AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಬಜೆಟ್ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ; ಊಹಿಸಿದ್ದಕ್ಕಿಂತ ಹೆಚ್ಚು

Kantara Chapter 1 Budget: ‘ಕಾಂತಾರ’ ಸಿನಿಮಾದ ಬಜೆಟ್ ಎಷ್ಟು ಕೋಟಿ ರೂಪಾಯಿ ಎಂಬುದು ಈ ಮೊದಲೇ ರಿವೀಲ್ ಆಗಿತ್ತು. 15 ಕೋಟಿ ರೂಪಾಯಿ ಮೊತ್ತ ಖರ್ಚಾಗಿತ್ತು ಎಂದು ಹೇಳಲಾಯಿತು. ಈ ವಿಚಾರವನ್ನು ರಿಷಬ್ ಶೆಟ್ಟಿ ಅವರು ಒಪ್ಪಿಕೊಂಡರು. ಸಿನಿಮಾ ರಿಲೀಸ್ ಕೂಡ ಸೇರಿದರೆ 15 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಅವರು ಹೇಳಿದರು.

‘ಕಾಂತಾರ: ಚಾಪ್ಟರ್ 1’ ಬಜೆಟ್ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ; ಊಹಿಸಿದ್ದಕ್ಕಿಂತ ಹೆಚ್ಚು
Rishab (2)
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on:Sep 27, 2025 | 7:33 PM

Share

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಅಕ್ಟೋಬರ್ 2ರಂದು ಪ್ರೇಕ್ಷಕರ ಎದುರು ಬರಲು ಸಿದ್ಧವಾಗಿದೆ. ಈ ಚಿತ್ರದ ಬಗ್ಗೆ ರಿಷಬ್ ಶೆಟ್ಟಿ ಅವರು ಟಿವಿ9 ಕನ್ನಡದ ಜೊತೆ ವಿಶೇಷವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ಚಿತ್ರದ ಬಜೆಟ್ ಬಗ್ಗೆ ಮಾತನಾಡಿದರು ಮತ್ತು ಒಂದು ಅಚ್ಚರಿಯ ವಿಚಾರವನ್ನು ರಿವೀಲ್ ಮಾಡಿದರು. ಇದರ ಜೊತೆಗೆ ಮೊದಲನೇ ಸಿನಿಮಾದ ಬಜೆಟ್ ಬಗ್ಗೆಯೂ ಹೇಳಿದರು.

‘ಕಾಂತಾರ’ ಸಿನಿಮಾದ ಬಜೆಟ್ ಎಷ್ಟು ಕೋಟಿ ರೂಪಾಯಿ ಎಂಬುದು ಈ ಮೊದಲೇ ರಿವೀಲ್ ಆಗಿತ್ತು. 15 ಕೋಟಿ ರೂಪಾಯಿ ಮೊತ್ತ ಖರ್ಚಾಗಿತ್ತು ಎಂದು ಹೇಳಲಾಯಿತು. ಈ ವಿಚಾರವನ್ನು ರಿಷಬ್ ಶೆಟ್ಟಿ ಅವರು ಒಪ್ಪಿಕೊಂಡರು. ಸಿನಿಮಾ ರಿಲೀಸ್ ಕೂಡ ಸೇರಿದರೆ 15 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಅವರು ಹೇಳಿದರು.

ಆ ಬಳಿಕ ‘ಕಾಂತಾರ: ಚಾಪ್ಟರ್ 1’ ಚಿತ್ರದ ಬಜೆಟ್ ಬಗ್ಗೆ ಕೇಳಲಾಯಿತು. 150-200 ಕೋಟಿ ರೂಪಾಯಿ ಖರ್ಚಾಗಿರಬಹುದೇ ಎಂದು ರಿಷಬ್​ಗೆ ಕೇಳಲಾಯಿತು.  ಇದಕ್ಕೆ ರಿಷಬ್ ಅವರು ಉತ್ತರಿಸುವುದಿಲ್ಲ ಎಂದರು. ಆದರೆ, ಅವರು ಒಂದಷ್ಟು ವಿಚಾರಗಳನ್ನು ರಿವೀಲ್ ಮಾಡಿದರು.

ಕಾಂತಾರ ಬಜೆಟ್ ಬಗ್ಗೆ ರಿಷಬ್ ಮಾತು

‘ಕೆಲವೇ ದಿನದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಆಗ ಜನರಿಗೇ ಗೊತ್ತಾಗುತ್ತದೆ. ಅದು ಮುಖ್ಯವಲ್ಲ. ಕಥೆ ಏನು ಕೇಳುತ್ತದೆ, ಅದಕ್ಕೆ ನಾವು ಏನು ಕೊಡುತ್ತೇವೆ ಎಂಬುದಷ್ಟೇ ಮುಖ್ಯವಾಗುತ್ತದೆ. ಸಿನಿಮಾ ರಿಲೀಸ್ ಆದ ಬಳಿಕ ಅದೆಲ್ಲವೂ ಬರಹುದು’ ಎಂದು ರಿಷಬ್ ಶೆಟ್ಟಿ ಹೇಳಿದರು.

ಇದನ್ನೂ ಓದಿ: ‘ಕಾಂತಾರ’ ನಟ ರಾಕೇಶ್ ಪೂಜಾರಿ ಸಾವಿನ ಬಗ್ಗೆ ರಿಷಬ್ ಶೆಟ್ಟಿ ಹೇಳಿದ್ದೇನು?

ರಿಷಬ್ ಶೆಟ್ಟಿ ಸಂಭಾವನೆ ವಿಚಾರವೂ ಸಾಕಷ್ಟು ಸುದ್ದಿ ಆಗುತ್ತಿದೆ. ರಿಷಬ್ ಅವರು ಸಂಭಾವನೆ ಬದಲು ಷೇರು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಲಾಯಿತು. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿಲ್ಲ. ಈ ಚಿತ್ರಕ್ಕೆ ನಟನೆ, ನಿರ್ದೇಶನ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವುದರಿಂದ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯಬಹುದು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:14 pm, Sat, 27 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ