಟಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಅದು ರಿಷಬ್​ ಶೆಟ್ಟಿ ಅವರ ಪಾಲಿಗೆ ಅದೃಷ್ಟದ ವರ್ಷ. ಮಗಳ ಆಗಮನದ ಜೊತೆಗೆ ಅದೇ ವರ್ಷ ‘ಕಾಂತಾರ’ ಚಿತ್ರ ಕೂಡ ತೆರೆಕಂಡು ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಈಗ ಮಗಳ ಮೊದಲ ವರ್ಷದ ಹುಟ್ಟುಹಬ್ಬವನ್ನು ರಿಷಬ್​ ಶೆಟ್ಟಿ ಅವರು ಬಹಳ ಅದ್ದೂರಿಯಾಗಿ ಆಚರಿಸಿದ್ದಾರೆ. ಚಂದನವನದ ಗಣ್ಯಾತಿಗಣ್ಯರನ್ನೆಲ್ಲ ಆಹ್ವಾನಿಸಿ ರಿಷಬ್​ ಶೆಟ್ಟಿ ಔತಣ ನೀಡಿದ್ದಾರೆ.

ಇದನ್ನೂ ಓದಿ
Image
Rajinikanth: ‘ಕಾಂತಾರ 2’ ಚಿತ್ರದಲ್ಲಿ ರಜನಿಕಾಂತ್​ ನಟಿಸ್ತಾರಾ? ರಿಷಬ್​ ಶೆಟ್ಟಿ ಸಿನಿಮಾ ಬಗ್ಗೆ ಹೊಸ ಚರ್ಚೆ ಶುರು
Image
Rishab Shetty: ‘ಕಾಂತಾರ’ ಚಿತ್ರದ ನಟ, ನಿರ್ದೇಶಕ ರಿಷಬ್​ ಶೆಟ್ಟಿಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’
Image
Rishab Shetty: ‘ಮೋದಿ ಹಲವು ಬಾರಿ ಕಾಂತಾರ ಬಗ್ಗೆ ಮಾತಾಡಿದ್ದು ಕೇಳಿ ಖುಷಿ ಆಯ್ತು’: ಪ್ರಧಾನಿ ಭೇಟಿ ಬಗ್ಗೆ ರಿಷಬ್​ ಪ್ರತಿಕ್ರಿಯೆ
Image
Rishab Shetty: ರಿಷಬ್​ ಶೆಟ್ಟಿ ವಿವಾಹ ವಾರ್ಷಿಕೋತ್ಸವ; ಪತ್ನಿ ಜತೆಗಿನ ಚಂದದ ಫೋಟೋ ಹಂಚಿಕೊಂಡ ‘ಕಾಂತಾರ’ ಹೀರೋ

ವಿಶ್ವಸಂಸ್ಥೆಯಲ್ಲಿ ಪರಿಸರ ಸಂರಕ್ಷಣೆ ಮಹತ್ವ ಸಾರಿದ ರಿಷಬ್ ಶೆಟ್ಟಿ: ಭಾಷಣ ಇಲ್ಲಿದೆ

ರವಿಚಂದ್ರನ್​, ಅಶ್ವಿನಿ ಪುನೀತ್​ ರಾಜ್​ಕುಮಾರ್​, ರಮೇಶ್​ ಅರವಿಂದ್​, ಗಣೇಶ್​, ವಿಜಯ್​ ಪ್ರಕಾಶ್​, ವಿಜಯ್​ ಕಿರಗಂದೂರು, ರಮ್ಯಾ, ಉಪೇಂದ್ರ, ಅಯ್ಯೋ ಶ್ರದ್ಧಾ, ಅವಿನಾಶ್​, ಮಾಳವಿಕಾ, ಸುಧಾರಾಣಿ, ಧ್ರುವ ಸರ್ಜಾ, ಸಂತೋಷ್​ ಆನಂದ್​ ರಾಮ್​, ಅರ್ಜುನ್​ ಸರ್ಜಾ, ಪವನ್​ ಕುಮಾರ್​, ಸಪ್ತಮಿ ಗೌಡ, ತಪಸ್ವಿನಿ, ರಚನಾ ಇಂದರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ಖುಷಿಗೆ ಸಾಕ್ಷಿಯಾದರು. ಡಿಕೆ ಶಿವಕುಮಾರ್​, ಸಿ.ಎನ್​. ಅಶ್ವತ್ಥ ನಾರಾಯಣ ಸೇರಿದಂತೆ ಕೆಲವು ರಾಜಕೀಯ ಮುಖಂಡರು ಕೂಡ ಭಾಗಿಯಾದರು.

‘ಕಾಂತಾರ 2’ ಚಿತ್ರಕ್ಕೆ ರಿಷಬ್​ ಶೆಟ್ಟಿ ತಯಾರಿ:

ದೇಶಾದ್ಯಂತ ಅಬ್ಬರಿಸಿದ ‘ಕಾಂತಾರ’ ಸಿನಿಮಾದಿಂದ ರಿಷಬ್​ ಶೆಟ್ಟಿ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಅವರೀಗ ‘ಕಾಂತಾರ 2’ ಚಿತ್ರಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ವರ್ಷ ಮಳೆಗಾಲದಲ್ಲಿ ಶೂಟಿಂಗ್ ಆರಂಭ ಆಗುವ ಸಾಧ್ಯತೆ ಇದೆ. ಇದು ಪ್ರೀಕ್ವೆಲ್​ ಆಗಿರಲಿದ್ದು, ರಿಷಬ್​ ಶೆಟ್ಟಿ ಅವರು ಯಾವ ಕಥೆ ಹೇಳಲಿದ್ದಾರೆ ಎಂಬ ಕೌತುಕ ಮೂಡಿದೆ. ಅಲ್ಲದೇ ಪಾತ್ರವರ್ಗದಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:01 pm, Tue, 21 March 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್