AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ?’ ಧ್ವನಿ ಎತ್ತಿದ ರಿಷಬ್​ ಶೆಟ್ಟಿ

ನವೆಂಬರ್​ 1ರಂದು ಕನ್ನಡ ರಾಜ್ಯೋತ್ಸವ. ರಾಜ್ಯದ ಬಹುತೇಕ ಕಡೆಗಳಲ್ಲಿ ಇದನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಆದರೆ, ಕೊವಿಡ್​ ಇನ್ನೂ ಪೂರ್ತಿಯಾಗಿ ತೊಲಗದ ಕಾರಣ ಕೆಲ ನಿಯಮಗಳು ಜಾರಿಯಲ್ಲಿವೆ.

‘ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ?’ ಧ್ವನಿ ಎತ್ತಿದ ರಿಷಬ್​ ಶೆಟ್ಟಿ
ರಿಷಬ್​-ಬಸವರಾಜ್​ ಬೊಮ್ಮಾಯಿ
TV9 Web
| Edited By: |

Updated on:Oct 21, 2021 | 5:03 PM

Share

ರಿಷಬ್​ ಶೆಟ್ಟಿ ನಿರ್ದೇಶಕನಾಗಿ, ನಟನಾಗಿ ಹಾಗೂ ನಿರ್ಮಾಪಕನಾಗಿ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಇದರ ಜತೆಗೆ ಅವರು ಸಾಮಾಜಿಕ ಚಿಂತನೆಗಳನ್ನು ಕೂಡ ಮಾಡುತ್ತಾರೆ. ಈ ಬಗ್ಗೆ ಆಗೊಂದು ಈಗೊಂದು ಟ್ವೀಟ್​ ಮಾಡುವ ಮೂಲಕ ತಮ್ಮ ಅಭಿಪ್ರಾಯ ಹೊರ ಹಾಕುತ್ತಿರುತ್ತಾರೆ. ಈಗ ಕನ್ನಡ ರಾಜ್ಯೋತ್ಸವದ ಬಗ್ಗೆ ಅವರು ಟ್ವೀಟ್​ ಒಂದನ್ನು ಮಾಡಿದ್ದಾರೆ. ಇದಕ್ಕೆ ಅನೇಕರು ಬೆಂಬಲ ಸೂಚಿಸಿದ್ದಾರೆ.

ನವೆಂಬರ್​ 1ರಂದು ಕನ್ನಡ ರಾಜ್ಯೋತ್ಸವ. ರಾಜ್ಯದ ಬಹುತೇಕ ಕಡೆಗಳಲ್ಲಿ ಇದನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಆದರೆ, ಕೊವಿಡ್​ ಇನ್ನೂ ಪೂರ್ತಿಯಾಗಿ ತೊಲಗದ ಕಾರಣ ಕೆಲ ನಿಯಮಗಳು ಜಾರಿಯಲ್ಲಿವೆ. ಮೈಸೂರು ದಸರಾ ಆಚರಣೆಗೆ ಆರಂಭದಲ್ಲಿ ಕೆಲ ನಿರ್ಬಂಧಗಳನ್ನು ಹೇರಲು ಸರ್ಕಾರ ಮುಂದಾಗಿತ್ತು. ಆದರೆ, ವಿರೋಧದ ನಂತರ ಇದನ್ನು ಸಡಿಲ ಮಾಡಲಾಗಿತ್ತು. ಆದರೆ, ರಾಜಕೀಯ ಸಮಾವೇಶ ಬಂದಾಗ ಈ ಯಾವ ನಿಯಮಗಳೂ ಅನ್ವಯ ಆಗುವುದಿಲ್ಲ. ಉಪ ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ರ್ಯಾಲಿ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಈ ವಿಚಾರ ಇಟ್ಟುಕೊಂಡು ರಿಷಬ್​ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.

‘ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಆಚರಣೆ, ಇತಿಹಾಸಗಳು ಭಿನ್ನವಾದರೂ ನಾಡಿಗೆ ದಸರಾ ಜತೆಗಿನ ಭಾವನಾತ್ಮಕ ಸಂಬಂಧವೇ ರಾಜ್ಯೋತ್ಸವದೊಂದಿಗೂ ಇದೆ. ಮೈಸೂರಿನ ಸಂಭ್ರಮವೇ ಬೆಳಗಾವಿಯಲ್ಲೂ ಮುಂದುವರೆಯಲು ಮಾನ್ಯ ಮುಖ್ಯಮಂತ್ರಿಗಳು  ಅವಕಾಶ ನೀಡಬೇಕಾಗಿ ವಿನಂತಿ’ ಎಂದು ರಿಷಬ್​ ಟ್ವೀಟ್​ ಮಾಡಿದ್ದಾರೆ. ಇದನ್ನು ನೂರಾರು ಜನರು ರೀಟ್ವಿಟ್​ ಮಾಡಿ ತಮ್ಮ ಬೆಂಬಲ ಸೂಚಿಸಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ, ರಾಜ್​ ಬಿ. ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಜೊತೆಯಾಗಿ ನಟಿಸುತ್ತಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರ ಹಲವು ಕಾರಣಗಳಿಂದಾಗಿ ನಿರೀಕ್ಷೆ ಮೂಡಿಸಿದೆ. ಇತ್ತೀಚೆಗೆ ಚಿತ್ರದ ಟ್ರೇಲರ್​ ಬಿಡುಗಡೆ ಆಗಿತ್ತು. ‘ಒಂದು ಮೊಟ್ಟೆಯ ಕಥೆ’ ಬಳಿಕ ರಾಜ್​ ಬಿ. ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಬೇರೊಂದು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರಾವಳಿ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಟ್ರೇಲರ್​ ನೋಡಿದ ಬಳಿಕ ಸಿನಿಪ್ರಿಯ ನಿರೀಕ್ಷೆ ಡಬಲ್​ ಆಗಿದೆ. ನವೆಂಬರ್​ 19ರಂದು ಚಿತ್ರಮಂದಿರಗಳಲ್ಲಿ ‘ಗರುಡ ಗಮನ ವೃಷಭ ವಾಹನ’ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ದಕ್ಷಿಣ ಕೊರಿಯಾದತ್ತ ಹೊರಟ ಕನ್ನಡದ ‘ಪೆಡ್ರೋ’; ಸಂತಸ ಹಂಚಿಕೊಡ ರಿಷಬ್​ ಶೆಟ್ಟಿ 

GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ

Published On - 5:00 pm, Thu, 21 October 21

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ