AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಐಎಂಡಿಬಿಯಲ್ಲಿ ಗಮ್ಮತ್​ ರೇಟಿಂಗ್​ ಪಡೆದ ‘ಕಾಂತಾರ’; ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ರಿಷಬ್​ ಸಿನಿಮಾ

Kantara Movie: ವೀಕೆಂಡ್​ನಲ್ಲಿ ‘ಕಾಂತಾರ’ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ.

Rishab Shetty: ಐಎಂಡಿಬಿಯಲ್ಲಿ ಗಮ್ಮತ್​ ರೇಟಿಂಗ್​ ಪಡೆದ ‘ಕಾಂತಾರ’; ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ರಿಷಬ್​ ಸಿನಿಮಾ
ಕಾಂತಾರ
TV9 Web
| Edited By: |

Updated on:Oct 02, 2022 | 5:29 PM

Share

ಅಭಿಮಾನಿಗಳ ನಿರೀಕ್ಷೆಯ ಮಟ್ಟವನ್ನು ತಲುಪುವಲ್ಲಿ ‘ಕಾಂತಾರ’ (Kantara) ಸಿನಿಮಾ ಯಶಸ್ವಿ ಆಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಈ ಮೂಲಕ ನಟ-ನಿರ್ದೇಶಕ ರಿಷಬ್​ ಶೆಟ್ಟಿ (Rishab Shetty) ಅವರ ಖಾತೆಗೆ ಮತ್ತೊಂದು ಸೂಪರ್​ ಹಿಟ್​ ಚಿತ್ರ ಸೇರ್ಪಡೆ ಆದಂತೆ ಆಗಿದೆ. ಭೂತ ಕೋಲದ ಹಿನ್ನೆಲೆಯಲ್ಲಿ ಸಾಗುವ ಕಥೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ರಿಷಬ್​ ಶೆಟ್ಟಿ, ಕಿಶೋರ್​, ಸಪ್ತಮಿ ಗೌಡ, ಅಚ್ಯುತ್​ ಕುಮಾರ್​ ಮುಂತಾದವರ ನಟನೆಗೆ ಅಭಿಮಾನಿಗಳಿಂದ ಫುಲ್​ ಮಾರ್ಕ್ಸ್​ ಸಿಕ್ಕಿದೆ. ಐಎಂಡಿಬಿ (IMDb) ವೆಬ್​ಸೈಟ್​ನಲ್ಲೂ ಈ ಸಿನಿಮಾ ಉತ್ತಮ ರೇಟಿಂಗ್​ ಪಡೆದುಕೊಂಡಿದೆ. 10ಕ್ಕೆ 9.8 ರೇಟಿಂಗ್​ ಪಡೆದುಕೊಂಡಿರುವುದು ‘ಕಾಂತಾರ’ ಚಿತ್ರದ ಹೆಚ್ಚುಗಾರಿಕೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ ಭರ್ಜರಿ ಕಮಾಯಿ ಆಗುತ್ತಿದೆ.

ಸೆ.30ರಂದು ‘ಕಾಂತಾರ’ ಸಿನಿಮಾ ತೆರೆಕಂಡಿತು. ಅದಕ್ಕೂ ಮುನ್ನ ಸೆ.29ರಂದು ಅನೇಕ ಕಡೆಗಳಲ್ಲಿ ಪ್ರೀಮಿಯರ್​ ಪ್ರದರ್ಶನ ಏರ್ಪಡಿಸಲಾಗುತ್ತು. ಸಿನಿಮಾ ನೋಡಿದ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬುಕ್​ ಮೈ ಶೋನಲ್ಲಿ 9 ಸಾವಿರಕ್ಕೂ ಅಧಿಕ ಮಂದಿ ಈ ಸಿನಿಮಾಗೆ ವೋಟ್​ ಮಾಡಿದ್ದಾರೆ. ಶೇಕಡ 99 ರೇಟಿಂಗ್​ ಪಡೆಯುವ ಮೂಲಕ ಜನಮೆಚ್ಚುಗೆಯ ಚಿತ್ರವಾಗಿ ‘ಕಾಂತಾರ’ ಹೊರಹೊಮ್ಮಿದೆ. ಈ ಸಿನಿಮಾಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿದೆ. ‘ಐಎಂಡಿಬಿ ಮತ್ತು ಬುಕ್​ ಮೈ ಶೋನಲ್ಲಿ ಗಮ್ಮತ್​ ರೇಟಿಂಗ್​’ ಎಂದು ಹೊಂಬಾಳೆ ಫಿಲ್ಮ್ಸ್​ ಟ್ವೀಟ್​ ಮಾಡಿದೆ.

ಇದನ್ನೂ ಓದಿ
Image
Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ
Image
Sapthami Gowda: ಜನರ ಮಧ್ಯೆ ‘ಕಾಂತಾರ’ ನಾಯಕಿ ಸಪ್ತಮಿ ಗೌಡ ಬಿಂದಾಸ್​ ಡ್ಯಾನ್ಸ್​; ಇಲ್ಲಿದೆ ವಿಡಿಯೋ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ಕರಾವಳಿ ಹಿನ್ನೆಲೆಯಲ್ಲಿ ಸಾಗುವ ಕಥೆಯನ್ನು ಅದ್ದೂರಿಯಾಗಿ ತೆರೆಗೆ ತರಲಾಗಿದೆ. ತಾಂ​ತ್ರಿಕವಾಗಿ ಈ ಚಿತ್ರ ತುಂಬ ಶ್ರೀಮಂತವಾಗಿದೆ. ಅಜನೀಶ್​ ಬಿ. ಲೋಕನಾಥ್​ ಅವರ ಸಂಗೀತ ನಿರ್ದೇಶನ, ಅರವಿಂದ್​ ಕಶ್ಯಪ್​ ಛಾಯಾಗ್ರಹಣ ಗಮನ ಸೆಳೆಯುತ್ತಿದೆ. ರೋಚಕವಾದ ಕ್ಲೈಮ್ಯಾಕ್ಸ್​ ದೃಶ್ಯ ಕಂಡು ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಟಾಲಿವುಡ್​ ಸ್ಟಾರ್​ ನಟ ಪ್ರಭಾಸ್​, ‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್​ ನೀಲ್​, ನಟಿ ರಮ್ಯಾ ಮುಂತಾದವರು ಈ ಚಿತ್ರವನ್ನು ಕೊಂಡಾಡಿದ್ದಾರೆ.

ವೀಕೆಂಡ್​ ದಿನವಾದ ಶನಿವಾರ (ಅ.1) ಮತ್ತು ಭಾನುವಾರ (ಅ.2) ಅನೇಕ ಕಡೆಗಳಲ್ಲಿ ಹೌಸ್​ ಫುಲ್​ ಪ್ರದರ್ಶನ ಕಂಡಿದೆ. ಇದರಿಂದ ಚಿತ್ರಕ್ಕೆ ಭರ್ಜರಿ ಕಮಾಯಿ ಆಗಿದೆ. ಬಾಯಿ ಮಾತಿನ ಪ್ರಚಾರ ಉತ್ತಮವಾಗಿ ಸಿಗುತ್ತಿರುವುದು ಚಿತ್ರತಂಡಕ್ಕೆ ಪ್ಲಸ್​ ಪಾಯಿಂಟ್​ ಆಗಿದೆ. ಮುಂದಿನ ದಿನಗಳಲ್ಲಿ ಈ ಸಿನಿಮಾ ಇನ್ನಷ್ಟು ಕಲೆಕ್ಷನ್​ ಮಾಡುವುದು ಖಚಿತ.

ಹೀರೋ ಮತ್ತು ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ರಿಷಬ್​ ಶೆಟ್ಟಿ ಅವರಿಗೆ ಸಖತ್ ಬೇಡಿಕೆ ಇದೆ. ಪ್ರತಿ ಸಿನಿಮಾದಲ್ಲಿಯೂ ಅವರು ಡಿಫರೆಂಟ್​ ಪ್ರಯತ್ನ ಮಾಡುತ್ತಾರೆ. ‘ಕಾಂತಾರ’ ಚಿತ್ರದಲ್ಲಿ ಅವರು ಮಾಡಿರುವ ಶಿವ ಎಂಬ ಪಾತ್ರ ಆಕರ್ಷಕವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:26 pm, Sun, 2 October 22

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ