AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಟಿಕೆಟ್​ ಬುಕಿಂಗ್​ ಶುರು; ಪ್ರೀಮಿಯರ್​ ಶೋ ಧೂಳೆಬ್ಬಿಸುವುದು ಖಚಿತ

Kantara Ticket Booking: ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ದೊಡ್ಡ ಪರದೆ ಮೇಲೆ ಈ ಚಿತ್ರವನ್ನು ನೋಡಿ ಆಸ್ವಾದಿಸಲು ಕಾದಿರುವ ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ.

Kantara: ‘ಕಾಂತಾರ’ ಟಿಕೆಟ್​ ಬುಕಿಂಗ್​ ಶುರು; ಪ್ರೀಮಿಯರ್​ ಶೋ ಧೂಳೆಬ್ಬಿಸುವುದು ಖಚಿತ
ರಿಷಬ್ ಶೆಟ್ಟಿ
TV9 Web
| Edited By: |

Updated on: Sep 26, 2022 | 3:15 PM

Share

ಬಹುನಿರೀಕ್ಷಿತ ‘ಕಾಂತಾರ’ (Kantara) ಸಿನಿಮಾದ ಟಿಕೆಟ್​ ಬುಕಿಂಗ್​ ಆರಂಭ ಆಗಿದೆ. ಸೆಪ್ಟೆಂಬರ್​ 30ರಂದು ಈ ಚಿತ್ರ ರಿಲೀಸ್​ ಆಗಲಿದೆ. ಆದರೆ ಒಂದು ದಿನ ಮುನ್ನವೇ, ಅಂದರೆ ಗುರುವಾರ (ಸೆ.29) ಹಲವು ಕಡೆಗಳಲ್ಲಿ ಪ್ರೀಮಿಯರ್​ ಶೋ (Kantara premiere show) ಆಯೋಜನೆ ಮಾಡಲಾಗುತ್ತಿದೆ. ಅದರ ಟಿಕೆಟ್​ಗಳನ್ನು ಕೂಡ ಜನರು ಮುಗಿಬಿದ್ದು ಬುಕ್​ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ಅಭಿಮಾನಿಗಳು ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ದೊಡ್ಡ ಮಟ್ಟದಲ್ಲಿ ‘ಕಾಂತಾರ’ ರಿಲೀಸ್​ ಆಗಲಿದೆ. ಈಗಾಗಲೇ ಟ್ರೇಲರ್​ ಧೂಳೆಬ್ಬಿಸಿದ್ದು, ಪೂರ್ತಿ ಸಿನಿಮಾವನ್ನು ಕಣ್ತುಂಬಿಕೊಳ್ಳುವ ಸಮಯ ಹತ್ತಿರ ಆಗಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ಆ ಕಾರಣದಿಂದಲೂ ಚಿತ್ರದ ಮೇಲೆ ಹೈಪ್​ ಹೆಚ್ಚಿದೆ.

‘ಕಾಂತಾರ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ ರಿಷಬ್​ ಶೆಟ್ಟಿ. ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಕಿಶೋರ್​ ಕೂಡ ಒಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಈ ಸಿನಿಮಾದ ಕಥೆ ಸಾಗುತ್ತದೆ. ಹಾಗಾಗಿ ಅಲ್ಲಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ದೃಶ್ಯವೂ ಚಿತ್ರದಲ್ಲಿ ಇದೆ. ಅದರ ಮೇಕಿಂಗ್​ ವಿಡಿಯೋವನ್ನು ಇತ್ತೀಚೆಗೆ ರಿಲೀಸ್​ ಮಾಡಲಾಗಿತ್ತು.

ಅರವಿಂದ್ ಕಶ್ಯಪ್​ ಛಾಯಾಗ್ರಹಣ, ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇದು ರಾಷ್ಟ್ರ ಮಟ್ಟದಲ್ಲಿ ರಿಲೀಸ್​ ಆಗುತ್ತಿದ್ದರೂ ಕೂಡ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಲ್ಲ. ಕೇವಲ ಕನ್ನಡದಲ್ಲಿ ಮಾತ್ರ ಬಿಡುಗಡೆ ಮಾಡಲಾಗುತ್ತಿದೆ. ಗುರುವಾರ ನಡೆಯಲಿರುವ ಪ್ರೀಮಿಯರ್​ ಶೋನಲ್ಲಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕರೆ ಚಿತ್ರಕ್ಕೆ ಖಂಡಿತವಾಗಿಯೂ ದೊಡ್ಡ ಬೂಸ್ಟ್​ ಸಿಗಲಿದೆ.

ಇದನ್ನೂ ಓದಿ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
Kantara: ಧೂಳೆಬ್ಬಿಸಿದ ‘ಕಾಂತಾರ’ ಟ್ರೇಲರ್​; ಹೇಗಿದೆ ರಿಷಬ್​ ಶೆಟ್ಟಿ-ಕಿಶೋರ್​ ಮುಖಾಮುಖಿ?
Image
‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್
Image
ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

ರಿಷಬ್​ ಶೆಟ್ಟಿ ನಿರ್ದೇಶನದ ಸಿನಿಮಾ ಎಂದರೆ ಅದರಲ್ಲಿ ಏನಾದರೂ ವಿಶೇಷತೆ ಇದ್ದೇ ಇರುತ್ತದೆ ಎಂಬುದು ಪ್ರೇಕ್ಷಕರ ನಂಬಿಕೆ. ಅಷ್ಟರಮಟ್ಟಿಗೆ ಭರವಸೆ ಮೂಡಿಸುವಲ್ಲಿ ರಿಷಬ್​ ಯಶಸ್ವಿ ಆಗಿದ್ದಾರೆ. ಅಚ್ಚರಿ ಎಂದರೆ, ಈ ಸಿನಿಮಾದ ಕಥೆ ಪುನೀತ್​ ರಾಜ್​ಕುಮಾರ್​ ಅವರಿಗೂ ಇಷ್ಟ ಆಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಅವರೇ ಹೀರೋ ಆಗಿ ನಟಿಸಬೇಕಿತ್ತು. ಆದರೆ ಡೇಟ್ಸ್​ ಹೊಂದಿಕೆ ಆಗದ ಕಾರಣ ಪುನೀತ್​ ಬದಲು ರಿಷಬ್​ ಶೆಟ್ಟಿ ಅವರು ಹೀರೋ ಸ್ಥಾನಕ್ಕೆ ಬಂದರು. ಈ ವಿಚಾರವನ್ನು ಇತ್ತೀಚೆಗೆ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ ಬಹಿರಂಗ ಪಡಿಸಿದರು.

ತಾಂತ್ರಿಕವಾಗಿ ‘ಕಾಂತಾರ’ ಚಿತ್ರ ತುಂಬ ಶ್ರೀಮಂತವಾಗಿ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ದೊಡ್ಡ ಪರದೆ ಮೇಲೆ ಈ ಚಿತ್ರವನ್ನು ನೋಡಿ ಆಸ್ವಾದಿಸಲು ಕಾದಿರುವ ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಬುಕ್​ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ