AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಪಡೆದ ಸಂಭಾವನೆ ಎಷ್ಟು? ಊಹೆಗೂ ಮೀರಿದ್ದು

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ರಿಲೀಸ್​ಗೆ ಬಾಕಿ ಇರೋದು ಇನ್ನು ಕೆಲವೇ ದಿನಗಳು ಮಾತ್ರ. ಹೀಗಿರುವಾಗಲೇ ಚಿತ್ರದ ಟ್ರೇಲರ್ ರಿಲೀಸ್ ಆಗಿ ಎಲ್ಲ ಕಡೆಗಳಲ್ಲಿ ಸದ್ದು ಮಾಡಿದೆ. ಈ ಮಧ್ಯೆ ರಿಷಬ್ ಸಂಭಾವನೆ ವಿಚಾರ ಚರ್ಚೆಗೆ ಕಾರಣ ಆಗಿದೆ.

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ರಿಷಬ್ ಪಡೆದ ಸಂಭಾವನೆ ಎಷ್ಟು? ಊಹೆಗೂ ಮೀರಿದ್ದು
ರಿಷಬ್
ರಾಜೇಶ್ ದುಗ್ಗುಮನೆ
|

Updated on: Sep 26, 2025 | 8:48 AM

Share

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ (Kantara) ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಅವರು ಚಿತ್ರಕಥೆ, ಸಂಭಾಷಣೆ ಬರೆಯುವಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಇಷ್ಟೆಲ್ಲ ಜವಾಬ್ದಾರಿ ವಹಿಸಿಕೊಳ್ಳುವುದು ದೊಡ್ಡ ಚಾಲೆಂಜ್. ಈ ಚಾಲೆಂಜ್​ನ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಇದಕ್ಕಾಗಿ ಅವರು ದೊಡ್ಡ ಮಟ್ಟದಲ್ಲಿ ಪ್ರತಿಫಲ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ಸಾಮಾನ್ಯವಾಗಿ ಬಾಲಿವುಡ್​​ನಲ್ಲಿ ಹಲವು ಸ್ಟಾರ್​ಗಳು ಸಿನಿಮಾಗಳಿಗೆ ನಿರ್ಮಾಪಕರಿಂದ ಸಂಭಾವನೆ ಪಡೆಯೋದಿಲ್ಲ. ಆಮಿರ್ ಖಾನ್, ಶಾರುಖ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಅನೇಕ ಸ್ಟಾರ್​ಗಳು ಈ ರೀತಿ ಮಾಡುತ್ತಾರೆ. ಅವರು ಸಂಭಾವನೆ ಬದಲು ಸಿನಿಮಾ ಗೆದ್ದರೆ ಅದರಲ್ಲಿ ಬಂದ ಲಾಭದಲ್ಲಿ ಒಂದಷ್ಟು ಮೊತ್ತವನ್ನು ಪಡೆದುಕೊಳ್ಳುತ್ತಾರೆ. ಈ ರೀತಿ ಅನೇಕರು ಮಾಡಿದ್ದಾರೆ.

ಆದರೆ, ಕನ್ನಡದಲ್ಲಿ ಈ ಟ್ರೆಂಡ್ ಇತ್ತೀಚೆಗೆ ಆರಂಭ ಆಗಿದೆ. ಕನ್ನಡದಲ್ಲಿ ಬಹುತೇಕ ಕಲಾವಿದರು ಸಂಭಾವನೆ ಫಿಕ್ಸ್ ಮಾಡಿ, ಅದನ್ನು ಪಡೆದುಕೊಳ್ಳುತ್ತಾರೆ. ಸಿನಿಮಾ ಹಿಟ್ ಆಗಲಿ ಅಥವಾ ಹಿಟ್ ಆಗದೆ ಇರಲಿ, ಅದು ನಿರ್ಮಾಪಕರ ತಲೆಗೆ ಬೀಳಲಿದೆ. ಆದರೆ, ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ವಿಚಾರದಲ್ಲಿ ಶೇರು ಪಡೆಯುವ ತಂತ್ರ ಬಳಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ
Image
‘ನಾನು ಒಂದು ದಿನ ಮಗು ಹೊಂದುತ್ತೇನೆ’; ಮನದ ಆಸೆ ಹೊರಹಾಕಿದ ಸಲ್ಮಾನ್ ಖಾನ್
Image
ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್
Image
‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಸಂಭಾವನೆ ಪಡೆದಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾದಲ್ಲಿ ಬರೋ ಲಾಭದಲ್ಲಿ ಅವರು ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಲಾಭವನ್ನು ಪಡೆದುಕೊಳ್ಳಲಿದ್ದಾರಂತೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್​ಗೂ ಮೊದಲೇ ಲಾಭದಲ್ಲಿ ಇದೆ. ಸಿನಿಮಾ ಅತ್ಯುತ್ತಮವಾಗಿದ್ದರೆ ಒಳ್ಳೆಯ ಕಲೆಕ್ಷನ್ ಮಾಡುತ್ತದೆ. ಇದರಿಂದ ರಿಷಬ್​ಗೆ ಸಿಗೋ ಪಾಲು ಕೂಡ ಹೆಚ್ಚುತ್ತದೆ.

ಇದನ್ನೂ ಓದಿ: ‘ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ರಾಜ್, ರಕ್ಷಿತ್ ಸಹಾಯ ಮಾಡಿಲ್ಲ’; ರಿಷಬ್ ಶೆಟ್ಟಿ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ. ಅಕ್ಟೋಬರ್ 1ರಂದು ಪ್ರೀಮಿಯರ್ ಶೋಗಳನ್ನು ಮಾಡುವ ಆಲೋಚನೆ ಇದೆ. ಈ ಚಿತ್ರದಲ್ಲಿ ರಿಷಬ್ ಜೊತೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ