AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ

Garuda Gamana Vrishabha Vahana: ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ಅವರಿಗೆ ತುಂಬ ರೆಬಲ್​ ಆದಂತಹ ಪಾತ್ರವಿದೆ. ಕೈಯಲ್ಲಿ ಚೂರಿ ಹಿಡಿದು ಅವರು ಹೇಗೆ ಆರ್ಭಟಿಸುತ್ತಾರೆ ಎಂಬುದರ ಝಲಕ್​ ಈ ಟ್ರೇಲರ್​ನಲ್ಲಿದೆ.

GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ
‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ
TV9 Web
| Edited By: |

Updated on:Oct 15, 2021 | 12:08 PM

Share

ರಾಜ್​ ಬಿ. ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಕನ್ನಡದ ಪ್ರತಿಭಾವಂತ ನಿರ್ದೇಶಕರು. ಇವರಿಬ್ಬರು ಜೊತೆಯಾಗಿ ನಟಿಸುತ್ತಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರ ಹಲವು ಕಾರಣಗಳಿಂದಾಗಿ ನಿರೀಕ್ಷೆ ಮೂಡಿಸಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಇಂದು (ಅ.15) ಟ್ರೇಲರ್​ ಬಿಡುಗಡೆ ಆಗಿದೆ. ‘ಒಂದು ಮೊಟ್ಟೆಯ ಕಥೆ’ ಬಳಿಕ ರಾಜ್​ ಬಿ. ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಬೇರೊಂದು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಶಿವ ಎಂಬ ಪಾತ್ರಕ್ಕೆ ರಾಜ್​ ಬಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಈ ಮೊದಲಿನ ಸಿನಿಮಾಗಳಂತೆ ಅವರಿಲ್ಲಿ ಕಾಮಿಡಿ ಮಾಡುವುದಿಲ್ಲ. ಕಾಮಿಡಿ ಬದಲಿಗೆ ಸಿಕ್ಕಾಪಟ್ಟೆ ಟೆರರ್​ ಆಗಿದ್ದಾರೆ. ಕೈಯಲ್ಲಿ ಚೂರಿ ಹಿಡಿದು ಆರ್ಭಟಿಸುತ್ತಾರೆ. ತುಂಬ ರೆಬಲ್​ ಆದಂತಹ ಪಾತ್ರವನ್ನು ಅವರು ನಿಭಾಯಿಸಿದ್ದಾರೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ.

ಕರಾವಳಿ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಟ್ರೇಲರ್​ ನೋಡಿದ ಬಳಿಕ ಸಿನಿಪ್ರಿಯ ನಿರೀಕ್ಷೆ ಡಬಲ್​ ಆಗುವುದು ಗ್ಯಾರಂಟಿ. ನವೆಂಬರ್​ 19ರಂದು ಚಿತ್ರಮಂದಿರಗಳಲ್ಲಿ ‘ಗರುಡ ಗಮನ ವೃಷಭ ವಾಹನ’ ಬಿಡುಗಡೆ ಆಗಲಿದೆ.

(ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೇಲರ್​)

ಈ ಚಿತ್ರವನ್ನು ರಕ್ಷಿತ್​ ಶೆಟ್ಟಿಯವರ ಪರಂವಾ ಸ್ಡುಡಿಯೋಸ್​ ಬ್ಯಾನರ್​ ಮೂಲಕ ಪ್ರಸ್ತುತ ಪಡಿಸಲಾಗುತ್ತಿದೆ. ರಕ್ಷಿತ್​ ಶೆಟ್ಟಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಟ್ರೇಲರ್​ ಹಂಚಿಕೊಂಡಿದ್ದಾರೆ. ಕಾರ್ತಿಕ್​ ಗೌಡ ಅವರ ಕೆಆರ್​ಜಿ ಸ್ಟುಡಿಯೋಸ್​ ಮೂಲಕ ಚಿತ್ರವನ್ನು ವಿತರಣೆ ಮಾಡಲಾಗುವುದು. ಟ್ರೇಲರ್​ಗೆ ಕಾರ್ತಿಕ್​ ಗೌಡ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:

GGVV: ಬಹುನಿರೀಕ್ಷಿತ ‘ಗರುಡ ಗಮನ ವೃಷಭ ವಾಹನ’ ಚಿತ್ರ ತಂಡದಿಂದ ಹೊರಬಿತ್ತು ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ

‘ಕೋಟಿಗೊಬ್ಬ 3’ ನೋಡಲು ಸಾಲುಗಟ್ಟಿ ನಿಂತ ಫ್ಯಾನ್ಸ್​; ಸುದೀಪ್ ಕಟೌಟ್​ಗೆ ಹಾಲಿನ ಅಭಿಷೇಕ

Published On - 11:42 am, Fri, 15 October 21

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​