AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕೊರಿಯಾದತ್ತ ಹೊರಟ ಕನ್ನಡದ ‘ಪೆಡ್ರೋ’; ಸಂತಸ ಹಂಚಿಕೊಡ ರಿಷಬ್​ ಶೆಟ್ಟಿ

‘ಪೆಡ್ರೋ' ಸಿನಿಮಾ ಈ ಮೊದಲು ಎನ್‌ಎಫ್‌ಡಿಸಿ ಫಿಲ್ಮ್ ಬಜಾರ್‌ನ ವರ್ಕ್‌ ಇನ್ ಪ್ರೊಗ್ರೆಸ್ ಲ್ಯಾಬ್‌ಗೆ ಆಯ್ಕೆ ಆಗಿ ಪ್ರಶಸ್ತಿ ಸಹ ಪಡೆದುಕೊಂಡಿತ್ತು. ಬುಸಾನ್ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಪ್ರಶಸ್ತಿ ಪಡೆದುಕೊಂಡರೆ ಹೊಸ ದಾಖಲೆ ಸೃಷ್ಟಿ ಆಗಲಿದೆ.

ದಕ್ಷಿಣ ಕೊರಿಯಾದತ್ತ ಹೊರಟ ಕನ್ನಡದ ‘ಪೆಡ್ರೋ’; ಸಂತಸ ಹಂಚಿಕೊಡ ರಿಷಬ್​ ಶೆಟ್ಟಿ
ರಿಷಬ್​-ನಟೇಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 01, 2021 | 4:39 PM

Share

ರಿಷಬ್​ ಶೆಟ್ಟಿ ನಿರ್ಮಾಣದ ಹಾಗೂ ನಟೇಶ್​ ಹೆಗಡೆ ನಿರ್ದೇಶನದ ‘ಪೆಡ್ರೋ’ ಸಿನಿಮಾ ಈಗ ದಕ್ಷಿಣ ಕೊರಿಯಾದ ಬುಸಾನ್​ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ (BIFF) ಆಯ್ಕೆ ಆಗಿದೆ. ಬುಸಾನ್​ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡದ ಸಿನಿಮಾ ಇದಾಗಿದೆ.

ಈ ಬಗ್ಗೆ ‘ಪೆಡ್ರೋ’ ನಿರ್ಮಾಪಕ ರಿಷಬ್​ ಶೆಟ್ಟಿ ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಹಂಚಿಕೊಂಡಿದ್ದಾರೆ. ‘ನಟೇಶ್ ಹೆಗಡೆ ಅವರ ಚೊಚ್ಚಲ ನಿರ್ದೇಶನ, ರಿಷಬ್​ ಶೆಟ್ಟಿ ಫಿಲ್ಮ್ಸ್​ ನಿರ್ಮಾಣದಲ್ಲಿ ತಯಾರಾದ ‘ಪೆಡ್ರೋ’ ಸಿನಿಮಾ ಇದೀಗ ಬುಸಾನ್​ ಫಿಲ್ಮ್​ ಫೆಸ್ಟ್​ಗೆ ಆಯ್ಕೆಯಾಗಿದೆ. ಇದಕ್ಕೆ ಆಯ್ಕೆಯಾದ ಪ್ರಥಮ ಕನ್ನಡದ ಚಿತ್ರ ಇದಾಗಿದೆ. ನ್ಯೂ ಕರೆಂಟ್​ ಸೆಕ್ಷನ್​ನಲ್ಲಿ ವರ್ಲ್ಡ್​ ಪ್ರೀಮಿಯರ್​ ಆಗಲಿದೆ’ ಎಂದು ಬರೆದುಕೊಂಡಿದ್ದಾರೆ ಅವರು.

ಈ ಬಗ್ಗೆ ಚಿತ್ರದ ನಿರ್ದೇಶಕ ನಟೇಶ್​ ಹೆಗಡೆ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ‘ಕೊವಿಡ್​ನಿಂದಾಗಿ ಸಿನಿಮಾಗಳು ಸಿದ್ಧವಿದ್ದರೂ ಅದನ್ನು ಪ್ರೇಕ್ಷಕರಿಗೆ ತೋರಿಸೋಕೆ ಸಾಧ್ಯವಾಗಿರಲಿಲ್ಲ. ಈಗ ನಮ್ಮ ಸಿನಿಮಾ ಬುಸಾನ್​​ ಚಿತ್ರೋತ್ಸವಕ್ಕೆ ಆಯ್ಕೆ ಆಗಿರುವುದರಿಂದ ರಿಲೀಫ್​ ಸಿಕ್ಕಂತಾಗಿದೆ. ಕೊವಿಡ್​ ಕಡಿಮೆ ಆದ ನಂತರದಲ್ಲಿ ವೀಕ್ಷಕರಿಗೆ ಈ ಸಿನಿಮಾ ತೋರಿಸಿ, ಮುಂದಿನ ಪ್ರಾಜೆಕ್ಟ್​ ಬಗ್ಗೆ ಯೋಚಿಸುತ್ತೇನೆ’ ಎನ್ನುತ್ತಾರೆ ಅವರು.

‘ಪೆಡ್ರೋ’ ಸಿನಿಮಾ ಈ ಮೊದಲು ಎನ್‌ಎಫ್‌ಡಿಸಿ ಫಿಲ್ಮ್ ಬಜಾರ್‌ನ ವರ್ಕ್‌ ಇನ್ ಪ್ರೊಗ್ರೆಸ್ ಲ್ಯಾಬ್‌ಗೆ ಆಯ್ಕೆ ಆಗಿ ಪ್ರಶಸ್ತಿ ಸಹ ಪಡೆದುಕೊಂಡಿತ್ತು. ಬುಸಾನ್ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಪ್ರಶಸ್ತಿ ಪಡೆದುಕೊಂಡರೆ ಹೊಸ ದಾಖಲೆ ಸೃಷ್ಟಿ ಆಗಲಿದೆ.

‘ಕಾಂತಾರ’ ಸಿನಿಮಾದ ಕೆಲಸಗಳಲ್ಲಿ ರಿಷಬ್​ ಶೆಟ್ಟಿ ಬ್ಯುಸಿ ಆಗಿದ್ದಾರೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್​ ನಿರ್ಮಾಣ ಮಾಡುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ನಿಗೂಢ ಅರಣ್ಯವನ್ನು ಕಾಂತಾರ ಎನ್ನಲಾಗುತ್ತದೆ. ದಕ್ಷಿಣ ಕರಾವಳಿಯ ಸುತ್ತ ಮುತ್ತ ನಡೆಯುವ ಕತೆ ಇದಾಗಿದ್ದು, ಸಂಪೂರ್ಣವಾಗಿ ಅಲ್ಲಿನ ಜನ ಜೀವನ, ಸಂಸ್ಕೃತಿ, ಭಾಷೆಯನ್ನು ಒಳಗೊಂಡಿರಲಿದೆ.

ಇದನ್ನೂ ಓದಿ: Kantara: ‘ಕಾಂತಾರ’ ಚಿತ್ರದಲ್ಲಿ ಏನೆಲ್ಲಾ ಇರಲಿದೆ?; ಗುಟ್ಟು ಬಿಟ್ಟುಕೊಟ್ಟ ರಿಷಬ್ ಶೆಟ್ಟಿ

Shiva Rajkumar: ಶಿವರಾಜ್ ಕುಮಾರ್ 126ನೇ ಚಿತ್ರಕ್ಕೆ ರಿಷಬ್ ಶೆಟ್ಟಿ ನಿರ್ದೇಶನ ಖಚಿತ; ಯಾವಾಗ ಸೆಟ್ಟೇರಲಿದೆ ಸಿನಿಮಾ?

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ