AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ

Garuda Gamana Vrishabha Vahana: ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ಅವರಿಗೆ ತುಂಬ ರೆಬಲ್​ ಆದಂತಹ ಪಾತ್ರವಿದೆ. ಕೈಯಲ್ಲಿ ಚೂರಿ ಹಿಡಿದು ಅವರು ಹೇಗೆ ಆರ್ಭಟಿಸುತ್ತಾರೆ ಎಂಬುದರ ಝಲಕ್​ ಈ ಟ್ರೇಲರ್​ನಲ್ಲಿದೆ.

GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ
‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ
TV9 Web
| Edited By: |

Updated on:Oct 15, 2021 | 12:08 PM

Share

ರಾಜ್​ ಬಿ. ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಕನ್ನಡದ ಪ್ರತಿಭಾವಂತ ನಿರ್ದೇಶಕರು. ಇವರಿಬ್ಬರು ಜೊತೆಯಾಗಿ ನಟಿಸುತ್ತಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರ ಹಲವು ಕಾರಣಗಳಿಂದಾಗಿ ನಿರೀಕ್ಷೆ ಮೂಡಿಸಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಇಂದು (ಅ.15) ಟ್ರೇಲರ್​ ಬಿಡುಗಡೆ ಆಗಿದೆ. ‘ಒಂದು ಮೊಟ್ಟೆಯ ಕಥೆ’ ಬಳಿಕ ರಾಜ್​ ಬಿ. ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಬೇರೊಂದು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಶಿವ ಎಂಬ ಪಾತ್ರಕ್ಕೆ ರಾಜ್​ ಬಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಈ ಮೊದಲಿನ ಸಿನಿಮಾಗಳಂತೆ ಅವರಿಲ್ಲಿ ಕಾಮಿಡಿ ಮಾಡುವುದಿಲ್ಲ. ಕಾಮಿಡಿ ಬದಲಿಗೆ ಸಿಕ್ಕಾಪಟ್ಟೆ ಟೆರರ್​ ಆಗಿದ್ದಾರೆ. ಕೈಯಲ್ಲಿ ಚೂರಿ ಹಿಡಿದು ಆರ್ಭಟಿಸುತ್ತಾರೆ. ತುಂಬ ರೆಬಲ್​ ಆದಂತಹ ಪಾತ್ರವನ್ನು ಅವರು ನಿಭಾಯಿಸಿದ್ದಾರೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ.

ಕರಾವಳಿ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಟ್ರೇಲರ್​ ನೋಡಿದ ಬಳಿಕ ಸಿನಿಪ್ರಿಯ ನಿರೀಕ್ಷೆ ಡಬಲ್​ ಆಗುವುದು ಗ್ಯಾರಂಟಿ. ನವೆಂಬರ್​ 19ರಂದು ಚಿತ್ರಮಂದಿರಗಳಲ್ಲಿ ‘ಗರುಡ ಗಮನ ವೃಷಭ ವಾಹನ’ ಬಿಡುಗಡೆ ಆಗಲಿದೆ.

(ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೇಲರ್​)

ಈ ಚಿತ್ರವನ್ನು ರಕ್ಷಿತ್​ ಶೆಟ್ಟಿಯವರ ಪರಂವಾ ಸ್ಡುಡಿಯೋಸ್​ ಬ್ಯಾನರ್​ ಮೂಲಕ ಪ್ರಸ್ತುತ ಪಡಿಸಲಾಗುತ್ತಿದೆ. ರಕ್ಷಿತ್​ ಶೆಟ್ಟಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಟ್ರೇಲರ್​ ಹಂಚಿಕೊಂಡಿದ್ದಾರೆ. ಕಾರ್ತಿಕ್​ ಗೌಡ ಅವರ ಕೆಆರ್​ಜಿ ಸ್ಟುಡಿಯೋಸ್​ ಮೂಲಕ ಚಿತ್ರವನ್ನು ವಿತರಣೆ ಮಾಡಲಾಗುವುದು. ಟ್ರೇಲರ್​ಗೆ ಕಾರ್ತಿಕ್​ ಗೌಡ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:

GGVV: ಬಹುನಿರೀಕ್ಷಿತ ‘ಗರುಡ ಗಮನ ವೃಷಭ ವಾಹನ’ ಚಿತ್ರ ತಂಡದಿಂದ ಹೊರಬಿತ್ತು ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ

‘ಕೋಟಿಗೊಬ್ಬ 3’ ನೋಡಲು ಸಾಲುಗಟ್ಟಿ ನಿಂತ ಫ್ಯಾನ್ಸ್​; ಸುದೀಪ್ ಕಟೌಟ್​ಗೆ ಹಾಲಿನ ಅಭಿಷೇಕ

Published On - 11:42 am, Fri, 15 October 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್