AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಿಟ್ಟು ಕುಂದಾಪುರಕ್ಕೆ ಶಿಫ್ಟ್ ಆದ ರಿಷಬ್ ಶೆಟ್ಟಿ; ಊರಲ್ಲೇ ಮಗನ ಶಾಲೆಗೆ ಸೇರಿಸಿದ ನಟ

‘ಕಾಂತಾರ: ಅಧ್ಯಾಯ 1’ ಚಿತ್ರದ ಶೂಟಿಂಗ್​ಗಾಗಿ ಕುಂದಾಪುರದಲ್ಲಿ ದೊಡ್ಡ ಸ್ಟುಡಿಯೋ ಮಾಡಿ ಸೆಟ್ ಹಾಕಲಾಗಿದೆ. ಅಲ್ಲಿಯೇ ಶೂಟಿಂಗ್ ನಡೆಯುತ್ತಿದೆ. ವಿಶೇಷ ಎಂದರೆ ಈಗಾಗಲೇ ಒಂದು ಹಂತದ ಶೂಟಿಂಗ್ ಪೂರ್ತಿ ಆಗಿದೆಯಂತೆ. ಇಂಡೋರ್​, ಔಟ್​ಡೋರ್ ಎಲ್ಲವೂ ಅಲ್ಲಿಯೇ ಶೂಟ್ ಮಾಡಲಾಗುತ್ತಿದೆ ಎಂದು ರಿಷಬ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಬಿಟ್ಟು ಕುಂದಾಪುರಕ್ಕೆ ಶಿಫ್ಟ್ ಆದ ರಿಷಬ್ ಶೆಟ್ಟಿ; ಊರಲ್ಲೇ ಮಗನ ಶಾಲೆಗೆ ಸೇರಿಸಿದ ನಟ
ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Jun 05, 2024 | 8:37 AM

Share

ಸ್ಯಾಂಡಲ್​ವುಡ್ ಮಂದಿಗೆ ಬೆಂಗಳೂರು ಫೇವರಿಟ್. ಸಿನಿಮಾ ಕೆಲಸಗಳ ಹೃದಯಭಾಗ ಇರೋದು ಇಲ್ಲಿಯೇ. ಹೀಗಾಗಿ, ಬೇರೆ ಕಡೆ ಇದ್ದವರೂ ಬೆಂಗಳೂರಿಗೆ ಬಂದು ಸಿನಿಮಾ ಮಾಡೋಕೆ ಪ್ರಯತ್ನಿಸುತ್ತಾರೆ. ಆದರೆ, ರಿಷಬ್ ಶೆಟ್ಟಿ  (Rishab Shetty)ಈ ವಿಚಾರದಲ್ಲಿ ಡಿಫರೆಂಟ್. ಅವರು ಸದ್ಯ ಕುಂದಾಪುರಕ್ಕೆ ಶಿಫ್ಟ್ ಆಗಿದ್ದಾರೆ. ಮಗನನ್ನು ಕುಂದಾಪುರದ ಶಾಲೆಗೆ ಸೇರಿಸಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಕಾಂತಾರ: ಚಾಪ್ಟರ್ 1’ ಸಿನಿಮಾ. ಈ ಚಿತ್ರದ ಶೂಟಿಂಗ್ ಸದ್ಯ ಕುಂದಾಪುರದಲ್ಲಿ ನಡೆಯುತ್ತಿದೆ. ಈ ಕಾರಣಕ್ಕೆ ಪತ್ನಿ ಪ್ರಗತಿ ಹಾಗೂ ಮಕ್ಕಳ ಜೊತೆ ಅವರು ಅಲ್ಲಿಗೆ ತೆರಳಿದ್ದಾರೆ.

‘ಕಾಂತಾರ: ಅಧ್ಯಾಯ 1’ ಚಿತ್ರದ ಶೂಟಿಂಗ್​ಗಾಗಿ ಕುಂದಾಪುರದಲ್ಲಿ ದೊಡ್ಡ ಸ್ಟುಡಿಯೋ ಮಾಡಿ ಸೆಟ್ ಹಾಕಲಾಗಿದೆ. ಅಲ್ಲಿಯೇ ಶೂಟಿಂಗ್ ನಡೆಯುತ್ತಿದೆ. ವಿಶೇಷ ಎಂದರೆ ಈಗಾಗಲೇ ಒಂದು ಹಂತದ ಶೂಟಿಂಗ್ ಪೂರ್ತಿ ಆಗಿದೆಯಂತೆ. ಇಂಡೋರ್​, ಔಟ್​ಡೋರ್ ಎಲ್ಲವೂ ಅಲ್ಲಿಯೇ ಶೂಟ್ ಮಾಡಲಾಗುತ್ತಿದೆ ಎಂದು ರಿಷಬ್ ಮಾಹಿತಿ ನೀಡಿದ್ದಾರೆ. ಅವರು ಈ ಸಿನಿಮಾ ಶೂಟ್​ಗಾಗಿ ಈ ಮೊದಲು 10 ಕೆಜಿ ತೂಕ ಹೆಚ್ಚಿಸಿಕೊಂಡಿದ್ದರು. ಈಗ 8 ಕೆಜಿ ಇಳಿಸಿಕೊಂಡಿದ್ದಾರೆ.

‘ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿದಿದೆ. 100ಕ್ಕೂ ಅಧಿಕ ದಿನ ಶೂಟಿಂಗ್ ನಡೆಯಲಿದೆ. ಬಳಿಕ ಬೇರೆ ಭಾಷೆಗಳಿಗೆ ಡಬ್ಬಿಂಗ್ ನಡೆಯಲಿದೆ. ಸಿನಿಮಾ ಕೆಲಸ ಈ ವರ್ಷ ಪೂರ್ಣಗೊಳ್ಳಲಿದೆ. ಬಿಡುಗಡೆ ಮುಂದಿನ ವರ್ಷ ಆಗುತ್ತದೆ. ರಿಲೀಸ್ ಬಗ್ಗೆ ಹೊಂಬಾಳೆ ಫಿಲ್ಮ್ಸ್ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದಿದ್ದಾರೆ ರಿಷಬ್.

ಇದನ್ನೂ ಓದಿ: ಜೂನ್​ 14ಕ್ಕೆ ಬಿಡುಗಡೆ ಆಗಲಿದೆ ರಿಷಬ್​ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ

‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಅವರು ಸಾಕಷ್ಟು ಶ್ರದ್ಧೆಯಿಂದ ಪ್ರೀಕ್ವೆಲ್ ಕೆಲಸಗಳನ್ನು ಮಾಡುತ್ತಿದ್ದಾರೆ. ‘ಕಾಂತಾರ’ ಸಿನಿಮಾಗಿಂತ ಹಿಂದೇನಾಗಿತ್ತು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಅವರು ಕಲರಿಪಯಟ್ಟು ಕೂಡ ಅವರು ಕಲಿಯುತ್ತಿದ್ದಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Wed, 5 June 24

ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!