AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಕಾರಣದಿಂದ ರಿಷಬ್ ಶೆಟ್ಟಿ ಸಿನಿಮಾ ಮೇಲೆ ಕರಿನೆರಳು

Rishab Shetty-Prabhas: ರಿಷಬ್ ಶೆಟ್ಟಿ ಇದೀಗ ‘ಕಾಂತಾರ: ಚಾಪ್ಟರ್ 1’, ಹಿಂದಿಯ ‘ಛತ್ರಪತಿ ಶಿವಾಜಿ’ ಮತ್ತು ತೆಲುಗಿನಲ್ಲಿ ‘ಜೈ ಹನುಮಾನ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ‘ಜೈ ಹನುಮಾನ್’ ಸಿನಿಮಾವನ್ನು ‘ಹನುಮ್ಯಾನ್’ ಖ್ಯಾತಿಯ ಪ್ರಶಾಂತ್ ವರ್ಮಾ ನಿರ್ದೇಶಿಸಲಿದ್ದಾರೆ. ಆದರೆ ಈ ಸಿನಿಮಾ ಪ್ರಭಾಸ್ ಕಾರಣದಿಂದ ಮುಂಡೂಲ್ಪಡುವ ಸಾಧ್ಯತೆ ಹೆಚ್ಚಾಗಿದೆ.

ಪ್ರಭಾಸ್ ಕಾರಣದಿಂದ ರಿಷಬ್ ಶೆಟ್ಟಿ ಸಿನಿಮಾ ಮೇಲೆ ಕರಿನೆರಳು
Rishab Shetty Prabhas
ಮಂಜುನಾಥ ಸಿ.
|

Updated on:Mar 05, 2025 | 12:01 PM

Share

ಕಾಂತಾರ’ (Kantara) ಸಿನಿಮಾದಿಂದಾಗಿ ಪ್ಯಾನ್ ಇಂಡಿಯಾ (Pan India) ಸ್ಟಾರ್ ಆಗಿದ್ದಾರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty). ಈಗ ಅವರು ತೆಲುಗು, ಹಿಂದಿ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ತಮ್ಮ ನಿರ್ದೇಶನದ ‘ಕಾಂತಾರ’ ಸಿನಿಮಾದ ಮೇಕಿಂಗ್​ನಲ್ಲಿ ಬ್ಯುಸಿಯಾಗಿದ್ದಾರೆ ರಿಷನ್ ಶೆಟ್ಟಿ. ಇದರ ನಡುವೆ ಈಗಾಗಲೇ ತೆಲುಗಿನಲ್ಲಿ ‘ಜೈ ಹನುಮಾನ್’ ಹಾಗೂ ಹಿಂದಿಯಲ್ಲಿ ‘ಛತ್ರಪತಿ ಶಿವಾಜಿ’ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ಇದೀಗ ಹರಿದಾಡುತ್ತಿರುವ ಸುದ್ದಿಯಂತೆ, ಪ್ರಭಾಸ್ ಇಂದಾಗಿ ರಿಷಬ್ ಶೆಟ್ಟಿಯ ಸಿನಿಮಾ ಮುಂದೂಡಲ್ಪಟ್ಟಿದೆಯಂತೆ.

‘ಹನುಮ್ಯಾನ್’ ಸಿನಿಮಾದಿಂದ ಪ್ರಶಾಂತ್ ವರ್ಮಾ ಪ್ಯಾನ್ ಇಂಡಿಯಾ ನಿರ್ದೇಶಕರಾಗಿದ್ದಾರೆ. ಹಲವು ಸ್ಟಾರ್ ನಟರು ಪ್ರಶಾಂತ್ ವರ್ಮಾ ಜೊತೆ ಕೆಲಸ ಮಾಡಲು ಬಯಸಿದ್ದಾರೆ. ಬಾಲಿವುಡ್ ನಟ ರಣ್ವೀರ್ ಸಿಂಗ್, ಪ್ರಶಾಂತ್ ವರ್ಮಾ ಸಿನಿಮಾದಲ್ಲಿ ನಟಿಸುವವರಿದ್ದರು ಆದರೆ ಅದು ಸಾಧ್ಯವಾಗಲಿಲ್ಲ. ಇದೀಗ ಪ್ರಭಾಸ್​ಗೆ ಹೊಸ ಕತೆ ಹೇಳಿರುವ ಪ್ರಶಾಂತ್ ವರ್ಮಾ, ಪ್ರಭಾಸ್ ಜೊತೆ ಸಿನಿಮಾ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ.

ಇತ್ತ ರಿಷಬ್ ಶೆಟ್ಟಿ, ‘ಛತ್ರಪತಿ ಶಿವಾಜಿ’ ಮತ್ತು ‘ಕಾಂತಾರ’ ಸಿನಿಮಾದಲ್ಲಿ ತೊಡಗಿಕೊಂಡಿದ್ದು, ಈ ಎರಡೂ ಸಿನಿಮಾಗಳಿಗೆ ಹೆಚ್ಚು ಸಮಯ ಬೇಕಾಗಿರುವ ಕಾರಣದಿಂದಾಗಿ ಪ್ರಶಾಂತ್ ವರ್ಮಾರ ‘ಜೈ ಹನುಮಾನ್’ ಸಿನಿಮಾ ತಡವಾಗಲಿದೆ. ಮಾತ್ರವಲ್ಲದೆ ಪ್ರಭಾಸ್ ಸಹ, ತಮ್ಮ ಸಿನಿಮಾ ಅನ್ನು ಮೊದಲು ಮುಗಿಸುವಂತೆ ಪ್ರಶಾಂತ್ ವರ್ಮಾ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ. ಪ್ರಭಾಸ್​ಗೆ ಹೇಳಿರುವ ಕತೆಯ ಚಿತ್ರಕತೆ ಈಗಾಗಲೇ ರೆಡಿಯಾಗಿದ್ದು, ಸಿನಿಮಾದ ಚಿತ್ರೀಕರಣ ಶೀಘ್ರವೇ ಶುರು ಮಾಡಲು ವರ್ಮಾ ಸಹ ಅಣಿಯಾಗಿದ್ದಾರೆ.

ಇದನ್ನೂ ಓದಿ
Image
ಕಂಡಕ್ಟರ್ ಆಗಿದ್ದಾಗಲೇ ರಜನಿಕಾಂತ್ ಸ್ಟೈಲಿಶ್​
Image
ಕನ್ನಡ ಸಿನಿಮಾ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪುಷ್ಪ ಚಿತ್ರದ ಸಂಗೀತ ಸಂಯೋಜಕ
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ಇದನ್ನೂ ಓದಿ:ಪತ್ರಿಕೆಯಲ್ಲೂ ಕೆಲಸ ಮಾಡಿದ್ದ ರಿಷಬ್ ಶೆಟ್ಟಿ; ಲಾಭ ತಂದುಕೊಟ್ಟ ಉದ್ಯಮ ಯಾವುದು?

ಒಂದೊಮ್ಮೆ ಪ್ರಶಾಂತ್ ವರ್ಮಾ, ಪ್ರಭಾಸ್ ಜೊತೆಗಿನ ಸಿನಿಮಾ ಮೊದಲು ಪ್ರಾರಂಭಿಸಿದರೆ ರಿಷಬ್ ಶೆಟ್ಟಿ ಜೊತೆಗಿನ ‘ಜೈ ಹನುಮಾನ್’ ಸಿನಿಮಾ ಮುಂದೂಡಲ್ಪಡುವುದು ಪಕ್ಕಾ. ರಿಷಬ್ ಶೆಟ್ಟಿ ನಟನೆಯ ‘ಕಾಂತಾರ, ಚಾಪ್ಟರ್ 1’ ಇದೇ ವರ್ಷಾಂತ್ಯಕ್ಕೆ ಬಿಡುಗಡೆ ಆಗಲಿದೆ. ಅದಾದ ಬಳಿಕ ಅವರು ‘ಛತ್ರಪತಿ ಶಿವಾಜಿ’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದು, ಆ ಸಿನಿಮಾ 2027ಕ್ಕೆ ತೆರೆಗೆ ಬರಲಿದೆ. ಅದರ ಬಳಿಕವಷ್ಟೆ ‘ಜೈ ಹನುಮಾನ್’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.

ಇನ್ನು ಪ್ರಭಾಸ್ ಸಹ ಪ್ರಸ್ತುತ ಬಹಳ ಬ್ಯುಸಿಯಾಗಿಯೇ ಇದ್ದಾರೆ. ಪ್ರಭಾಸ್ ಇತ್ತೀಚೆಗಷ್ಟೆ ‘ರಾಜಾ ಸಾಬ್’ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಈಗ ರಘು ಹನುಪುಡಿ ನಿರ್ದೇಶನದ ಒಂದು ಸಿನಿಮಾ ಹಾಗೂ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಎರಡು ಸಿನಿಮಾಗಳ ಬಳಿಕ ಪ್ರಭಾಸ್​ಗೆ ಸಣ್ಣ ಬ್ರೇಕ್ ಇದ್ದು, ಅದರಲ್ಲಿ ಪ್ರಶಾಂತ್ ವರ್ಮಾ ಜೊತೆಗೆ ಸಿನಿಮಾ ಮುಗಿಸುವ ಆಲೋಚನೆಯಲ್ಲಿದ್ದಾರೆ ಪ್ರಭಾಸ್. ಇದರ ಹೊರತಾಗಿ ‘ಕಲ್ಕಿ 2’, ‘ಸಲಾರ್ 2’ ಮತ್ತು ಹೊಂಬಾಳೆ ನಿರ್ಮಾಣದ ಮತ್ತೊಂದು ಸಿನಿಮಾದಲ್ಲಿಯೂ ಪ್ರಭಾಸ್ ನಟಿಸಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Wed, 5 March 25

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್