Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ’, ರಾಜಕೀಯ ಪ್ರವೇಶದ ಬಗ್ಗೆ ರಿಷಬ್ ಶೆಟ್ಟಿ ಖಚಿತ ಹೇಳಿಕೆ

ನನ್ನನ್ನು ಒಂದು ರಾಜಕೀಯ ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿರುವ ರಿಷಬ್ ಶೆಟ್ಟಿ, ರಾಜಕೀಯ ಪ್ರವೇಶದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

'ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ', ರಾಜಕೀಯ ಪ್ರವೇಶದ ಬಗ್ಗೆ ರಿಷಬ್ ಶೆಟ್ಟಿ ಖಚಿತ ಹೇಳಿಕೆ
ರಿಷಬ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on:Apr 01, 2023 | 3:41 PM

ಕಾಂತಾರ (Kantara) ಸಿನಿಮಾದ ಬಳಿಕ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಬಹುವಾಗಿ ಚರ್ಚೆಯಲ್ಲಿದ್ದಾರೆ. ಅವರ ಪ್ರತಿ ಹೇಳಿಕೆ, ಹಾಕುವ ಬಟ್ಟೆಗಳನ್ನೂ ಗಮನಿಸಿ ಅದರಲ್ಲೊಂದು ‘ಸ್ಟೇಟ್​ಮೆಂಟ್’ ಹುಡುಕಲಾಗುತ್ತಿದೆ. ಕಾಂತಾರ ಸಿನಿಮಾವನ್ನು ದೊಡ್ಡ ಸಂಖ್ಯೆಯ ಸಿನಿಮಾ ಪ್ರೇಮಿಗಳು ನೋಡಿ ಮೆಚ್ಚಿಕೊಂಡಿದ್ದಾರೆ. ಆದರೆ ಅದೇ ಸಿನಿಮಾದ ಚುಂಗು ಹಿಡಿದು ಸಾಮಾಜಿಕ ಜಾಲತಾಣದಲ್ಲಿ  ಎಡ-ಬಲ ಪಂಥಗಳವರು ಕಿತ್ತಾಡಿದ್ದೂ ಇದೆ, ರಿಷಬ್ ಶೆಟ್ಟಿಯನ್ನು ಒಂದು ಪಕ್ಷದ ವಕ್ತಾರನಂತೆ ಬಿಂಬಿಸಿದ ಉದಾಹರಣೆಗಳೂ ಇವೆ. ಇದೆಲ್ಲದರ ನಡುವೆ ಇಂದು ರಿಷಬ್ ಶೆಟ್ಟಿ ಹಠಾತ್ತನೇ ತಮ್ಮ ರಾಜಕೀಯ (Politics) ಪ್ರವೇಶದ ಬಗ್ಗೆ ಟ್ವೀಟ್ ಒಂದನ್ನು ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ರಿಷಬ್ ಶೆಟ್ಟಿ, ವಿಶ್ವಸಂಸ್ಥೆಗೆ ಹೋಗಿದ್ದಾಗ ಅಲ್ಲಿ ತೆಗೆಸಿಕೊಂಡಿದ್ದ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದರು. ಮೋದಿ ಜಾಕೆಟ್ ಮಾದರಿಯ ನೀಲಿ ಬಣ್ಣದ ಜಾಕೆಟ್ ಧರಿಸಿ ಬಿಳಿ ಬಣ್ಣದ ಕುರ್ತಾ ಧರಿಸಿ ಥೇಟ್ ರಾಜಕಾರಣಿಯಂತೆ ಕಾಣುತ್ತಿದ್ದರು ರಿಷಬ್. ಇದೀಗ ಪತ್ರಕರ್ತೆಯೊಬ್ಬರು ರಿಷಬ್ ಅವರ ಅದೇ ಚಿತ್ರವನ್ನು ಟ್ವಿಟ್ಟರ್​ನಲ್ಲಿ ಹಂಚಿಕೊಂಡು, ರಿಷಬ್ ಶೆಟ್ಟಿ ರಾಜಕೀಯ ಪ್ರವೇಶಿಸುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಅವರು ಈ ಪೋಸ್ಟ್ ಅನ್ನು ಏಪ್ರಿಲ್ ಫೂಲ್ ಮಾಡಲೆಂದು ತಮಾಷೆಗೆ ಹಂಚಿಕೊಂಡಿದ್ದಾರಷ್ಟೆ.

ಪತ್ರಕರ್ತೆಯ ಟ್ವೀಟ್​ಗೆ ತಮಾಷೆಯಾಗಿಯೇ ಪ್ರತಿಕ್ರಿಯಿಸಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ”ಸುಮ್ಮನೆ ಇರಿ ಮಾರಾರ್ಯೆ, ಸುಳ್ಳು ಸುದ್ದಿ ಇದು, ಏಪ್ರಿಲ್ 1 ಎಂದು ಸ್ಪಷ್ಟವಾಗಿ ಹೇಳಿ. ಮೊದಲೇ ಕೆಲವರು ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ. ನಾನು ರಾಜಕೀಯಕ್ಕೆ ಎಂದೂ ಹೋಗುವುದಿಲ್ಲ” ಎಂದಿದ್ದಾರೆ. ರಿಷಬ್ ಶೆಟ್ಟರ ಈ ಟ್ವೀಟ್​ಗೆ ವ್ಯಕ್ತಿಯೊಬ್ಬ ಪ್ರತಿಕ್ರಿಯಿಸಿ ‘ಬನ್ನಿ ಶೆಟ್ರೆ, ನನ್ನ ಫುಲ್ ಬೆಂಬಲ ನಿಮಗೆ’ ಎಂದಿದ್ದಾನೆ. ಆ ವ್ಯಕ್ತಿಗೂ ಪ್ರತಿಕ್ರಿಯೆ ನೀಡಿರುವ ರಿಷಬ್ ಶೆಟ್ಟಿ, ‘ಬೇಡ ದೇವ್ರು ನನ್ನ ಸಿನಿಮಾಕ್ಕೆ ನಿಮ್ಮ ಬೆಂಬಲ ಇದ್ರೆ ಸಾಕು’ ಎಂದಿದ್ದಾರೆ.

ರಿಷಬ್ ಶೆಟ್ಟಿಯವರ ರಾಜಕೀಯದ ಪ್ರವೇಶದ ಬಗ್ಗೆ ಅಥವಾ ರಾಜಕೀಯ ಪಕ್ಷವೊಂದಕ್ಕೆ ಬೆಂಬಲ ನೀಡುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಲ್ಲಲ್ಲಿ ಮಾತುಗಳು ಕೇಳಿ ಬರುತ್ತಿದ್ದವು. ಇದೀಗ ಸ್ವತಃ ರಿಷಬ್ ಶೆಟ್ಟಿಯವರು ಎಲ್ಲ ಊಹಾಪೋಹಗಳಿಗೆ ಟ್ವೀಟ್​ ಮೂಲಕ ತೆರೆ ಎಳೆದಿದ್ದಾರೆ. ರಿಷಬ್ ಶೆಟ್ಟಿ ಸಂಪೂರ್ಣವಾಗಿ ಸಿನಿಮಾಗಳ ಮೇಲೆ ಮಾತ್ರವೇ ಗಮನ ಕೇಂದ್ರೀಕರಿಸಲು ನಿರ್ಧರಿಸಿದಂತಿದೆ.

ರಿಷಬ್ ಶೆಟ್ಟಿಯವರು ಬಿಜೆಪಿ ಪಕ್ಷ ಹಾಗೂ ಅದರ ಆಲೋಚನೆಗಳ ಪರವಾಗಿ ಒಲವಿರುವವರು ಎಂದು ಬ್ರ್ಯಾಂಡ್ ಮಾಡಲಾಗಿದೆ. ಅದಕ್ಕೆ ಕಾರಣವೂ ಇದೆ. ರಿಷಬ್ ಶೆಟ್ಟಿಯವರು ಕೆಲವು ಬಾರಿ ಮೋದಿಯವರ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ ಮೋದಿಯವರನ್ನು ಹೊಗಳಿ ಆ ನಂತರ ರಾಹುಲ್ ಗಾಂಧಿ ಬಗ್ಗೆ ಕೇಳಿದಾಗ ನೋ ಕಮೆಂಟ್ಸ್ ಎಂದಿದ್ದರು ರಿಷಬ್, ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಹಿಂದೊಮ್ಮೆ ಬೆಲ್ ಬಾಟಮ್ ಸಿನಿಮಾದ ಸಂದರ್ಭದಲ್ಲಿಯೂ ಸಹ ಬಲಪಂಥೀಯರ ವಾದ ಸರಣಿಯ ರೀತಿಯಲ್ಲಿಯೇ ಬುದ್ಧಿಜೀವಿಗಳನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದರು ರಿಷಬ್ ಶೆಟ್ಟಿ.

ಏನಾದರಾಗಲಿ ರಿಷಬ್ ಶೆಟ್ಟಿ, ತಾವು ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗ ಮಾತ್ರವಲ್ಲ ಎಂದಿಗೂ ರಾಜಕೀಯಕ್ಕೆ ಕಾಲಿಡುವುದಿಲ್ಲ ಎಂದಿದ್ದಾರೆ ಬೇರೆ. ಇದೇ ನಿಲವು ಅಚಲವಾಗಿ ಉಳಿಯುತ್ತದೆಯೇ? ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Sat, 1 April 23

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ