AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಕಾಂತಾರ 2’ ಚಿತ್ರಕ್ಕೆ ರಿಷಬ್ ಶೆಟ್ಟಿ ಪಡೆಯುತ್ತಿರೋ ಸಂಭಾವನೆ ಇಷ್ಟೊಂದಾ?

15 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿತು. ಈಗ ‘ಕಾಂತಾರ 2’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

Rishab Shetty: ‘ಕಾಂತಾರ 2’ ಚಿತ್ರಕ್ಕೆ ರಿಷಬ್ ಶೆಟ್ಟಿ ಪಡೆಯುತ್ತಿರೋ ಸಂಭಾವನೆ ಇಷ್ಟೊಂದಾ?
ರಿಷಬ್
ರಾಜೇಶ್ ದುಗ್ಗುಮನೆ
|

Updated on: Mar 24, 2023 | 8:30 AM

Share

ರಿಷಬ್ ಶೆಟ್ಟಿ ಅವರು ‘ಕಾಂತಾರಾ 2’ ಸಿನಿಮಾ (Kantara 2) ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಚಿತ್ರದ ಸ್ಕ್ರಿಪ್ಟ್ ಬರೆಯುವ ಕೆಲಸ ಆರಂಭ ಆಗಿದೆ. ಮಳೆಗಾಲದಲ್ಲಿ ಈ ಚಿತ್ರದ ಶೂಟಿಂಗ್ ಪ್ರಾರಂಭ ಆಗುವ ನಿರೀಕ್ಷೆ ಇದೆ. ಈ ಚಿತ್ರಕ್ಕಾಗಿ ರಿಷಬ್ ಶೆಟ್ಟಿ (Rishab Shetty) ಎಷ್ಟು ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಕೆಲ ಸುದ್ದಿಗಳು ಹುಟ್ಟಿಕೊಂಡಿವೆ. ಇದನ್ನು ರಿಷಬ್ ಅಧಿಕೃತ ಮಾಡಿಲ್ಲ. ಆದರೆ, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಅಂತೂ ನಡೆಯುತ್ತಿದೆ.

‘ಕಾಂತಾರ’ ಸಿನಿಮಾ ಕಳೆದ ವರ್ಷ ಸೆಪ್ಟೆಂಬರ್ 30ರಂದು ರಿಲೀಸ್ ಆಯಿತು. ಮೊದಲು ಕನ್ನಡದಲ್ಲಿ ಮಾತ್ರ ಸಿನಿಮಾ ತೆರೆಗೆ ಬಂತು. ಆ ಬಳಿಕ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಪರಭಾಷೆಗೂ ಡಬ್ ಮಾಡುವ ಕೆಲಸ ಆಯಿತು. ಅಲ್ಲಿಯೂ ಈ ಸಿನಿಮಾ ಒಳ್ಳೆಯ ಕಮಾಯಿ ಮಾಡಿತು. ಕೇವಲ 15 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿತು. ಈಗ ‘ಕಾಂತಾರ 2’ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕಾಗಿ ರಿಷಬ್ ಶೆಟ್ಟಿ ಅವರು ತಮ್ಮ ಸಂಭಾವನೆ ಕೂಡ ಹೆಚ್ಚಿಸಿಕೊಂಡಿದ್ದಾರೆ.

‘ಕಾಂತಾರ’ ಸಂಭಾವನೆ ಎಷ್ಟು?

‘ಕಾಂತಾರ’ ಚಿತ್ರಕ್ಕೆ ರಿಷಬ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಬರೆದಿದ್ದರು. ಸಿನಿಮಾ ನಿರ್ದೇಶಿಸಿ, ನಟಿಸಿದ್ದರು. ಈ ಚಿತ್ರದ ನಟನೆ ಹಾಗೂ ನಿರ್ದೇಶನಕ್ಕೆ ಫುಲ್ ಮಾರ್ಕ್ಸ್ ಗಿಟ್ಟಿಸಿಕೊಂಡರು. ಈ ಚಿತ್ರಕ್ಕೆ ಅವರು ಪಡೆದ ಸಂಭಾವನೆ 5 ಕೋಟಿ ರೂಪಾಯಿ ಎನ್ನಲಾಗಿದೆ. ‘ಕಾಂತಾರ ಗೆದ್ದ ನಂತರ ಹೊಂಬಾಳೆ ಸಂಸ್ಥೆ ತಂಡದವರಿಗೆ ಮತ್ತೊಮ್ಮೆ ಹಣ ನೀಡಿದ್ದಾರೆ’ ಎಂದು ರಿಷಬ್ ಶೆಟ್ಟಿ ಈ ಮೊದಲು ಹೇಳಿದ್ದರು. ರಿಷಬ್​ಗೆ ಆಗ ಎಷ್ಟು ಹಣ ಸಿಕ್ಕಿದೆ ಎಂಬುದು ರಿವೀಲ್ ಆಗಿಲ್ಲ.

ಇದನ್ನೂ ಓದಿ: Rishab Shetty: ವಿಶ್ವಸಂಸ್ಥೆ ತಲುಪಿದ ಕಾಂತಾರ, ಕನ್ನಡದಲ್ಲಿ ಮಾತನಾಡಲಿರುವ ರಿಷಬ್ ಶೆಟ್ಟಿ

‘ಕಾಂತಾರ 2’ ಸಂಭಾವನೆ ಎಷ್ಟು?

‘ಕಾಂತಾರ 2’ ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿದೆ. ಇದರ ಜೊತೆಗೆ ಅವರ ಸಂಭಾವನೆ ಕೂಡ ಹೆಚ್ಚಿದೆ. ‘ಕಾಂತಾರ 2’ ಚಿತ್ರಕ್ಕಾಗಿ ರಿಷಬ್ 30-50 ಕೋಟಿ ರೂ. ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ. ನಿರ್ದೇಶನ, ನಟನೆ, ಕಥೆ, ಚಿತ್ರಕಥೆ ಎಲ್ಲವೂ ಸೇರಿ ಅವರು ಇಷ್ಟು ಹಣ ಪಡೆಯುತ್ತಿದ್ದಾರೆ. ಈ ವಿಚಾರದ ಬಗ್ಗೆ ರಿಷಬ್ ಆಗಲಿ, ನಿರ್ಮಾಣ ಸಂಸ್ಥೆ ಹೊಂಬಾಳೆಯಾಗಲೀ ಅಧಿಕೃತ ಹೇಳಿಕೆ ನೀಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ