AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ

Garuda Gamana Vrishabha Vahana: ‘ಗರುಡ ಗಮನ ವೃಷಭ ವಾಹನ’ ಚಿತ್ರದಲ್ಲಿ ರಾಜ್​ ಬಿ. ಶೆಟ್ಟಿ ಅವರಿಗೆ ತುಂಬ ರೆಬಲ್​ ಆದಂತಹ ಪಾತ್ರವಿದೆ. ಕೈಯಲ್ಲಿ ಚೂರಿ ಹಿಡಿದು ಅವರು ಹೇಗೆ ಆರ್ಭಟಿಸುತ್ತಾರೆ ಎಂಬುದರ ಝಲಕ್​ ಈ ಟ್ರೇಲರ್​ನಲ್ಲಿದೆ.

GGVV Trailer: ರಾಜ್​ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್​ ನೀಡಿದ ರಿಷಬ್​ ಶೆಟ್ಟಿ
‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ
TV9 Web
| Edited By: |

Updated on:Oct 15, 2021 | 12:08 PM

Share

ರಾಜ್​ ಬಿ. ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಕನ್ನಡದ ಪ್ರತಿಭಾವಂತ ನಿರ್ದೇಶಕರು. ಇವರಿಬ್ಬರು ಜೊತೆಯಾಗಿ ನಟಿಸುತ್ತಿರುವ ‘ಗರುಡ ಗಮನ ವೃಷಭ ವಾಹನ’ ಚಿತ್ರ ಹಲವು ಕಾರಣಗಳಿಂದಾಗಿ ನಿರೀಕ್ಷೆ ಮೂಡಿಸಿದೆ. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸುವ ರೀತಿಯಲ್ಲಿ ಇಂದು (ಅ.15) ಟ್ರೇಲರ್​ ಬಿಡುಗಡೆ ಆಗಿದೆ. ‘ಒಂದು ಮೊಟ್ಟೆಯ ಕಥೆ’ ಬಳಿಕ ರಾಜ್​ ಬಿ. ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಬೇರೊಂದು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಗರುಡ ಗಮನ ವೃಷಭ ವಾಹನ’ ಸಿನಿಮಾದಲ್ಲಿ ಶಿವ ಎಂಬ ಪಾತ್ರಕ್ಕೆ ರಾಜ್​ ಬಿ ಶೆಟ್ಟಿ ಬಣ್ಣ ಹಚ್ಚಿದ್ದಾರೆ. ಈ ಮೊದಲಿನ ಸಿನಿಮಾಗಳಂತೆ ಅವರಿಲ್ಲಿ ಕಾಮಿಡಿ ಮಾಡುವುದಿಲ್ಲ. ಕಾಮಿಡಿ ಬದಲಿಗೆ ಸಿಕ್ಕಾಪಟ್ಟೆ ಟೆರರ್​ ಆಗಿದ್ದಾರೆ. ಕೈಯಲ್ಲಿ ಚೂರಿ ಹಿಡಿದು ಆರ್ಭಟಿಸುತ್ತಾರೆ. ತುಂಬ ರೆಬಲ್​ ಆದಂತಹ ಪಾತ್ರವನ್ನು ಅವರು ನಿಭಾಯಿಸಿದ್ದಾರೆ ಎಂಬುದಕ್ಕೆ ಈ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ.

ಕರಾವಳಿ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಟ್ರೇಲರ್​ ನೋಡಿದ ಬಳಿಕ ಸಿನಿಪ್ರಿಯ ನಿರೀಕ್ಷೆ ಡಬಲ್​ ಆಗುವುದು ಗ್ಯಾರಂಟಿ. ನವೆಂಬರ್​ 19ರಂದು ಚಿತ್ರಮಂದಿರಗಳಲ್ಲಿ ‘ಗರುಡ ಗಮನ ವೃಷಭ ವಾಹನ’ ಬಿಡುಗಡೆ ಆಗಲಿದೆ.

(ಗರುಡ ಗಮನ ವೃಷಭ ವಾಹನ ಚಿತ್ರದ ಟ್ರೇಲರ್​)

ಈ ಚಿತ್ರವನ್ನು ರಕ್ಷಿತ್​ ಶೆಟ್ಟಿಯವರ ಪರಂವಾ ಸ್ಡುಡಿಯೋಸ್​ ಬ್ಯಾನರ್​ ಮೂಲಕ ಪ್ರಸ್ತುತ ಪಡಿಸಲಾಗುತ್ತಿದೆ. ರಕ್ಷಿತ್​ ಶೆಟ್ಟಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಟ್ರೇಲರ್​ ಹಂಚಿಕೊಂಡಿದ್ದಾರೆ. ಕಾರ್ತಿಕ್​ ಗೌಡ ಅವರ ಕೆಆರ್​ಜಿ ಸ್ಟುಡಿಯೋಸ್​ ಮೂಲಕ ಚಿತ್ರವನ್ನು ವಿತರಣೆ ಮಾಡಲಾಗುವುದು. ಟ್ರೇಲರ್​ಗೆ ಕಾರ್ತಿಕ್​ ಗೌಡ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ:

GGVV: ಬಹುನಿರೀಕ್ಷಿತ ‘ಗರುಡ ಗಮನ ವೃಷಭ ವಾಹನ’ ಚಿತ್ರ ತಂಡದಿಂದ ಹೊರಬಿತ್ತು ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ

‘ಕೋಟಿಗೊಬ್ಬ 3’ ನೋಡಲು ಸಾಲುಗಟ್ಟಿ ನಿಂತ ಫ್ಯಾನ್ಸ್​; ಸುದೀಪ್ ಕಟೌಟ್​ಗೆ ಹಾಲಿನ ಅಭಿಷೇಕ

Published On - 11:42 am, Fri, 15 October 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ