AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; 6 ಜನರಿಗೆ ಗಂಭೀರ ಗಾಯ

ವಿವಿಧ ಲೊಕೇಷನ್​ಗಳಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಆದರೆ ಈ ಚಿತ್ರತಂಡದ ಬಗ್ಗೆ ಒಂದು ಕಹಿ ಸುದ್ದಿ ಕೇಳಿಬಂದಿದೆ. ಈ ಚಿತ್ರದಲ್ಲಿ ನಟಿಸುತ್ತಿದ್ದ ಕಲಾವಿದರು ತೆರಳುತ್ತಿದ್ದ ಬಸ್​ ಅಪಘಾತ ಆಗಿದೆ. ಮಿನಿ ಬಸ್ ಪಲ್ಟಿ ಆಗಿದ್ದರಿಂದ 6 ಜನರ ಪರಿಸ್ಥಿತಿ ಗಂಭೀರವಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; 6 ಜನರಿಗೆ ಗಂಭೀರ ಗಾಯ
ರಿಷಬ್​ ಶೆಟ್ಟಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Nov 24, 2024 | 11:13 PM

Share

ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್​ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ. ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕರಾವಳಿ ಭಾಗದ ಬೇರೆ ಬೇರೆ ಲೊಕೇಷನ್​ಗಳಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾಗೆ ಶೂಟಿಂಗ್ ಮಾಡಲಾಗುತ್ತಿದೆ. ವಿವಿಧ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಲ್ಲೂರಿನ ಕಡೆಗೆ ಹೋಗುತ್ತಿದ್ದಾಗ ಮಿನಿ ಬಸ್​ ಪಲ್ಟಿಯಾಯಿತು ಎಂದು ತಿಳಿದುಬಂದಿದೆ. 20 ಜ್ಯೂನಿಯರ್ ಕಲಾವಿದರು ಈ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾ ಮೂಡಿಬರುತ್ತಿದೆ. ಬಸ್​ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಅಪಘಾತಕ್ಕೆ ಒಳಗಾದವರ ಹೆಲ್ತ್​ ಅಪ್​ಡೇಟ್​ ಇನ್ನಷ್ಟೇ ಸಿಗಬೇಕಿದೆ.

ಇದನ್ನೂ ಓದಿ: ರಾನಾ ಜೊತೆ ಪೋಸ್ ಕೊಟ್ಟ ರಿಷಬ್; ‘ಕಾಂತಾರ’ ಚಿತ್ರಕ್ಕಾ?

ಇತ್ತೀಚೆಗಷ್ಟೇ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ರಿಲೀಸ್​ ಡೇಟ್​ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. 2025ರ ಅಕ್ಟೋಬರ್​ 2ರಂದು ಈ ಸಿನಿಮಾ ರಿಲೀಸ್ ಆಗಲಿದೆ ಎಂದು ಅವರು ತಿಳಿಸಿದ್ದರು. ‘ಕಾಂತಾರ’ ಚಿತ್ರದಲ್ಲಿ ದೈವಾರಾಧನೆ ಬಗ್ಗೆ ತೋರಿಸಲಾಗಿತ್ತು. ಆ ಚಿತ್ರದ ನಟನೆಗಾಗಿ ರಿಷಬ್​ ಶೆಟ್ಟಿ ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದೂ ಅಲ್ಲದೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಬಂತು. ಈ ಎಲ್ಲ ಕಾರಣಗಳಿಂದಾಗಿ ಪ್ರೀಕ್ವೆಲ್​ ಮೇಲೆ ನಿರೀಕ್ಷೆ ಜಾಸ್ತಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:10 pm, Sun, 24 November 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ