AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್ ನಾಗ್ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷ; ಶುಭಕೋರಿದ ಶಿವಣ್ಣ, ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ.

ಅನಂತ್ ನಾಗ್ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷ; ಶುಭಕೋರಿದ ಶಿವಣ್ಣ, ರಿಷಬ್ ಶೆಟ್ಟಿ
ಶಿವಣ್ಣ-ಅನಂತ್ ನಾಗ್-ರಿಷಬ್
ರಾಜೇಶ್ ದುಗ್ಗುಮನೆ
|

Updated on: Aug 03, 2023 | 10:25 AM

Share

ಅನಂತ್ ನಾಗ್ (Anant Nag) ಅವರು ಚಿತ್ರರಂಗಕ್ಕೆ ಬಂದು 50 ವರ್ಷ ಕಳೆದಿದೆ. ಬಣ್ಣದ ಲೋಕಕ್ಕೆ ಅವರು ನೀಡಿದ ಸೇವೆ ದೊಡ್ಡದು. ಅವರು ತಮ್ಮ ಕಲಾ ಸೇವೆಯನ್ನು ನಿಲ್ಲಿಸಿಲ್ಲ. ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ನೀಡಿದ ಸೇವೆಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ರಿಷಬ್ ಶೆಟ್ಟಿ  (Rishab Shetty), ಶಿವರಾಜ್​ಕುಮಾರ್ ಸೇರಿದಂತೆ ಅನೇಕರು ಅನಂತ್ ನಾಗ್ ಅವರಿಗೆ ವಿಶ್ ಮಾಡಿದ್ದಾರೆ.

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ ಸಿನಿಮಾಗಳಿಗೆ ಲೆಕ್ಕವಿಲ್ಲ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರಿಗೆ ಸಿಕ್ಕಿವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ನನಗೆ ಅವಾರ್ಡ್​ಗಳಿಗಿಂತ ಅಭಿಮಾನ ಮುಖ್ಯ’ ಎಂದು ಈ ಮೊದಲು ಅವರು ಹೇಳಿದ್ದರು.

ಅನಂತ್ ನಾಗ್ ಜೊತೆ ಇರುವ ಫೋಟೋ ಹಂಚಿಕೊಂಡಿರುವ ಶಿವರಾಜ್​ಕುಮಾರ್ ಅವರು, ‘ಚಿತ್ರರಂಗದಲ್ಲಿ 50 ವರ್ಷ ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್ ಸರ್ ಅವರಿಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ. ‘ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ನನ್ನ ಸಿನಿಮಾಗಳನ್ನೂ ನಾನು ನೋಡುವುದಿಲ್ಲ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ಅನಂತ್ ನಾಗ್

ಕಳೆದ ವರ್ಷ ಅನಂತ್ ನಾಗ್ ನಟನೆಯ ‘ತಿಮ್ಮಯ್ಯ & ತಿಮ್ಮಯ್ಯ’, ‘ಗಾಳಿಪಟ 2’,  ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅವರು ಕೆಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದು ನಿಜವಾಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್