AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್​ 1’ ರಿಲೀಸ್ ದಿನಾಂಕ ಅನೌನ್ಸ್ ಮಾಡಿದ ರಿಷಬ್ ಶೆಟ್ಟಿ

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದ್ದೂರಿಯಾಗಿ ಈ ಸಿನಿಮಾಗೆ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆ ಇದೆ. ಇಂದು (ನ.17) ರಿಷಬ್​ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ರಿಲೀಸ್ ದಿನಾಂಕ ಅನೌನ್ಸ್ ಮಾಡಿದ ರಿಷಬ್ ಶೆಟ್ಟಿ
ರಿಷಬ್ ಶೆಟ್ಟಿ
ಮದನ್​ ಕುಮಾರ್​
|

Updated on: Nov 17, 2024 | 5:32 PM

Share

ರಿಷಬ್ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ’ ಸಿನಿಮಾ ದೇಶಾದ್ಯಂತ ಸೂಪರ್ ಹಿಟ್ ಆಗಿತ್ತು. ಆ ಯಶಸ್ಸಿನಿಂದ ಪ್ರೀಕ್ವೆಲ್​ ಘೋಷಿಸಲಾಗಿತ್ತು. ಅದಕ್ಕೆ ‘ಕಾಂತಾರ: ಚಾಪ್ಟರ್​ 1’ ಎಂದು ಶೀರ್ಷಿಕೆ ಇಡಲಾಗಿದ್ದು, ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಮೂಲಕ ‘ಕಾಂತಾರ: ಚಾಪ್ಟರ್​ 1’ ಸಿನಿಮಾದ ಬಿಡುಗಡೆ ದಿನಾಂಕವನ್ನು ಅನೌನ್ಸ್ ಮಾಡಿದ್ದು, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 2025ರ ಅಕ್ಟೋಬರ್​ 2ರಂದು ‘ಕಾಂತಾರ: ಚಾಪ್ಟರ್​ 1’ ರಿಲೀಸ್ ಆಗಲಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಪಕ ವಿಜಯ್ ಕಿರಗಂದೂರು ಅವರು ದೊಡ್ಡ ಮಟ್ಟದಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ಮುಖ್ಯ ಭೂಮಿಕೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಕುಂದಾಪುರದಲ್ಲಿ ಚಿತ್ರೀಕರಣ ಮಾಡಲಾಗುತ್ತಿದ್ದು, ಅದರ ಕೆಲಸಗಳಲ್ಲಿ ರಿಷಬ್ ಶೆಟ್ಟಿ ತುಂಬ ಬ್ಯುಸಿ ಆಗಿದ್ದಾರೆ.

ಬೃಹತ್ ಬಜೆಟ್​ನಲ್ಲಿ ‘ಕಾಂತಾರ: ಚಾಪ್ಟರ್​ 1’ ಸಿದ್ಧವಾಗುತ್ತಿದೆ. ಹಲವು ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಜೊತೆಗೆ ಪ್ರೀ-ಪ್ರೊಡಕ್ಷನ್ ಕೆಲಸಗಳಿಗೂ ಹೆಚ್ಚು ಸಮಯ ಹಿಡಿಯಲಿದೆ. ಈ ಎಲ್ಲ ಕಾರಣಗಳಿಂದ ಸಿನಿಮಾ ಬಿಡುಗಡೆಗೆ ಸಾಕಷ್ಟು ತಿಂಗಳು ಬೇಕಾಗುತ್ತದೆ. ಮುಂದಿನ ವರ್ಷ ಅಕ್ಟೋಬರ್​ 2ರಂದು ‘ಕಾಂತಾರ: ಚಾಪ್ಟರ್​ 1’ ಬಿಡುಗಡೆ ಮಾಡಲು ರಿಷಬ್​ ಶೆಟ್ಟಿ ಹಾಗೂ ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ: ರಿಷಬ್ ತಂದೆ ಪಾತ್ರದಲ್ಲಿ ಮೋಹನ್​ಲಾಲ್; ‘ಕಾಂತಾರ: ಚಾಪ್ಟರ್ 1’ ಬಗ್ಗೆ ಹರಿದಾಡಿದೆ ಸುದ್ದಿ

‘ಕಾಂತಾರ’ ಸಿನಿಮಾವನ್ನು ಮೊದಲ ಕರ್ನಾಟಕದಲ್ಲಿ ಬಿಡುಗಡೆ ಮಾಡಲಾಗಿತ್ತು. ಬಳಿಕ ಬೇರೆ ರಾಜ್ಯಗಳಿಂದಲೂ ಬೇಡಿಕೆ ಬಂದಿದ್ದರಿಂದ ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಿ ತೆರೆಕಾಣಿಸಲಾಗಿತ್ತು. ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ವಿಶ್ವಾದ್ಯಂತ ರಿಲೀಸ್ ಮಾಡಲಾಗುವುದು ಎಂದು ರಿಷಬ್ ಶೆಟ್ಟಿ ತಿಳಿಸಿದ್ದಾರೆ. ಹೆಚ್ಚಿನ ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?