AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಿಟ್ಟು ಕುಂದಾಪುರಕ್ಕೆ ಶಿಫ್ಟ್ ಆದ ರಿಷಬ್ ಶೆಟ್ಟಿ; ಊರಲ್ಲೇ ಮಗನ ಶಾಲೆಗೆ ಸೇರಿಸಿದ ನಟ

‘ಕಾಂತಾರ: ಅಧ್ಯಾಯ 1’ ಚಿತ್ರದ ಶೂಟಿಂಗ್​ಗಾಗಿ ಕುಂದಾಪುರದಲ್ಲಿ ದೊಡ್ಡ ಸ್ಟುಡಿಯೋ ಮಾಡಿ ಸೆಟ್ ಹಾಕಲಾಗಿದೆ. ಅಲ್ಲಿಯೇ ಶೂಟಿಂಗ್ ನಡೆಯುತ್ತಿದೆ. ವಿಶೇಷ ಎಂದರೆ ಈಗಾಗಲೇ ಒಂದು ಹಂತದ ಶೂಟಿಂಗ್ ಪೂರ್ತಿ ಆಗಿದೆಯಂತೆ. ಇಂಡೋರ್​, ಔಟ್​ಡೋರ್ ಎಲ್ಲವೂ ಅಲ್ಲಿಯೇ ಶೂಟ್ ಮಾಡಲಾಗುತ್ತಿದೆ ಎಂದು ರಿಷಬ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ಬಿಟ್ಟು ಕುಂದಾಪುರಕ್ಕೆ ಶಿಫ್ಟ್ ಆದ ರಿಷಬ್ ಶೆಟ್ಟಿ; ಊರಲ್ಲೇ ಮಗನ ಶಾಲೆಗೆ ಸೇರಿಸಿದ ನಟ
ರಿಷಬ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Jun 05, 2024 | 8:37 AM

Share

ಸ್ಯಾಂಡಲ್​ವುಡ್ ಮಂದಿಗೆ ಬೆಂಗಳೂರು ಫೇವರಿಟ್. ಸಿನಿಮಾ ಕೆಲಸಗಳ ಹೃದಯಭಾಗ ಇರೋದು ಇಲ್ಲಿಯೇ. ಹೀಗಾಗಿ, ಬೇರೆ ಕಡೆ ಇದ್ದವರೂ ಬೆಂಗಳೂರಿಗೆ ಬಂದು ಸಿನಿಮಾ ಮಾಡೋಕೆ ಪ್ರಯತ್ನಿಸುತ್ತಾರೆ. ಆದರೆ, ರಿಷಬ್ ಶೆಟ್ಟಿ  (Rishab Shetty)ಈ ವಿಚಾರದಲ್ಲಿ ಡಿಫರೆಂಟ್. ಅವರು ಸದ್ಯ ಕುಂದಾಪುರಕ್ಕೆ ಶಿಫ್ಟ್ ಆಗಿದ್ದಾರೆ. ಮಗನನ್ನು ಕುಂದಾಪುರದ ಶಾಲೆಗೆ ಸೇರಿಸಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಕಾಂತಾರ: ಚಾಪ್ಟರ್ 1’ ಸಿನಿಮಾ. ಈ ಚಿತ್ರದ ಶೂಟಿಂಗ್ ಸದ್ಯ ಕುಂದಾಪುರದಲ್ಲಿ ನಡೆಯುತ್ತಿದೆ. ಈ ಕಾರಣಕ್ಕೆ ಪತ್ನಿ ಪ್ರಗತಿ ಹಾಗೂ ಮಕ್ಕಳ ಜೊತೆ ಅವರು ಅಲ್ಲಿಗೆ ತೆರಳಿದ್ದಾರೆ.

‘ಕಾಂತಾರ: ಅಧ್ಯಾಯ 1’ ಚಿತ್ರದ ಶೂಟಿಂಗ್​ಗಾಗಿ ಕುಂದಾಪುರದಲ್ಲಿ ದೊಡ್ಡ ಸ್ಟುಡಿಯೋ ಮಾಡಿ ಸೆಟ್ ಹಾಕಲಾಗಿದೆ. ಅಲ್ಲಿಯೇ ಶೂಟಿಂಗ್ ನಡೆಯುತ್ತಿದೆ. ವಿಶೇಷ ಎಂದರೆ ಈಗಾಗಲೇ ಒಂದು ಹಂತದ ಶೂಟಿಂಗ್ ಪೂರ್ತಿ ಆಗಿದೆಯಂತೆ. ಇಂಡೋರ್​, ಔಟ್​ಡೋರ್ ಎಲ್ಲವೂ ಅಲ್ಲಿಯೇ ಶೂಟ್ ಮಾಡಲಾಗುತ್ತಿದೆ ಎಂದು ರಿಷಬ್ ಮಾಹಿತಿ ನೀಡಿದ್ದಾರೆ. ಅವರು ಈ ಸಿನಿಮಾ ಶೂಟ್​ಗಾಗಿ ಈ ಮೊದಲು 10 ಕೆಜಿ ತೂಕ ಹೆಚ್ಚಿಸಿಕೊಂಡಿದ್ದರು. ಈಗ 8 ಕೆಜಿ ಇಳಿಸಿಕೊಂಡಿದ್ದಾರೆ.

‘ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿದಿದೆ. 100ಕ್ಕೂ ಅಧಿಕ ದಿನ ಶೂಟಿಂಗ್ ನಡೆಯಲಿದೆ. ಬಳಿಕ ಬೇರೆ ಭಾಷೆಗಳಿಗೆ ಡಬ್ಬಿಂಗ್ ನಡೆಯಲಿದೆ. ಸಿನಿಮಾ ಕೆಲಸ ಈ ವರ್ಷ ಪೂರ್ಣಗೊಳ್ಳಲಿದೆ. ಬಿಡುಗಡೆ ಮುಂದಿನ ವರ್ಷ ಆಗುತ್ತದೆ. ರಿಲೀಸ್ ಬಗ್ಗೆ ಹೊಂಬಾಳೆ ಫಿಲ್ಮ್ಸ್ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದಿದ್ದಾರೆ ರಿಷಬ್.

ಇದನ್ನೂ ಓದಿ: ಜೂನ್​ 14ಕ್ಕೆ ಬಿಡುಗಡೆ ಆಗಲಿದೆ ರಿಷಬ್​ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ

‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಅವರು ಸಾಕಷ್ಟು ಶ್ರದ್ಧೆಯಿಂದ ಪ್ರೀಕ್ವೆಲ್ ಕೆಲಸಗಳನ್ನು ಮಾಡುತ್ತಿದ್ದಾರೆ. ‘ಕಾಂತಾರ’ ಸಿನಿಮಾಗಿಂತ ಹಿಂದೇನಾಗಿತ್ತು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಈ ಚಿತ್ರಕ್ಕಾಗಿ ಅವರು ಕಲರಿಪಯಟ್ಟು ಕೂಡ ಅವರು ಕಲಿಯುತ್ತಿದ್ದಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Wed, 5 June 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ