AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಬಜೆಟ್ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ; ಊಹಿಸಿದ್ದಕ್ಕಿಂತ ಹೆಚ್ಚು

Kantara Chapter 1 Budget: ‘ಕಾಂತಾರ’ ಸಿನಿಮಾದ ಬಜೆಟ್ ಎಷ್ಟು ಕೋಟಿ ರೂಪಾಯಿ ಎಂಬುದು ಈ ಮೊದಲೇ ರಿವೀಲ್ ಆಗಿತ್ತು. 15 ಕೋಟಿ ರೂಪಾಯಿ ಮೊತ್ತ ಖರ್ಚಾಗಿತ್ತು ಎಂದು ಹೇಳಲಾಯಿತು. ಈ ವಿಚಾರವನ್ನು ರಿಷಬ್ ಶೆಟ್ಟಿ ಅವರು ಒಪ್ಪಿಕೊಂಡರು. ಸಿನಿಮಾ ರಿಲೀಸ್ ಕೂಡ ಸೇರಿದರೆ 15 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಅವರು ಹೇಳಿದರು.

‘ಕಾಂತಾರ: ಚಾಪ್ಟರ್ 1’ ಬಜೆಟ್ ಬಗ್ಗೆ ಮಾತನಾಡಿದ ರಿಷಬ್ ಶೆಟ್ಟಿ; ಊಹಿಸಿದ್ದಕ್ಕಿಂತ ಹೆಚ್ಚು
Rishab (2)
 ಶ್ರೀಲಕ್ಷ್ಮೀ ಎಚ್
| Edited By: |

Updated on:Sep 27, 2025 | 7:33 PM

Share

‘ಕಾಂತಾರ: ಚಾಪ್ಟರ್ 1’ (Kantara) ಸಿನಿಮಾದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಅಕ್ಟೋಬರ್ 2ರಂದು ಪ್ರೇಕ್ಷಕರ ಎದುರು ಬರಲು ಸಿದ್ಧವಾಗಿದೆ. ಈ ಚಿತ್ರದ ಬಗ್ಗೆ ರಿಷಬ್ ಶೆಟ್ಟಿ ಅವರು ಟಿವಿ9 ಕನ್ನಡದ ಜೊತೆ ವಿಶೇಷವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ಚಿತ್ರದ ಬಜೆಟ್ ಬಗ್ಗೆ ಮಾತನಾಡಿದರು ಮತ್ತು ಒಂದು ಅಚ್ಚರಿಯ ವಿಚಾರವನ್ನು ರಿವೀಲ್ ಮಾಡಿದರು. ಇದರ ಜೊತೆಗೆ ಮೊದಲನೇ ಸಿನಿಮಾದ ಬಜೆಟ್ ಬಗ್ಗೆಯೂ ಹೇಳಿದರು.

‘ಕಾಂತಾರ’ ಸಿನಿಮಾದ ಬಜೆಟ್ ಎಷ್ಟು ಕೋಟಿ ರೂಪಾಯಿ ಎಂಬುದು ಈ ಮೊದಲೇ ರಿವೀಲ್ ಆಗಿತ್ತು. 15 ಕೋಟಿ ರೂಪಾಯಿ ಮೊತ್ತ ಖರ್ಚಾಗಿತ್ತು ಎಂದು ಹೇಳಲಾಯಿತು. ಈ ವಿಚಾರವನ್ನು ರಿಷಬ್ ಶೆಟ್ಟಿ ಅವರು ಒಪ್ಪಿಕೊಂಡರು. ಸಿನಿಮಾ ರಿಲೀಸ್ ಕೂಡ ಸೇರಿದರೆ 15 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಅವರು ಹೇಳಿದರು.

ಆ ಬಳಿಕ ‘ಕಾಂತಾರ: ಚಾಪ್ಟರ್ 1’ ಚಿತ್ರದ ಬಜೆಟ್ ಬಗ್ಗೆ ಕೇಳಲಾಯಿತು. 150-200 ಕೋಟಿ ರೂಪಾಯಿ ಖರ್ಚಾಗಿರಬಹುದೇ ಎಂದು ರಿಷಬ್​ಗೆ ಕೇಳಲಾಯಿತು.  ಇದಕ್ಕೆ ರಿಷಬ್ ಅವರು ಉತ್ತರಿಸುವುದಿಲ್ಲ ಎಂದರು. ಆದರೆ, ಅವರು ಒಂದಷ್ಟು ವಿಚಾರಗಳನ್ನು ರಿವೀಲ್ ಮಾಡಿದರು.

ಕಾಂತಾರ ಬಜೆಟ್ ಬಗ್ಗೆ ರಿಷಬ್ ಮಾತು

‘ಕೆಲವೇ ದಿನದಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಆಗ ಜನರಿಗೇ ಗೊತ್ತಾಗುತ್ತದೆ. ಅದು ಮುಖ್ಯವಲ್ಲ. ಕಥೆ ಏನು ಕೇಳುತ್ತದೆ, ಅದಕ್ಕೆ ನಾವು ಏನು ಕೊಡುತ್ತೇವೆ ಎಂಬುದಷ್ಟೇ ಮುಖ್ಯವಾಗುತ್ತದೆ. ಸಿನಿಮಾ ರಿಲೀಸ್ ಆದ ಬಳಿಕ ಅದೆಲ್ಲವೂ ಬರಹುದು’ ಎಂದು ರಿಷಬ್ ಶೆಟ್ಟಿ ಹೇಳಿದರು.

ಇದನ್ನೂ ಓದಿ: ‘ಕಾಂತಾರ’ ನಟ ರಾಕೇಶ್ ಪೂಜಾರಿ ಸಾವಿನ ಬಗ್ಗೆ ರಿಷಬ್ ಶೆಟ್ಟಿ ಹೇಳಿದ್ದೇನು?

ರಿಷಬ್ ಶೆಟ್ಟಿ ಸಂಭಾವನೆ ವಿಚಾರವೂ ಸಾಕಷ್ಟು ಸುದ್ದಿ ಆಗುತ್ತಿದೆ. ರಿಷಬ್ ಅವರು ಸಂಭಾವನೆ ಬದಲು ಷೇರು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಲಾಯಿತು. ಈ ಬಗ್ಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿಲ್ಲ. ಈ ಚಿತ್ರಕ್ಕೆ ನಟನೆ, ನಿರ್ದೇಶನ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವುದರಿಂದ ಅವರು ದೊಡ್ಡ ಮೊತ್ತದ ಸಂಭಾವನೆ ಪಡೆಯಬಹುದು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:14 pm, Sat, 27 September 25

ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು