AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರ ಬಗೆಗಿನ ಗ್ರಹಿಕೆ ಬಗ್ಗೆ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ

ರಿಷಬ್ ಅವರು ‘ಕಾಂತಾರ’ ಸಿನಿಮಾದಲ್ಲಿ ದೈವ ಹಾಗೂ ಭೂತಾರಾಧನೆಯ ವಿಚಾರಗಳನ್ನು ಹೇಳಿದ್ದಾರೆ. ಇದೆಲ್ಲವೂ ದೇವರಿಗೆ ಸಂಬಂಧಿಸಿದ್ದು. ಹೀಗಾಗಿ, ಈ ಕುರಿತು ರಿಷಬ್ ಶೆಟ್ಟಿಗೆ ಪ್ರಶ್ನೆ ಎದುರಾಗಿದೆ.

ದೇವರ ಬಗೆಗಿನ ಗ್ರಹಿಕೆ ಬಗ್ಗೆ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ
ರಿಷಬ್
TV9 Web
| Edited By: |

Updated on:Nov 25, 2022 | 12:02 PM

Share

ಗೋವಾದಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವ (IFFI ) ನಡೆಯುತ್ತಿದೆ. ದೇಶದ ವಿವಿಧ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರು, ನಿರ್ದೇಶಕರು ಇದರಲ್ಲಿ ಭಾಗಿ ಆಗುತ್ತಿದ್ದಾರೆ. ಇತ್ತೀಚೆಗೆ ‘ದಿ ಕಾಶ್ಮೀರ್ ಫೈಲ್ಸ್’ ಖ್ಯಾತಿಯ ವಿವೇಕ್​ ಅಗ್ನಿಹೋತ್ರಿ ಇದರಲ್ಲಿ ಪಾಲ್ಗೊಂಡು ತಮ್ಮ ವಿಚಾರಗಳನ್ನು ಹಂಚಿಕೊಂಡಿದ್ದರು. ‘ಕಾಂತಾರ’ ಚಿತ್ರದ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ರಿಷಬ್ ಶೆಟ್ಟಿ (Rishab Shetty) ಕೂಡ ಇದರಲ್ಲಿ ಭಾಗಿ ಆಗಿದ್ದರು. ಅಲ್ಲಿ ಹಲವು ವಿಚಾರಗಳ ಕುರಿತು ಅವರು ಮಾತನಾಡಿದ್ದಾರೆ. ರಿಷಬ್ ಅವರನ್ನು ನೋಡುತ್ತಿದ್ದಂತೆ ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಬಳಿ ಸೆಲ್ಫಿಗೆ ಅವರು ಮುಗಿ ಬಿದ್ದಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.

ರಿಷಬ್ ಶೆಟ್ಟಿ ಅವರು ವಿವಿಧ ಶೈಲಿಯ ಸಿನಿಮಾ ಮಾಡಿದ್ದಾರೆ. ಇದರ ಆಯ್ಕೆ ಹೇಗೆ ಎಂಬ ಬಗ್ಗೆ ರಿಷಬ್ ಮಾತನಾಡಿದ್ದಾರೆ. ‘ನಾನು ಸಿನಿಮಾ ಮಾಡುವಾಗ ಯಾವ ಶೈಲಿಯ ಚಿತ್ರ ಮಾಡಬೇಕು ಎಂಬುದನ್ನು ಯೋಚಿಸುವುದಿಲ್ಲ. ನಾನು ಅಜ್ಜಿ ಹೇಳುವ ಕಥೆಗಳಿಂದ ಪ್ರಭಾವಕ್ಕೆ ಒಳಗಾಗಿದ್ದೇನೆ. ಹೀಗಾಗಿ, ಸ್ಕ್ರಿಪ್ಟ್ ಬರೆಯುವಾಗ ಅದನ್ನು ತಲೆಯಲ್ಲಿ ಇಟ್ಟುಕೊಂಡಿರುತ್ತೇನೆ’ ಎಂದಿದ್ದಾರೆ ರಿಷಬ್.

ರಿಷಬ್ ಅವರು ‘ಕಾಂತಾರ’ ಸಿನಿಮಾದಲ್ಲಿ ದೈವ ಹಾಗೂ ಭೂತಾರಾಧನೆಯ ವಿಚಾರಗಳನ್ನು ಹೇಳಿದ್ದಾರೆ. ಇದೆಲ್ಲವೂ ದೇವರಿಗೆ ಸಂಬಂಧಿಸಿದ್ದು. ಹೀಗಾಗಿ, ಈ ಕುರಿತು ರಿಷಬ್ ಶೆಟ್ಟಿಗೆ ಪ್ರಶ್ನೆ ಎದುರಾಗಿದೆ. ದೇವರು ಅಂದರೆ ನಿಮ್ಮ ಗ್ರಹಿಕೆ ಏನು ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ರಿಷಬ್ ‘ಸಿನಿಮಾ ದೇವರು. ನನಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದ್ದು ಸಿನಿಮಾ. ನನ್ನನ್ನು ಇಲ್ಲಿಯವರೆಗೆ ಕರೆ ತಂದಿದ್ದು ಸಿನಿಮಾ’ ಎಂದಿದ್ದಾರೆ ರಿಷಬ್.

ಇದನ್ನೂ ಓದಿ
Image
‘ವರಾಹ ರೂಪಂ..’ ವಿವಾದ: ಹೊಂಬಾಳೆ​​ಗೆ ಹಿನ್ನಡೆ; ಮೇಲ್ಮನವಿ ಅರ್ಜಿ ವಜಾ ಮಾಡಿದ ಕೇರಳ ಹೈಕೋರ್ಟ್​
Image
Kantara: ‘ಕಾಂತಾರ’ ಚಿತ್ರದಿಂದ ಅಲ್ಲು ಅರ್ಜುನ್​ ತಂದೆಗೆ ಭಾರಿ ಲಾಭ; ಎಷ್ಟಕ್ಕೆ ನಡೆಯಿತು ತೆಲುಗು ವ್ಯವಹಾರ?
Image
Rishab Shetty: ಒಂದೇ ದಿನಕ್ಕೆ 15 ಕೋಟಿ ರೂಪಾಯಿ ಬಾಚಿದ ‘ಕಾಂತಾರ’; ಪರಭಾಷೆಯಲ್ಲಿ ಭರ್ಜರಿ ಕಮಾಯಿ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ

ಕಾಂತಾರಾ ಸೂಪರ್ ಹಿಟ್

ಕೇವಲ 15 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರ ಈಗ ಒಟಿಟಿಯಲ್ಲಿ ರಿಲೀಸ್ ಆಗಿ ಅಬ್ಬರಿಸುತ್ತಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ‘ವರಾಹ ರೂಪಂ..’ ಹಾಡು ವಿವಾದ ಸೃಷ್ಟಿ ಮಾಡಿತ್ತು. ಈಗ ಈ ಹಾಡಿನ ಟ್ಯೂನ್ ಬದಲಿಸಿ ಒಟಿಟಿಯಲ್ಲಿ ರಿಲೀಸ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:52 am, Fri, 25 November 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?