AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅವಧಿ ಅದೆಷ್ಟು ದೀರ್ಘ; ಸೆನ್ಸಾರ್ ಸರ್ಟಿಫಿಕೇಟ್​ನಲ್ಲಿದೆ ವಿವರ

Kantara Chapter 1 Runtime: 'ಕಾಂತಾರ: ಚಾಪ್ಟರ್ 1' ಸಿನಿಮಾ ತನ್ನ ಸೆನ್ಸಾರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಚಿತ್ರಕ್ಕೆ'ಯು/ಎ 16+' ಸರ್ಟಿಫಿಕೇಟ್ ಸಿಕ್ಕಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರವು 'ಕಾಂತಾರ' ಚಿತ್ರಕ್ಕೆ ಪ್ರೀಕ್ವೆಲ್ ಆಗಿದೆ. ಈ ವೇಳೆ ಚಿತ್ರದ ಅವಧಿ ಕೂಡ ರಿವೀಲ್ ಆಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅವಧಿ ಅದೆಷ್ಟು ದೀರ್ಘ; ಸೆನ್ಸಾರ್ ಸರ್ಟಿಫಿಕೇಟ್​ನಲ್ಲಿದೆ ವಿವರ
Kantara Censor Certifcate
ರಾಜೇಶ್ ದುಗ್ಗುಮನೆ
|

Updated on: Sep 23, 2025 | 7:36 AM

Share

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ತನ್ನ ಸೆನ್ಸಾರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸೆಪ್ಟೆಂಬರ್ 22ರಂದು ಈ ಚಿತ್ರಕ್ಕೆ ಸೆನ್ಸಾರ್ ಆಗಿದೆ. ಸೆನ್ಸಾರ್ ಸರ್ಟಿಫಿಕೇಟ್ ಮೇಲೆ ಚಿತ್ರದ ಹಲವು ವಿವರಗಳು ಒಳಗೊಂಡಿರುತ್ತವೆ. ಅದೇ ರೀತಿ, ಈ ಚಿತ್ರದ ಅವಧಿಯ ಬಗ್ಗೆಯೂ ಉಲ್ಲೇಖ ಮಾಡಲಾಗಿದೆ. ‘ಕಾಂತಾರ’ ಚಿತ್ರಕ್ಕೆ ಹೋಲಿಕೆ ಮಾಡಿಸಿದರೆ ಈ ಸಿನಿಮಾದ ಅವಧಿ ಸ್ವಲ್ಪ ದೀರ್ಘವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಕಾಂತಾರ’ ಸಿನಿಮಾದ ಅವಧಿ 2 ಗಂಟೆ 30 ನಿಮಿಷ ಇತ್ತು. ಅಡ್ವೆಂಚರ್, ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಮೂಡಿ ಬಂದಿತ್ತು. ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದರು. ರಿಷಬ್ ಅವರದ್ದೇ ನಿರ್ದೇಶನ ಸಿನಿಮಾಗೆ ಇತ್ತು. ಬಿ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದರು. ಎಲ್ಲಿಯೂ ಬೇಸರ ಬರದಂತೆ ಸಿನಿಮಾ ಕಟ್ಟಿಕೊಟ್ಟಿದ್ದರು.

ಇದನ್ನೂ ಓದಿ
Image
ಮಾಡಿದ ಆ ಒಂದು ತಪ್ಪಿಗೆ ವೇದಿಕೆ ಮೇಲೆ ಅನುಶ್ರೀಗೆ ಕ್ಷಮೆ ಕೇಳಿದ ರಿಷಬ್
Image
‘BBK 12’ ಆರಂಭಕ್ಕೆ ಕೆಲವೇ ದಿನ ಬಾಕಿ ಇರುವಾಗ ಬಂತು ಸ್ಪರ್ಧಿಗಳ ಹೊಸ ಪಟ್ಟಿ
Image
ಗಾಯಕ ಜುಬೀನ್ ಗಾರ್ಗ್ ಸಾಯಲು ಅಸಲಿ ಕಾರಣ ಏನು? ರಿವೀಲ್ ಮಾಡಿದ ಪತ್ನಿ
Image
‘ಲೋಕಃ’ ಸಿನಿಮಾ ಒಟಿಟಿ ರಿಲೀಸ್ ವಿಚಾರದಲ್ಲಿ ಪ್ರೇಕ್ಷಕರಿಗೆ ಬೇಸರದ ಸುದ್ದಿ

ಈಗ ರಿಷಬ್ ಶೆಟ್ಟಿ ‘ಕಾಂತಾರ: ಚಾಪ್ಟರ್ 1’ ಚಿತ್ರ ಮಾಡಿದ್ದಾರೆ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಇದಾಗಿದೆ. ಈ ಸಿನಿಮಾದ ಸೆನ್ಸಾರ್ ಪ್ರಕ್ರಿಯೆ ಮುಗಿದಿದ್ದು, ಸಿನಿಮಾದ ರನ್ ಟೈಮ್ 168.53 ನಿಮಿಷ ಇದೆ. ಅಂದರೆ ಸಿನಿಮಾ 2 ಗಂಟೆ 48 ನಿಮಿಷ ಇದೆ. ಕನ್ನಡದಲ್ಲಿ ಬರುವ ಬಹುತೇಕ ಚಿತ್ರಗಳ ಅವಧಿ 2-2.30 ಗಂಟೆ ಇರುತ್ತದೆ. ಇವುಗಳಿಗೆ ಹೋಲಿಕೆ ಮಾಡಿದರೆ ಈ ಚಿತ್ರದ ಅವಧಿ ಸ್ವಲ್ಪ ದೀರ್ಘವೇ ಆಯಿತು.

ಇನ್ನು, ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ‘ಯುಎ 16+’ ಸರ್ಟಿಫಿಕೇಟ್ ದೊರೆತಿದೆ. ಅಂದರೆ, 16ನೇ ವಯಸ್ಸಿಗಿಂತ ಕೆಳಗಿನವರು ಸಿನಿಮಾ ನೋಡುತ್ತಾರೆ ಎಂದಾದರೆ ಅವರ ಜೊತೆ ಪಾಲಕರು ಇರಬೇಕು. 16 ವರ್ಷಗಳ ಮೇಲಿನವರು ಪಾಲಕರು ಇಲ್ಲದೆಯೂ ಸಿನಿಮಾ ವೀಕ್ಷಿಸಬಹುದು.

ಇದನ್ನೂ ಓದಿ: ಮಾಡಿದ ಆ ಒಂದು ತಪ್ಪಿಗೆ ವೇದಿಕೆ ಮೇಲೆ ಅನುಶ್ರೀಗೆ ಕ್ಷಮೆ ಕೇಳಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಯಾವುದೇ ಸಿನಿಮಾ ಕೈಗೆತ್ತಿಕೊಂಡರೂ ಅದರಲ್ಲಿ ಹೊಸತನ ತುಂಬಲು ಪ್ರಯತ್ನಿಸುತ್ತಾರೆ. ಹೇಳಿದ ಕಥೆಯನ್ನೇ ಮತ್ತೆ ಹೇಳಲು ಅವರಿಗೆ ಇಷ್ಟ ಇಲ್ಲ. ಹೀಗಾಗಿ, ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ಅವರು ಏನೋ ಹೊಸದನ್ನು ಹೇಳಲು ಪ್ರಯತ್ನಿಸಿದ್ದಾರೆ ಎಂಬುದು ಟ್ರೇಲರ್ ನೋಡಿದವರಿಗೆ ಗೊತ್ತಾಗುತ್ತದೆ. ಹೀಗಾಗಿ, ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!