ಹೊಸ ಪ್ರಯತ್ನಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ; ಕನಸು ಹುಟ್ಟಿದ ಊರಿನ ಹೆಸರಿಟ್ಟ ನಟ

Kerady Studios: 'ಕೆರಾಡಿ ಸ್ಟುಡಿಯೋಸ್' ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ’ ಎಂದು ಪತ್ರ ಆರಂಭಿಸಿದ್ದಾರೆ ರಿಷಬ್

ಹೊಸ ಪ್ರಯತ್ನಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ; ಕನಸು ಹುಟ್ಟಿದ ಊರಿನ ಹೆಸರಿಟ್ಟ ನಟ
ರಿಷಬ್ ಶೆಟ್ಟಿ

Updated on: May 25, 2023 | 10:13 AM

ಸೋಶಿಯಲ್ ಮೀಡಿಯಾದಲ್ಲಿ ರಿಷಬ್ ಶೆಟ್ಟಿ (Rishab Shetty) ಹೊಸ ಘೋಷಣೆ ಮಾಡಿದ್ದಾರೆ.  ‘ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ (Kerady Studios) ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ’ ಎಂದು ಪತ್ರ ಆರಂಭಿಸಿದ್ದಾರೆ ರಿಷಬ್.

‘ಅಂದ ಹಾಗೆ ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಕೋರಿದ್ದಾರೆ.

ರಿಷಬ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಮೂರೂ ಕ್ಷೇತ್ರದಲ್ಲಿ ಅವರು ಯಶಸ್ಸು ಕಂಡಿದ್ದಾರೆ. ಈಗ ಅವರು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅವರು ಸಿನಿಮಾಗಳ ಪ್ರಚಾರ ಹಾಗೂ ಅದಕ್ಕೆ ಸಂಬಂಧಿಸಿದ ಇತರ ಸೇವೆಗಳನ್ನು ನೀಡಲು ಹೊಸ ವೇದಿಕೆ ಕಟ್ಟಿದ್ದಾರೆ. ಈ ವಿಚಾರವನ್ನು ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಅವರ ಹೊಸ ಪ್ರಯತ್ನಕ್ಕೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ. ಅವರು ಈ ಕ್ಷೇತ್ರದಲ್ಲೂ ಯಶಸ್ಸು ಕಾಣಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಇದನ್ನೂ ಓದಿ: ‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿಗೆ ಹೆಚ್ಚಾಯ್ತು ದೇವರ ಮೇಲಿನ ಭಕ್ತಿ

ರಿಷಬ್ ಶೆಟ್ಟಿ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಆರಂಭದಲ್ಲಿ ಪೋಷಕ ಪಾತ್ರ ಮಾಡುತ್ತಿದ್ದ ಅವರು ನಂತರ ಹೀರೋ ಆದರು. ‘ರಿಕ್ಕಿ’ ಚಿತ್ರದಿಂದ ನಿರ್ದೇಶಕರಾದರು. ‘ಕಿರಿಕ್ ಪಾರ್ಟಿ’ ಅವರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿತು. 2018ರಲ್ಲಿ ರಿಲೀಸ್ ಆದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದ ಮೂಲಕ ನಿರ್ಮಾಪಕನಾಗಿ ದೊಡ್ಡ ಯಶಸ್ಸು ಕಂಡರು. ಇತ್ತೀಚೆಗೆ ರಿಲೀಸ್ ಆದ ‘ಕಾಂತಾರ’ ಸಿನಿಮಾ ರಿಷಬ್ ಖ್ಯಾತಿಯನ್ನು ಹೆಚ್ಚಿಸಿದೆ. ಅವರು ದೇಶಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಿನಿಮಾ ಪ್ರಚಾರದಲ್ಲೂ ತೊಡಗಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:49 am, Thu, 25 May 23

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us