AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಲಾವಿದ ನಿಧನ; ರಿಷಬ್ ಶೆಟ್ಟಿ ಚಿತ್ರಕ್ಕೆ ಸಂಕಷ್ಟ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟಿಂಗ್ ವೇಳೆ ಅವಘಡ ನಡೆದಿದೆ. ಸಿನಿಮಾ ಸೆಟ್​ನಲ್ಲಿದ್ದ ಜೂನಿಯರ್ ಆರ್ಟಿಸ್ಟ್​ ಕಪಿಲ್ ಎಂಬುವವರು ನಿಧನರಾಗಿದ್ದಾರೆ. ನೀರಿನಲ್ಲಿ ಮುಳುಗಿ ಅವರು ಸಾವನ್ನಪ್ಪಿದ್ದಾರೆ. ಕೊಲ್ಲೂರಿನಲ್ಲಿ ಈ ಘಟನೆ ನಡೆದಿದ್ದು, ಚಿತ್ರತಂಡಕ್ಕೆ ವಿಘ್ನ ಎದುರಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕಲಾವಿದ ನಿಧನ; ರಿಷಬ್ ಶೆಟ್ಟಿ ಚಿತ್ರಕ್ಕೆ ಸಂಕಷ್ಟ
Junior Artist Kapil, Rishab Shetty
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:May 06, 2025 | 10:43 PM

Share

ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದೆ. ಈ ಸಿನಿಮಾದ ಸೆಟ್​ನಲ್ಲಿದ್ದ ಜೂನಿಯರ್ ಆರ್ಟಿಸ್ಟ್​ ನಿಧನರಾಗಿದ್ದಾರೆ. ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ (Junior Artist) ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿನಿಮಾ ತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ರಿಷಬ್ ಶೆಟ್ಟಿ (Rishab Shetty) ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಚಿತ್ರದ ಹವಾ; ಸೂಪರ್ ಸ್ಟಾರ್​ಗಳನ್ನು ಹಿಂದಿಕ್ಕಿದ ರಿಷಬ್ ಶೆಟ್ಟಿ

ಇದನ್ನೂ ಓದಿ
Image
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
Image
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
Image
ರಿಷಬ್ ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾದ ಪೋಸ್ಟರ್ ಬಿಡುಗಡೆ
Image
ರಿಷಬ್ ಶೆಟ್ಟಿ ಮೊದಲ ಹೆಸರೇನು? ನಾಮ ಬದಲಿಸಿಕೊಳ್ಳಲು ಕಾರಣವಾಯಿತು ಆ ಘಟನೆ

‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡಕ್ಕೆ ಒಂದಲ್ಲ ಒಂದು ಗಂಡಾಂತರ ಎದುರಾಗುತ್ತಲೇ ಇದೆ. ಈ ಮೊದಲು ದೈವ ನುಡಿದಂತೆಯೇ ಚಿತ್ರೀಕರಣಕ್ಕೆ ಹಲವು ಸಂಕಷ್ಟಗಳು ಎದುರಾಗುತ್ತಿವೆ. ಈ ಹಿಂದೆ ಕೊಲ್ಲೂರಿನಲ್ಲೇ ಜೂನಿಯರ್ ಆರ್ಟಿಸ್​ಟ್​ಗಳಿದ್ದ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿತ್ತು. ಬಳಿಕ ಗಾಳಿ ಮಳೆಗೆ ಬೃಹತ್ ಸೆಟ್ ಹಾರಿ ಹೋಗಿತ್ತು. ಇಂಥ ಘಟನೆಗಳ ಬೆನ್ನಲ್ಲೇ ಜೂನಿಯರ್ ಆರ್ಟಿಸ್ಟ್ ದಾರುಣ ಸಾವು ಸಂಭವಿಸಿದೆ.

‘ಹೊಂಬಾಳೆ ಫಿಲ್ಮ್ಸ್’ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾ ಮೇಲೆ ಜನರಿಗೆ ಹೆಚ್ಚು ನಿರೀಕ್ಷೆ ಇದೆ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಆಗಿ ಈ ಚಿತ್ರ ಮೂಡಿಬರುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ತಯಾರಾಗುತ್ತಿದೆ. ಆದರೆ ಶೂಟಿಂಗ್ ಸಂದರ್ಭದಲ್ಲಿ ಅನೇಕ ತೊಂದರೆಗಳು ಉಂಟಾಗುತ್ತಿವೆ.

ಜೂನಿಯರ್ ಆರ್ಟಿಸ್ಟ್ ಕಪಿಲ್ ನಿಧನರಾಗಿರುವುದು ‘ಕಾಂತಾರ: ಚಾಪ್ಟರ್ 1’ ತಂಡಕ್ಕೆ ನೋವುಂಟು ಮಾಡಿದೆ. ಘಟನೆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಗೊತ್ತಾಗಬೇಕಿದೆ. ಚಿತ್ರತಂಡದ ಪ್ರಮುಖರು ಶೀಘ್ರದಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:33 pm, Tue, 6 May 25

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ