AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್ ಇವೆಂಟ್​ನಲ್ಲಿ ಕನ್ನಡ ಮತ್ತು ಕಾಂತಾರದ ಕಂಪು ಹರಡಿಸಿದ ರಿಷಬ್

Rishab Shetty: ಅಮೆಜಾನ್ ಪ್ರೈಂ ವಿಡಿಯೋ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿದ್ದ ರಿಷಬ್ ಶೆಟ್ಟಿ, ವೇದಿಕೆ ಮೇಲೆ ಕನ್ನಡ ಹಾಗೂ ‘ಕಾಂತಾರ’ದ ಕಂಪು ಹರಡಿದ್ದಾರೆ.

ಅಮೆಜಾನ್ ಇವೆಂಟ್​ನಲ್ಲಿ ಕನ್ನಡ ಮತ್ತು ಕಾಂತಾರದ ಕಂಪು ಹರಡಿಸಿದ ರಿಷಬ್
ರಿಷಬ್ ಶೆಟ್ಟಿ
ಮಂಜುನಾಥ ಸಿ.
|

Updated on: Mar 20, 2024 | 11:21 AM

Share

ಕಾಂತಾರ’ (Kantara) ಸಿನಿಮಾ ರಿಷಬ್ ಶೆಟ್ಟಿ (Rishab Shetty) ಅವರನ್ನು ಬಹು ಎತ್ತರಕ್ಕೆ ಏರಿಸಿದೆ. ಹಲವು ಅತ್ಯುತ್ತಮರ ಸಾಲಿನಲ್ಲಿ ರಿಷಬ್​ರನ್ನು ‘ಕಾಂತಾರ’ ಸಿನಿಮಾ ನಿಲ್ಲಿಸಿದೆ. ‘ಕಾಂತಾರ’ ಸಿನಿಮಾ ಬಿಡುಗಡೆ ಆಗಿ ಎರಡು ವರ್ಷಗಳಾಗುತ್ತಾ ಬಂದಿದೆ. ಆದರೆ ಈಗಲೂ ಅದರ ಹವಾ ಹಾಗೆಯೇ ಇದೆ. ನಿನ್ನೆಯಷ್ಟೆ ಅಮೆಜಾನ್ ಪ್ರೈಂ ವಿಡಿಯೋ ಮುಂಬೈನಲ್ಲಿ ಅದ್ಧೂರಿಯಾ ಕಾರ್ಯಕ್ರಮವೊಂದನ್ನು ಮಾಡಿದ್ದು, ‘ಕಾಂತಾರ 2’ ಸಿನಿಮಾ ತಮ್ಮದೇ ಒಟಿಟಿ ವೇದಿಕೆಯಲ್ಲಿ ಪ್ರಸಾರಗೊಳ್ಳಲಿರುವ ಸುದ್ದಿ ಪ್ರಕಟಿಸಿದೆ. ಹಲವು ಚಿತ್ರರಂಗಗಳ ದೊಡ್ಡ ಸ್ಟಾರ್​ಗಳು ಭಾಗಿಯಾಗಿದ್ದ ಈ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಭಾಗಿಯಾಗಿದ್ದು, ವೇದಿಕೆ ಮೇಲೆ ಕನ್ನಡದ ಕಂಪು ಹರಿಸಿದ್ದು ವಿಶೇಷವಾಗಿತ್ತು.

ರಿಷಬ್ ಶೆಟ್ಟಿ ವೇದಿಕೆಗೆ ಬರುವ ಮುಂಚೆಯೇ ‘ಕಾಂತಾರ’ ಸಿನಿಮಾದ ವರಾಹ ರೂಪಂ ಹಾಡಿಗೆ ಯಕ್ಷಗಾನ ಪ್ರದರ್ಶನ ನಡೆಯಿತು. ಬಳಿಕ ಅಮೆಜಾನ್​ ಭಾರತದ ಆಡಳಿತ ವರ್ಗದ ಮುಖ್ಯಸ್ಥ ಹಾಗೂ ಬಾಲಿವುಡ್ ನಟ ವರುಣ್ ಧವನ್ ಅವರುಗಳು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಗ್ರೂಪ್​ನ ಸಹ ಸಂಸ್ಥಾಪಕ, ನಿರ್ಮಾಪಕ ಚೆಲುವೆ ಗೌಡ ಅವರುಗಳನ್ನು ವೇದಿಕೆಗೆ ಬರಮಾಡಿಕೊಂಡರು.

‘ಎಲ್ಲರಿಗೂ ನಮಸ್ಕಾರ’ ಎನ್ನುತ್ತಾ ಕನ್ನಡದಲ್ಲಿಯೇ ಮಾತು ಆರಂಭಿಸಿದ ರಿಷಬ್ ಶೆಟ್ಟಿ, ‘ನಾನು ನಟನೆಯನ್ನು ಆರಂಭಿಸಿದ್ದು ಯಕ್ಷಗಾನದಿಂದಲೇ ಆರಂಭಿಸಿದ್ದೆ. ನಮ್ಮ ಊರಿನ ಜನಪದ ಕತೆಗಳನ್ನು ಹೇಳುವ ಹಂಬಲ ನನಗೆ ಬಹಳ ಮೊದಲಿನಿಂದಲೂ ಇತ್ತು. ನಾನು ದ್ವಿತೀಯ ಪಿಯುಸಿ ಓದುವಾಗಲೇ ನನ್ನ ತಲೆಯಲ್ಲಿ ‘ಕಾಂತಾರ’ ಸಿನಿಮಾದ ಎರಡು ಭಾಗಗಳ ಕತೆ ಇತ್ತು. ಅದಾದ ಬಳಿಕ ನಾನು ಫಿಲಂ ಮೇಕರ್ ಆದ ನಂತರ ಚಿತ್ರಕತೆ ಬರೆದುಕೊಂಡೆ. ಆ ಬಳಿಕ ನನಗೆ ಹೊಂಬಾಳೆ ಸಿಕ್ತು, ಅದು ನನ್ನ ಸೌಭಾಗ್ಯ’ ಎಂದಿದ್ದಾರೆ ರಿಷಬ್.

ಇದನ್ನೂ ಓದಿ:‘ಕಾಂತಾರ’ ಬಳಿಕ ಮತ್ತೆ ತಾಯಿ ಪಾತ್ರ ಮಾಡಿದ ಮಾನಸಿ ಸುಧೀರ್​; ಆದರೆ ಒಂದು ಟ್ವಿಸ್ಟ್​

‘ನಾವು ‘ಕಾಂತಾರ’ ಸಿನಿಮಾದ ಚಿತ್ರೀಕರಣ ಮಾಡುವಾಗಲೇ ನಾವು ಇದರ ಸೀಕ್ವೆಲ್ ಮಾಡುವ ಬಗ್ಗೆ ಯೋಜಿಸಿದ್ದೆವು. ಇನ್ನು ‘ಕಾಂತಾರ’ ಸಿನಿಮಾ ಬಿಡುಗಡೆ ಆದ ಬಳಿಕ ಭಾರತದ ಪ್ರೇಕ್ಷಕರು ಆ ಸಿನಿಮಾಕ್ಕೆ ಕೊಟ್ಟ ಗೌರವ ಬಹಳ ದೊಡ್ಡದು. ಅದು ನನ್ನ ಪುಣ್ಯವೆಂದೇ ನಾನು ಭಾವಿಸಿದ್ದೀನಿ. ಸದ್ಯಕ್ಕೆ ‘ಕಾಂತಾರ 2’ಗಾಗಿ ನಮ್ಮ ಊರಿನ ಬಳಿಯೇ ದೊಡ್ಡದಾದ ಸೆಟ್ ನಿರ್ಮಾಣ ಮಾಡಿದ್ದೇವೆ. ಮುಂದಿನ ತಿಂಗಳಿನಿಂದ ನಾವು ಚಿತ್ರೀಕರಣ ಮಾಡಲಿದ್ದೇವೆ’ ಎಂದಿದ್ದಾರೆ.

ಇನ್ನು ಹೊಂಬಾಳೆ ಫಿಲ್ಮ್ಸ್​ನ ಸಹ ನಿರ್ಮಾಪಕ ಆಗಿರುವ ಚೆಲುವೇ ಗೌಡ ಮಾತನಾಡಿ, ‘ನಾವು ‘ಕಾಂತಾರ’ ಅಥವಾ ಇನ್ಯಾವುದೇ ಕತೆಯನ್ನು ನಾವು ಆಯ್ಕೆ ಮಾಡುವಾಗ ನಾವು ಪ್ರೇಕ್ಷಕರಿಗೆ ಏನು ಭಿನ್ನವಾಗಿ ನೀಡುತ್ತಿದ್ದೇವೆ ಎಂಬುದನ್ನು ನೋಡುತ್ತೇವೆ. ನಾವು ‘ಕಾಂತಾರ’ ಕತೆ ಕೇಳಿದಾಗ, ಇದು ನೆಲದ ಕತೆ ಅದರಲ್ಲಿಯೂ ಕರಾವಳಿ ಭಾಗದ ಸಂಸ್ಕೃತಿಯ ಎಂಬುದನ್ನು ಗುರುತಿಸಿದೆವು. ಆ ಕತೆಯನ್ನು ದೊಡ್ಡ ಸಂಖ್ಯೆಯ ಅಥವಾ ಇತರೆ ಭಾಗದ ಜನರಿಗೆ ತೋರಿಸುವ ಉದ್ದೇಶದಿಂದ ಆ ಪ್ರಾಜೆಕ್ಟ್​ ಮೇಲೆ ಬಂಡವಾಳ ತೊಡಗಿಸಿದೆವು. ಯಾವುದು ಹೆಚ್ಚು ಪ್ರಾದೇಶಿಕವೋ ಅದೇ ಹೆಚ್ಚು ವಿಶ್ವಮಾನ್ಯ ಎಂಬುದು ನಮ್ಮ ಹಾಗೂ ರಿಷಬ್​ರ ನಂಬಿಕೆ’ ಎಂದಿದ್ದಾರೆ.

‘ಕಾಂತಾರ’ ಸಿನಿಮಾ ಈಗಾಗಲೇ ಅಮೆಜಾನ್ ಪ್ರೈಂನಲ್ಲಿ ಸ್ಟ್ರೀಂ ಆಗುತ್ತಿದೆ. ‘ಕಾಂತಾರ 2’ ಸಹ ಅಮೆಜಾನ್ ಪ್ರೈಂನಲ್ಲಿಯೇ ಸ್ಟ್ರೀಮ್ ಆಗಲಿದೆ. ‘ಕಾಂತಾರ’ ಮಾತ್ರವೇ ಅಲ್ಲದೆ ತೆಲುಗು, ತಮಿಳು ಹಾಗೂ ಹಿಂದಿಯ ಹಲವು ದೊಡ್ಡ ಬಜೆಟ್​ನ ಸಿನಿಮಾಗಳನ್ನು ಇನ್ನೂ ಬಿಡುಗಡೆ ಆಗುವ ಮುಂಚೆಯೇ ಅಮೆಜಾನ್ ಪ್ರೈಂ ವಿಡಿಯೋ ಖರೀದಿ ಮಾಡಿ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​